ಬ್ಯಾಟರಿ ಚಾಲಿತ ಇ- ಬಸ್‌ ಮಂಗಳೂರಿಗೂ ಬರಲಿ


Team Udayavani, Sep 30, 2018, 1:53 PM IST

30-sepctember-12.gif

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದ ಸ್ವಂತ ವಾಹನ ಚಾಲನೆ ಮಾತ್ರವಲ್ಲ ಸಾರ್ವಜನಿಕ ವಾಹನ ಸೇವೆಯೂ ದುಬಾರಿಯಾಗಿದೆ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ತಾವು ದುಡಿದ ಹಣವೆಲ್ಲ ಪೆಟ್ರೋಲ್‌, ಡೀಸೆಲ್‌ ಗೆ ವ್ಯಯಿಸಬೇಕಲ್ಲ ಎಂದು ಯೋಚಿಸಿ ಸಾರ್ವಜನಿಕ ವಾಹನಗಳನ್ನೇ ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ. ದೇಶಾದ್ಯಂತ ಇಂದು ಸಾರ್ವಜನಿಕ ಬಸ್‌ ಸಂಚಾರ ವ್ಯಾಪಕವಾಗಿ ಬೆಳೆದಿದೆ. ಬೆಂಗಳೂರು, ಮಂಗಳೂರು ಹಾಗೂ ಮೈಸೂರು, ಹುಬ್ಬಳ್ಳಿಯಂಥ ಮಹಾನಗರಗಳಲ್ಲಿ ದಿನದಿಂದ ದಿನಕ್ಕೆ ಸಾರ್ವಜನಿಕ ಸಾರಿಗೆ ಹೆಚ್ಚು ಬಳಕೆಯಾಗುತ್ತಿದೆ. ದಿನಕ್ಕೆ ಸಾವಿರಕ್ಕೂ ಅಧಿಕ ಇಂಧನ ಚಾಲಿತ ಬಸ್‌ಗಳು ನಗರದಲ್ಲಿ ಓಡಾಡುತ್ತವೆ. ಇಂಧನ ಚಾಲಿತ ವಾಹನಗಳು ಉಗುಳುವ ಹೊಗೆಯಿಂದಾಗಿ ನಗರಗಳಲ್ಲಿ ವಾಯು ಮಾಲಿನ್ಯಕ್ಕೂ ದಾರಿಯಾಗುತ್ತಿದೆ. ಇಂಧನ ಚಾಲಿತ ವಾಹನಗಳೂ ಹೊರಹಾಕುವ ಹೊಗೆ ಹಾಗೂ ಶಬ್ದದಿಂದಾಗಿ ಬಹುತೇಕ ನಗರಗಳ ಸೌಂದರ್ಯ ಹಾಗೂ ಶಾಂತಿಗೂ ಧಕ್ಕೆ ಉಂಟಾಗುತ್ತಿದೆ. ಇದಕ್ಕೆ ಪರಿಹಾರ ಹಾಗೂ ಪರ್ಯಾಯ ಯೋಚನೆಗಳು ಬಂದಾಗ ಸಿಕ್ಕಿದ್ದು ಪರಿಸರ ಸ್ನೇಹಿ, ಸಂಚಾರ ಸ್ನೇಹಿ ಇ-ಬಸ್‌ ಸೌಲಭ್ಯಗಳು. 

ಏನಿದು ಇ-ಬಸ್‌ ?
ಪರಿಸರ ಸ್ನೇಹಿಯಾದ ಇ- ಬಸ್‌ ಇದು ಡೀಸೆಲ್‌, ಪೆಟ್ರೋಲ್‌ ಇಂಧನ ಮುಕ್ತ ತಂತ್ರಜ್ಞಾನಾಧರಿತ ಎಲೆಕ್ಟ್ರಾನಿಕ್‌ ಚಾಲಿತ ಬಸ್‌ ಸಂಚಾರ. ಈ ಬಸ್‌ ಗಳಿಗೆ ಯಾವುದೇ ಇಂಧನ ಹಾಕಿ ಓಡಿಸುವ ಆವಶ್ಯಕತೆ ಇಲ್ಲ. ಇ-ಬಸ್‌ ಗಳಿಗೆ ಎಲೆಕ್ಟ್ರಾನಿಕ್‌ ಬ್ಯಾಟರಿಗಳನ್ನು ಅಳವಡಿಸಲಾಗಿರುತ್ತದೆ. ಈ ಬ್ಯಾಟರಿಗಳನ್ನು ಚಾರ್ಚ್‌ ಮಾಡಿದರೆ ಸಾಕು, ಬಸ್‌ ಸಂಚಾರಕ್ಕೆ ಸಿದ್ಧವಾಗಿರುತ್ತದೆ. ಈ ಮಾದರಿಯೇ ಇ-ಬಸ್‌. ಇದರಿಂದಾಗಿ ಡಿಸೇಲ್‌, ಪೆಟ್ರೋಲ್‌ ದರಗಳು ಎಷ್ಟೇ ಗಗನಕ್ಕೇರಿದರೂ, ಬಸ್‌ ಪ್ರಯಾಣಿಕರಿಗೆ ಮಾತ್ರವಲ್ಲ ಬಸ್‌ ಚಾಲಕ, ಮಾಲಕರಿಗೆ ಇದರ ದರದ ಬಿಸಿ ತಟ್ಟುವುದಿಲ್ಲ. ಇದೊಂದು ಪರಿಸರ ಸ್ನೇಹಿ ಮಾದರಿಯಾಗಿದ್ದು, ಇಂಧನ ಚಾಲಿತ ವಾಹನಗಳು ಹೊರ ಹಾಕುವ ಹೊಗೆಯಂತೆ, ಇ- ಬಸ್‌ಗಳು ಹೊಗೆ ಬೀಡುವುದಿಲ್ಲ. ಪರಿಸರವನ್ನು ಕೂಡ ನಾವು ಸಂರಕ್ಷಣೆ ಮಾಡಬಹುದು. 

ಚೀನ ಮಾದರಿ ನಡೆ
ಇ-ಬಸ್‌ ತಂತ್ರಜ್ಞಾನಾಧಾರಿತ ಸಂಚಾರವನ್ನೂ ಪರಿಣಾಮಕಾರಿಯಾಗಿ ಜಾರಿಗೊಳಿಸಿರುವುದರಲ್ಲಿ ಚೀನ, ಜಪಾನ್‌ ಹಾಗೂ ಸಿಂಗಾಪುರ್‌ ಮುಂಚೂಣಿಯಲ್ಲಿವೆ. ಚೀನ ದೇಶದ ಶೇನ್‌ಝೆನ್‌ ಎಂಬ ನಗರದಲ್ಲಿ ಇಡೀ ನಗರದ ತುಂಬೆಲ್ಲ ಇ- ಬಸ್‌ಗಳೇ ಓಡಾಡುತ್ತವೆ. ಈ ನಗರದಲ್ಲಿ 16,359 ಇ-ಬಸ್‌ಗಳು ಇವೆ. ಇದು ಜಗತ್ತಿಗೆ ಮಾದರಿಯಾಗಿದೆ.

ಇತ್ತೀಚೆಗೆಷ್ಟೇ ರಾಜ್ಯ ಸರಕಾರವೂ ಇ-ಬಸ್‌ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸಲು, ಚಿಂತನೆ ನಡೆಸುತ್ತಿದೆ. ಈಗಾಗಲೇ ಬೆಂಗಳೂರಿನಲ್ಲಿ ಇ-ಬಸ್‌ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದ್ದು, ಆದರೆ ಇದು ರಾಜಾದ್ಯಂತ ವಿಸ್ತರಣೆಯಾಗಿಲ್ಲ. ಹೀಗಾಗಿ ಸ್ಮಾರ್ಟ್‌ ಸಿಟಿ ನಗರಿಯಾಗಿ ಆಯ್ಕೆಗೊಂಡಿರುವ ಮಂಗಳೂರು ಮಹಾನಗರದಲ್ಲಿ ಸಂಚಾರ ವ್ಯವಸ್ಥೆ ಕೂಡ ವ್ಯಾಪಕವಾಗಿ ಬೆಳೆಯುತ್ತಿದೆ. ದಿನವಿಡೀ ಸಾವಿರಕ್ಕೂ ಅಧಿಕ ಬಸ್‌ ಗಳು ರಸ್ತೆಗಿಳಿಯುತ್ತವೆ. ಇದರಿಂದಾಗಿ ನಗರದಲ್ಲಿ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಇದರ ತಡೆಗೆ ಈಗಲೇ ತಂತ್ರಜ್ಞಾನಾಧಾ ರಿತ ಇ-ಬಸ್‌ ಗಳ ಸಂಚಾರವನ್ನೂ ನಗರದಲ್ಲಿ ಅಳವಡಿಸಿದರೆ ಇದೊಂದು ಸಂಚಾರ ವ್ಯವಸ್ಥೆಯಲ್ಲಿ ಕ್ರಾಂತಿಯಾಗಲು ಸಾಧ್ಯವಿದೆ. ಜತೆಗೆ ಪರಿಸರ ಸ್ನೇಹಿಯಾಗಿ ಮಾದರಿಯಾಗಬಹುದು. ಇದಕ್ಕೆ ಆಡಳಿತ ವ್ಯವಸ್ಥೆ ಪ್ರಯತ್ನ ಮಾಡಬೇಕಷ್ಟೇ.

 ಶಿವ ಸ್ಥಾವರಮಠ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.