ಚಂದ್ರಬಂಡಾ ಗ್ರಾಪಂಗೆ ಗಾಂಧಿ  ಗ್ರಾಮ ಪುರಸ್ಕಾರ


Team Udayavani, Sep 30, 2018, 3:38 PM IST

ray-1.jpg

ರಾಯಚೂರು: ಅಭಿವೃದ್ಧಿ, ಪಾರದರ್ಶಕ ಆಡಳಿತ ಸೇರಿ ಹಲವು ಮಾನದಂಡಗಳನ್ನು ಆಧರಿಸಿ ನೀಡುವ ಗಾಂಧಿ  ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿರುವ ಜಿಲ್ಲೆಯ 5 ಪಂಚಾಯಿತಿಗಳ ಪೈಕಿ ಚಂದ್ರಬಂಡಾ ಕೂಡ ಒಂದು.

ಈಗಿರುವ ಪಂಚಾಯಿತಿಗಳಲ್ಲಿ ಗುರುತಿಸಿಕೊಳ್ಳುವಂಥ ಪ್ರಗತಿ ಸಾಧಿಸಿರುವುದು ಇಲ್ಲಿನ ಹೆಗ್ಗಳಿಕೆ. ಐದು ಗ್ರಾಮಗಳನ್ನು ಒಳಗೊಂಡ ಈ ಪಂಚಾಯಿತಿಯಲ್ಲಿ 25 ಸದಸ್ಯರಿದ್ದಾರೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಬೇಕಾದ ಕೆಲಸವನ್ನು ಸಾಧ್ಯವಾದ ಮಟ್ಟಿಗೆ ಮಾಡಿದ್ದನ್ನೇ ಸಾಧನೆ ಎಂದು ಪರಿಗಣಿಸಬೇಕಿದೆ. ಹಾಗಂತ ಇದೇನು ಮಾದರಿ ಪಂಚಾಯಿತಿ ಅಲ್ಲ. ಉಳಿದವುಗಳಿಗಿಂತ ಉತ್ತಮ ಎಂದೇ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಜಿಲ್ಲಾ ಕೇಂದ್ರಕ್ಕೆ ಕೇವಲ 12 ಕಿ.ಮೀ. ದೂರದಲ್ಲಿರುವ ಚಂದ್ರಬಂಡಾ ಗಡಿಭಾಗ. ಆಡಳಿತಕ್ಕೂ, ವ್ಯವಹಾರಕ್ಕೂ ರಾಯಚೂರನ್ನೇ ನಂಬಿಕೊಂಡಿರುವ ಇಲ್ಲಿನ ಜನರಿಗೆ ಅಭಿವೃದ್ಧಿಯ ಕಲ್ಪನೆ ಇಲ್ಲದಿರಲಿಕ್ಕಿಲ್ಲ. ಆ ಕಾರಣಕ್ಕೋ, ಅಥವಾ ಜನಪ್ರತಿನಿದಿಗಳ ಇಚ್ಛಾಶಕ್ತಿಗೋ ಸಿಸಿ ರಸ್ತೆ, ಚರಂಡಿ, ಶಾಲಾ ಕೌಂಪೌಂಡ್‌ಗಳು ಸೇರಿ ಕೆಲ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ನಡೆದಿವೆ.  ದ್ರಬಂಡಾ ಹೋಬಳಿ ಕೇಂದ್ರವಾದ್ದರಿಂದ ನಾಡ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತ ಸಂಪರ್ಕ ಕೇಂದ್ರ, ಹಿರಿಯ ಪ್ರಾಥಮಿಕ ಶಾಲೆ ಎಲ್ಲವೂ ಒಂದೇ ಕಂಪೌಂಡ್‌ನೊಳಗೆ ಸಿಗುತ್ತದೆ.

ಕಟ್ಲಟೂರು, ಅರಸಿಗೇರಾ, ಗಣಮೂರು, ಪಲವಲದೊಡ್ಡಿ ಗ್ರಾಮಗಳು ಪಂಚಾಯಿತಿ ವ್ಯಾಪ್ತಿಗೆ ಬರುತ್ತಿದ್ದು, ಉದ್ಯೋಗ ಖಾತ್ರಿ ಯೋಜನೆ ಯಶಸ್ವಿಯಾಗಿದೆ. 1,620 ಜಾಬ್‌ಕಾರ್ಡ್‌ ಗುರಿಯಿದ್ದು, 1200ಕ್ಕೂ ಅಧಿಕ ಜನರಿಗೆ ಕೆಲಸ ನೀಡಲಾಗುತ್ತಿದೆ. 14ನೇ ಹಣಕಾಸಿನ ಯೋಜನೆಯಡಿ 19 ಕೆಲಸಗಳನ್ನು ನಡೆಸಿದ್ದು, ಅವುಗಳನ್ನು ಗಾಂಧಿ  ಸಾಕ್ಷಿ ಕಾಯಕ ಸಾಫ್ಟ್‌ವೇರ್‌ನಲ್ಲಿ ದಾಖಲಿಸಲಾಗಿದೆ. ಈ ಎಲ್ಲ ಅಂಶಗಳನ್ನು ಪ್ರಶಸ್ತಿ ಆಯ್ಕೆಯ ಪ್ರಮುಖಾಂಶಗಳು ಎಂದು
ಹೇಳಬಹುದು.

ಇಕ್ಕಟ್ಟಾದ ಕಟ್ಟಡ: ಗ್ರಾಮ ಪಂಚಾಯತಿಗೆ ಸುಸಜ್ಜಿತ ಕಟ್ಟಡವಿಲ್ಲ. ಸುಮಾರು 25 ಸದಸ್ಯರಿರುವ ಪಂಚಾಯಿತಿಯಲ್ಲಿ ಸಭೆ ನಡೆಸಿದರೆ ಮುಂದಿನ ಆವರಣದಲ್ಲಿ ನಡೆಸಬೇಕು. ಇರುವ ಎರಡು ಕೋಣೆಯೊಳಗೆ ಪಂಚಾಯಿತಿ ನಡೆಸಬೇಕಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೇ ಪ್ರತ್ಯೇಕ ಕೊಠಡಿ ಇಲ್ಲ. ಎಚ್‌ಕೆಆರ್‌ಡಿಬಿ ಅನುದಾನದಡಿ ಕಟ್ಟಡ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರ ಜತೆಗೆ ಪಂಚಾಯಿತಿಯ ಯಾವುದಾದರೂ ಯೋಜನೆಯಡಿ ಕಟ್ಟಡ ನಿರ್ಮಿಸುವ ಚಿಂತನೆ ಇದೆ ಎನ್ನುತ್ತಾರೆ ಪಿಡಿಒ ಹನುಮಂತ.

ಫ್ಲೋರೈಡ್‌ಯುಕ್ತ ನೀರು: ಪಂಚಾಯಿತಿ ಇನ್ನೂ ಶುದ್ಧ ಕುಡಿಯುವ ನೀರು ಪೂರೈಸುವಲ್ಲಿ ಶಕ್ತವಾಗಿಲ್ಲ. ಇಲ್ಲಿ ಫ್ಲೋರೈಡ್‌ ನೀರು ಹೆಚ್ಚಾಗಿದ್ದು, ಜನ ವಿಧಿ  ಇಲ್ಲದೇ ಕುಡಿಯಬೇಕಿದೆ. ಪಂಚಾಯಿತಿ ಕಡೆಯಿಂದ ಚಂದ್ರಬಂಡಾ ಮತ್ತು ಗಣಮೂರಿನಲ್ಲಿ ಒಂದೊಂದು ಶುದ್ಧ ನೀರಿನ ಘಟಕಗಳನ್ನು ಅಳವಡಿಸಿದ್ದು, ಅದು ಸಾಲುತ್ತಿಲ್ಲ. ಪಂಚಾಯಿತಿಯಡಿ 9 ಸಾವಿರ ಜನಸಂಖ್ಯೆಯಿದ್ದರೆ, ಚಂದ್ರಬಂಡಾದಲ್ಲೇ 4 ಸಾವಿರಕ್ಕೂ ಅಧಿಕ ಜನರಿದ್ದಾರೆ. ಎಲ್ಲರಿಗೂ ನೀರಿನ ಸೌಲಭ್ಯ ಕಲ್ಪಿಸಬೇಕಿದೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಕರ ವಸೂಲಿ ಆಗುತ್ತಿಲ್ಲ ಎನ್ನುವ ಕಾರಣಕ್ಕೆ ಅಭಿವೃದ್ಧಿ ವೇಗಕ್ಕೂ ಕಡಿವಾಣ ಬಿದ್ದಿದೆ.

ಇನ್ನು ಸಾಕಷ್ಟು ಕಡೆ ಚರಂಡಿ ವ್ಯವಸ್ಥೆ ಮಾಡಬೇಕಿದೆ. ಶೌಚಗೃಹ ನಿರ್ಮಾಣದಲ್ಲಿ ಶೇ.85ರಷ್ಟು ಗುರಿ ತಲುಪಿರುವುದಾಗಿ ಹೇಳುವ ಅಧಿಕಾರಿಗಳು ಅವುಗಳನ್ನು ಬಳಸುವಂತೆ ಜಾಗೃತಿ ಮೂಡಿಸಬೇಕಿದೆ. ಒಟ್ಟಾರೆ ಇರುವುದರಲ್ಲಿಯೇ ಉತ್ತಮ ಪಂಚಾಯಿತಿ ಎಂಬ ಕಾರಣಕ್ಕೆ ಪ್ರಶಸ್ತಿ ಮುಡಿಗೇರಿದೆ ಎಂದು ಹೇಳಬಹುದು.

ಈ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಚಂದ್ರಬಂಡಾ ಪಂಚಾಯಿತಿ ಆಯ್ಕೆಯಾಗಿರುವುದು ಸಂತಸ ತಂದಿದೆ. ನಾವು ಕೆಲಸ ಮಾಡಿರುವುದರ ಜತೆಗೆ ಸಾಪ್ಟ್ವೇರ್‌ನಲ್ಲಿ ಎಲ್ಲ ವಿವರ ದಾಖಲಿಸಿದ್ದೇವೆ. ಸರ್ಕಾರ ನೀಡಿದ ಪ್ರಶ್ನಾವಳಿಯನ್ನು ಭರ್ತಿ ಮಾಡಿ ಕಳುಹಿಸಲಾಗಿತ್ತು. 
 ಹನುಮಂತ, ಚಂದ್ರಬಂಡಾ ಗ್ರಾಪಂ ಪಿಡಿಒ

ಟಾಪ್ ನ್ಯೂಸ್

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.