ಈ ಬಾರಿ ಅಂಬಾರಿಯಲ್ಲಿ ದುಗ್ಗಮ್ಮನ ಉತ್ಸವ ಮೂರ್ತಿ


Team Udayavani, Sep 30, 2018, 4:36 PM IST

dvg-1.jpg

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದಸರಾ ಮಹೋತ್ಸವ ಅ. 10 ರಿಂದ 19ರ ವರೆಗೆ ನಡೆಯಲಿದ್ದು, ಅಂಬಾರಿಯ ಮೇಲೆ ದೇವಿ ಉತ್ಸವ ಮೂರ್ತಿಯ ಮೆರವಣಿಗೆ ಈ ಬಾರಿಯ ವಿಶೇಷ ಆಕರ್ಷಣೆಯಾಗಲಿದೆ.

ಶನಿವಾರ, ದೇವಸ್ಥಾನದ ಟ್ರಸ್ಟ್‌ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಪ್ರಸಾದ ನಿಲಯದಲ್ಲಿ ದಸರಾ ಮಹೋತ್ಸವ ಕುರಿತು ನಡೆದ ಸಭೆಯಲ್ಲಿ ಈ ಬಾರಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.

ಅ. 10ರಿಂದ 19ರ ವರೆಗೆ ದೇವಿಗೆ ಪ್ರತಿನಿತ್ಯ ಅಭಿಷೇಕ, ಪೂಜೆ, ವಿಶೇಷ ಅಲಂಕಾರ, ಪುರಾಣ ಮುಂತಾದ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಅ. 20ರಂದು ಸಾಮೂಹಿಕ ಮದುವೆ, ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಹಂಗಾಮಿ ಕಾರ್ಯದರ್ಶಿ ಗೌಡ್ರ ಚನ್ನಬಸಪ್ಪ ಸಭೆಗೆ ತಿಳಿಸಿದರು.

ಮುಖಂಡ ಕರಿಗಾರ್‌ ಬಸಪ್ಪ ಮಾತನಾಡಿ, ವಿಜಯ ದಶಮಿಯಂದು ಮೈಸೂರು ದಸರಾ ಮಾದರಿಯಲ್ಲಿ ಆನೆ ಮೇಲೆ ಅಂಬಾರಿಯಲ್ಲಿ ದೇವಿಯ ಉತ್ಸವ ಮೂರ್ತಿ ಇರಿಸಿ, ದೇವಸ್ಥಾನದಿಂದ ಮೆರವಣಿಗೆ ಆರಂಭಿಸಬೇಕೆಂದು ಮಂಡಿಸಿದ ಪ್ರಸ್ತಾಪಕ್ಕೆ ಸಭೆ ಒಪ್ಪಿಗೆ ಸೂಚಿಸಿತು.

ಉತ್ಸವ ಸಮಿತಿ ರಚಿಸುವುದಕ್ಕೂ ಸಭೆ ನಿರ್ಧರಿಸಿತು. ದೇವಿಯ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಬಹಳ ಜನ ಅಭಿಷೇಕ ಸೇವೆ ಮಾಡಿಸುತ್ತಾರೆ. ಹಾಗಾಗಿ ಪೂಜೆ, ಅಭಿಷೇಕಕ್ಕೆ 2 ಕಡೆ ವ್ಯವಸ್ಥೆ ಮಾಡಲು ಸಭೆ ಸಮ್ಮತಿಸಿತು. ಮಾಜಿ ಶಾಸಕ ಯಜಮಾನ್‌ ಮೋತಿ ವೀರಣ್ಣ, ಟ್ರಸ್ಟ್‌ನ ಸದಸ್ಯ ಅಥಣಿ ವೀರಣ್ಣ, ಎಚ್‌.ಬಿ. ಗೋಣೆಪ್ಪ, ಯಶವಂತರಾವ್‌ ಜಾಧವ್‌ ಇತರರು ಸಭೆಯಲ್ಲಿದ್ದರು.

ಆಕ್ಷೇಪ, ಮಾತಿನ ಚಕಮಕಿ…. : ಬಾಬುದಾರರು ಹಲವಾರು ವರ್ಷಗಳಿಂದ ದೇವಸ್ಥಾನದ ಸೇವಾ ಕಾರ್ಯಗಳಲ್ಲಿ ಭಾಗಿಯಾಗುತ್ತಾ ಬಂದಿದ್ದಾರೆ. ಅವರನ್ನು ದೇವಸ್ಥಾನದ ಸಮಿತಿಯೊಳಗೆ ಏಕೆ ತೆಗೆದುಕೊಂಡಿಲ್ಲ ಎಂಬ ವಿಚಾರ ಸಭೆಯಲ್ಲಿ ಬಿಸಿ ಚರ್ಚೆಗೆ ಕಾರಣವಾಯಿತು.

ಗೌಡ್ರ ರೇವಣಸಿದ್ದಪ್ಪ ಮತ್ತಿತರರು ಈ ವಿಷಯ ಪ್ರಸ್ತಾಪಿಸಿ, ದೇವಿಯ ಹಬ್ಬವನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಸಮಿತಿಯೊಳಗೆ ತಮ್ಮನ್ನು ಏಕೆ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು. ಈ ವಿಚಾರ ಸಭೆ
ಕಾವೇರುವಂತೆ ಮಾಡಿತು. ಆಗ ಮಾತಿನ ಚಕಮಕಿ ನಡೆಯಿತು. ಅಸಮಾಧಾನ, ಆಕ್ಷೇಪಗಳು ವ್ಯಕ್ತವಾದವು. ಇತ್ತೀಚೆಗೆ ಮೂವರು ಸದಸ್ಯರನ್ನು ನೇಮಕ ಮಾಡಿಕೊಂಡಿರುವ ವಿಚಾರವನ್ನು ಯಶವಂತರಾವ್‌ ಜಾಧವ್‌ ಪ್ರಸ್ತಾಪಿಸಿದರು.

ಯುವಕರಿಗೂ ಅವಕಾಶ ಕೊಡಿ ಎಂದು ರಾಜನಹಳ್ಳಿ ಶಿವಕುಮಾರ್‌ ಆಗ್ರಹಿಸಿದರು. ಒಂದು ಹಂತದಲ್ಲಿ ಮಧ್ಯ ಪ್ರವೇಶಿಸಿದ ಶಾಸಕ ಶಾಮನೂರು ಶಿವಶಂಕರಪ್ಪ, ಏನೇ ಹೇಳುವುದಿದ್ದರೂ ಅದಕ್ಕೊಂದು ವಿಧಾನವಿದೆ. ಸಭಾ ಮರ್ಯಾದೆ ಕಾಪಾಡಬೇಕು. ತಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ತಾವೇನೂ ಕೇಳಿರಲಿಲ್ಲ ಎಂದರು.

ತಮ್ಮ ಹೆಸರು ಪ್ರಸ್ತಾಪವಾದ ಬಗ್ಗೆ ಸದಸ್ಯ ಅಥಣಿ ವೀರಣ್ಣ ಪ್ರತಿಕ್ರಿಯೆ ನೀಡಿ, ಭಾವನಾತ್ಮಕ ಮಾತುಗಳು ಬೇಡ, ಸಭೆಯಿಂದಲೇ ತಮ್ಮ ಹೆಸರು ಪ್ರಸ್ತಾಪವಾಗಿತ್ತು ಎಂದು ಹೇಳಿದರು. ಸಭೆಯ ಆರಂಭದಲ್ಲಿ ಯಶವಂತರಾವ್‌
ಜಾಧವ್‌ ಅವರು ಸಮಿತಿಗೆ ನೀಡಿದ ಪತ್ರದ ಬಗ್ಗೆ ಪ್ರಸ್ತಾಪವಾಯಿತು. ಅದನ್ನು ಸ್ವತಃ ಶಾಸಕ ಶಾಮನೂರು ಶಿವಶಂಕರಪ್ಪನವರೇ ಸಭೆಗೆ ಓದಿ ಹೇಳಿದರು. ಸಮಿತಿಯ ಚಟುವಟಿಕೆಗಳು ಪಾರದರ್ಶಕವಾಗಿಲ್ಲ, ನಿಗೂಢವಾಗಿವೆ. ಜನರಿಗೆ ಅನುಮಾನ ಮೂಡುವಂತೆ ಮಾಡಿವೆ. ಭಕ್ತರ ಅನುಮಾನ ಪರಿಹರಿಸಿ ಎಂಬುದಾಗಿ ಜಾಧವ್‌ ಆ ಪತ್ರದಲ್ಲಿ ಪ್ರಸ್ತಾಪಿಸಿದ್ದರು. ಹೊಸ ಸದಸ್ಯರ ನೇಮಕ, ಟ್ರಸ್ಟ್‌ ರಚನೆ ಬಗ್ಗೆ ಆಕ್ಷೇಪವೂ ಆ ಪತ್ರದಲ್ಲಿತು.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.