ವಿಮೆಯಿಂದ ಕುಟುಂಬ ರಕ್ಷಣೆ: ಸಿದ್ಧಲಿಂಗಪ್ಪ


Team Udayavani, Oct 1, 2018, 4:04 PM IST

cta-1.jpg

ನಾಯಕನಹಟ್ಟಿ: ವಿಮೆ ಮಾಡಿಸುವುದರಿಂದ ಉಳಿತಾಯದ ಜತೆಗೆ ಕುಟುಂಬದ ರಕ್ಷಣೆಯೂ ಸಾಧ್ಯ ಎಂದು ಆರ್ಥಿಕ ಸಲಹೆಗಾರ ಟಿ. ಸಿದ್ಧಲಿಂಗಪ್ಪ ಹೇಳಿದರು.

ಭಾನುವಾರ ಪಟ್ಟಣದ ಮೈರಾಡ ಸಂಪನ್ಮೂಲ ಕೇಂದ್ರದಲ್ಲಿ ಏರ್ಪಡಿಸಿದ್ದ ಸಮುದಾಯ ನಿರ್ವಹಿತ ಸಂಘದ ಏಳನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಕುಟುಂಬ ವಿಮೆ ಸೌಲಭ್ಯ ನೀಡುತ್ತಿದೆ. ಜತೆಗೆ ದೇಶದ ಪ್ರತಿ ವ್ಯಕ್ತಿ ಉಳಿತಾಯ ಖಾತೆ ಹೊಂದಿರಬೇಕು ಎನ್ನುವ ಉದ್ದೇಶದಿಂದ ಜನಧನ್‌ ಯೋಜನೆಯನ್ನು
ಜಾರಿಗೊಳಿಸಲಾಗಿದೆ. ಅಲ್ಲದೆ ಪಿಂಚಣಿ ಯೋಜನೆಯನ್ನೂ ಅನುಷ್ಠಾನಗೊಳಿಸಲಾಗಿದೆ. 

ಸಂಘಗಳು ಇದರ ಸದುಪಯೋಗ ಪಡೆಯಬೇಕು. ಕೇವಲ ಸಾಲ ಪಡೆಯುವ ಉದ್ದೇಶವನ್ನು ಹೊಂದಿರಬಾರದು. ಜತೆಗೆ ಕುಟುಂಬಕ್ಕಾಗಿ ಉಳಿತಾಯವನ್ನು ರೂಢಿಸಿಕೊಳ್ಳಬೇಕು. ವೈಯಕ್ತಿಕ ಹಾಗೂ ಕುಟುಂಬದ ಹಿತಕ್ಕಾಗಿ ಉಳಿತಾಯ
ಮಾಡಬೇಕು. ಇದರಿಂದ ದಿಢೀರ್‌ ಎದುರಾಗುವ ಆರ್ಥಿಕ ಸಮಸ್ಯೆಗಳನ್ನು ಎದುರಿಸಬಹುದು ಎಂದು ಅಭಿಪ್ರಾಯಪಟ್ಟರು.

ವೈಯಕ್ತಿಕವಾಗಿ ಬ್ಯಾಂಕ್‌ಗಳು ಸಾಲ ನೀಡಲು ಸಾಧ್ಯವಿಲ್ಲ. ಆದರೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಘಗಳಿಗೆ ಸಾಲವನ್ನು ನಿರಾಕರಿಸಲು ಸಾಧ್ಯವಿಲ್ಲ. ಹೀಗಾಗಿ ಸ್ವಸಹಾಯ ಸಂಘಗಳು ಸಾಲ ಪಡೆದ ಹಣವನ್ನು ಲಾಭ ಆಗುವ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳಬೇಕು.

ನಿಯಮಿತವಾಗಿ ಸಾಲ ಮರುಪಾವತಿ ಮಾಡುವುದರಿಂದ ಬ್ಯಾಂಕ್‌ಗಳಿಗೆ ಸಾಲ ಪಡೆದ ವ್ಯಕ್ತಿಗಳ ಮೇಲೆ ನಂಬಿಕೆ ಉಂಟಾಗುತ್ತದೆ. ಪ್ರಧಾನಮಂತ್ರಿಯವರ ಜನಧನ್‌ ಹಾಗೂ ಆಯುಷ್ಮಾನ್‌ ಯೋಜನೆಗಳಲ್ಲಿ ಮಹಿಳೆಯರು ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು. 

ಮೈರಾಡ ಕಾರ್ಯಕ್ರಮಾಧಿಕಾರಿ ಸಿ.ಎಸ್‌. ಗೌಡರ್‌ ಮಾತನಾಡಿ, ಸಮಾಜದಲ್ಲಿ ಸಂಘಗಳ ಮಹತ್ವ ಹೆಚ್ಚುತ್ತಿದೆ. ಹೀಗಾಗಿ ಸಂಘಗಳನ್ನು ನಿರ್ವಹಿಸುತ್ತಿರುವ ಸಂಸ್ಥೆಗಳು ಹೆಚ್ಚಾಗುತ್ತಿವೆ. ಆದರೆ ಮಹಿಳೆಯರು ಎರಡು ಸಂಘಗಳಿಗೆ ಸದಸ್ಯರಾಗಬಾರದು.

ಸಾಲ ಪಡೆಯುವ ಉದ್ದೇಶಕ್ಕಾಗಿ ಈ ರೀತಿ ಮಾಡುವುದು ಸರಿಯಲ್ಲ. ಇದರಿಂದ ಎರಡೂ ಸಂಘಗಳಲ್ಲಿ ಅಂತಹ ಸದಸ್ಯರ ಬಗ್ಗೆ ನಂಬಿಕೆ ಹಾಗೂ ವಿಶ್ವಾಸಾರ್ಹತೆ ಇರುವುದಿಲ್ಲ. ಸಂಘದ ಸದಸ್ಯರು ವಿಮೆ ಮಾಡುವುದಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಇದರಿಂದ ಅಕಸ್ಮಿಕ ಘಟನೆಗಳಲ್ಲಿ ಕುಟುಂಬಕ್ಕೆ ಆರ್ಥಿಕ ಸಹಾಯ ದೊರೆಯುತ್ತದೆ. ಕೇಂದ್ರ ಸರ್ಕಾರದ
ಪಿಂಚಣಿ ಯೋಜನೆಯ ಬಗ್ಗೆ ಮಹಿಳೆಯರು ಮಾಹಿತಿ ಹೊಂದಬೇಕು. ವಿಮೆ, ಉಳಿತಾಯ ಸೇರಿದಂತೆ ಸೌಲಭ್ಯ ಹೊಂದುವ ಯೋಜನೆಗಳನ್ನು ಸಂಘದ ಸಭೆಯಲ್ಲಿ ಚರ್ಚಿಸಬೇಕು ಎಂದು ಸಲಹೆ ನೀಡಿದರು.

ಪಪಂ ಅಧ್ಯಕ್ಷೆ ನೀಲಮ್ಮ, ಮೈರಾಡ ಸಂಪನ್ಮೂಲ ಕೇಂದ್ರದ ವ್ಯವಸ್ಥಾಪಕ ಆಶೋಕ್‌ ಹಗೆದಾಳ್‌, ಪದಾಧಿಕಾರಿಗಳಾದ ಎಂ. ಗೀತಾ, ಭಾಗ್ಯಮ್ಮ, ಹೇಮಲತಾ, ಸಿಬ್ಬಂದಿಗಳಾದ ಎಚ್‌.ಬಿ. ತಿಪ್ಪೇಸ್ವಾಮಿ, ಟಿ.ಒ. ಲಕ್ಷ್ಮೀ, ಎ.ಬಿ. ಕೇಶವರಾಜು, ಬಿ.ಸಿ. ಬಾಲಯ್ಯ, ವಿಜಯಮ್ಮ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.