ಕತ್ತು ಹಿಸುಕಿ ಪತ್ನಿಯನ್ನು ಕೊಂದು ಕಾರಲ್ಲೇ ಬಿಟ್ಟು ಹೋದ ಪತಿ
Team Udayavani, Oct 2, 2018, 4:32 PM IST
ಭುವನೇಶ್ವರ : ಇಲ್ಲಿಗೆ ಸಮೀಪದ ಶ್ರೀರಾಮ ನಗರ ಪ್ರದೇಶದಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯ ಕತ್ತು ಹಿಸುಕಿ ಕೊಂದು ಆಕೆಯ ಶವವನ್ನು ಪಾರ್ಕ್ ಮಾಡಿಟ್ಟ ತನ್ನ ಹಾನಿಗೀಡಾದ ಕಾರಿನಲ್ಲಿ ಬಿಟ್ಟು ಹೋಗಿರುವ ಘಟನೆ ವರದಿಯಾಗಿದೆ. ಕೊಲೆ ಆರೋಪಿ ಪತಿಯು ತಲೆಮರೆಸಿಕೊಂಡಿದ್ದು ಆತನನ್ನು ಬೇಗನೆ ಬಂಧಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಗೀಡಾದ ಮಹಿಳೆಯನ್ನು ಜೈಪುರ ಜಿಲ್ಲೆಯ ಮಂಗಳಪುರದ ತನುಜಾ ಐಚ್ ಎಂದು ಗುರುತಿಸಲಾಗಿರುವುದಾಗಿ ಭುವನೇಶ್ವರ ಡಿಸಿಪಿ ಅನೂಪ್ ಸಾಹು ತಿಳಿಸಿದ್ದಾರೆ.
ತನಿಖೆಯಿಂದ ತಿಳಿದು ಬಂದಿರುವ ಪ್ರಕಾರ ಪತ್ನಿ ತನುಜಾ ಜತೆ ಆಕೆಯ ಪತಿ ಸಂಗ್ರಾಮ್ ಐಚ್ ಪ್ರತಿ ನಿತ್ಯವೂ ಜಗಳವಾಡುತ್ತಿದ್ದ. ಈ ಹಿಂದೆ ಅನೇಕ ಬಾರಿ ಇವರು ಪೊಲೀಸರ ಮುಂದೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.
ಕೊಲೆಗೀಡಾದ ತನುಜಾ ಳ ನಿಕಟ ಸಂಬಂಧಿಯೋರ್ವರು ಹೇಳಿರುವ ಪ್ರಕಾರ “ತನುಜಾಳನ್ನು ಆಕೆಯ ಪತಿ ಸಂಗ್ರಾಮನೇ ಕೊಂದಿದ್ದಾನೆ’.
ಪತ್ನಿಯನ್ನು ಕೊಂದ ಬಳಿಕ ಸಂಗ್ರಾಮ್, ಕಾರು ಅಪಘಾತದಲ್ಲಿ ತನುಜಾ ಸತ್ತಳೆಂದು ಬಿಂಬಿಸಲು ಕಾರನ್ನು ತಾನೇ ಖುದ್ದು ಹಾನಿಗೊಳಿಸಿದ್ದಾನೆ ಎಂದು ಡಿಸಿಪಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ
Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ
Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು
RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ