ಪ್ರವಾಸಿಗರಿಗೆ ರಕ್ಷಣೆ: ಪೊಲೀಸರಿಗೆ ವಿವಿಧ ಭಾಷೆ ಕಲಿಕೆ


Team Udayavani, Oct 3, 2018, 1:45 AM IST

bekala-kote-600.jpg

ಕಾಸರಗೋಡು: ಕೇರಳದ ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರಿಗೆ ಪದೇ ಪದೆ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಪೊಲೀಸರಿಗೆ ವಿವಿಧ ಭಾಷೆಗಳನ್ನು ಕಲಿಸುವ ಮತ್ತು ಆ ಮೂಲಕ ಪ್ರವಾಸಿಗರೊಂದಿಗೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಲು, ರಕ್ಷಣೆ ಒದಗಿಸಲು ಸಾಧ್ಯವಾಗಲು ವಿವಿಧ ಯೋಜನೆಗಳನ್ನು ಸಾಕಾರಗೊಳಿಸಲು ತೀರ್ಮಾನಿಸಿದೆ.

ಕೇರಳದ ಪ್ರವಾಸಿ ಕೇಂದ್ರಗಳಿಗೆ ಭೇಟಿ ನೀಡುವ ಸ್ವದೇಶಿ ಹಾಗೂ ವಿದೇಶಿ ಪ್ರವಾಸಿಗರಿಗೆ ಉತ್ತಮ ಸೌಕರ್ಯ ಕಲ್ಪಿಸಲು ಪೊಲೀಸರನ್ನು ಸಜ್ಜುಗೊಳಿಸಲಾಗುವುದು. ಪ್ರಮುಖ ಕೇಂದ್ರಗಳಲ್ಲಿ ಪ್ರವಾಸಿ ಸಹಾಯ ಕೇಂದ್ರಗಳನ್ನು ಆರಂಭಿಸಲಾಗುವುದು. ವಿವಿಧ ರಾಜ್ಯಗಳಿಂದ ಮತ್ತು ವಿವಿಧ ದೇಶಗಳಿಂದ ಬರುವ ಪ್ರವಾಸಿಗರೊಂದಿಗೆ ಸಂಪರ್ಕವನ್ನು ಸಾಧ್ಯಸಲು ಪೊಲೀಸರಿಗೆ ವಿವಿಧ ಭಾಷೆಗಳನ್ನು ಕಲಿಸಿಕೊಡಲು ತೀರ್ಮಾನಿಸಲಾಗಿದೆ. ಈ ಮೂಲಕ ಪ್ರವಾಸಿಗರ ಸಮಸ್ಯೆಗಳನ್ನು ಆಲಿಸಲು ಸಾಧ್ಯವಾಗುವುದು. ಇದಕ್ಕಾಗಿ ಪೊಲೀಸರಿಗೆ ಪ್ರತ್ಯೇಕ ಆ್ಯಪ್‌ ಕಲ್ಪಿಸಲಾಗುವುದು. ಪ್ರವಾಸಿಗರಿಗೆ ಸೌಹಾರ್ದ ಪರಿಸರವನ್ನು ಕಲ್ಪಿಸುವುದು ಕೂಡ ಉದ್ದೇಶವಾಗಿದೆ. ರಾಜ್ಯದಲ್ಲಿ ಸಾಕಷ್ಟು ಪ್ರವಾಸಿ ಕೇಂದ್ರಗಳಿದ್ದರೂ ಅವುಗಳ ನಿರ್ವಹಣೆ ಸುಗಮವಾಗಿ ಸಾಗುತ್ತಿಲ್ಲ. ಇದಕ್ಕಾಗಿ ಪೊಲೀಸರಿಗೆ ಪ್ರತ್ಯೇಕ ತರಬೇತಿ ನೀಡಿ ಪ್ರವಾಸಿಗರಿಗೆ ಸಂಪೂರ್ಣ ಸಂರಕ್ಷಣೆ ನೀಡುವ ಮೂಲಕ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸಲು ಸಾಧ್ಯವಾಗಲಿದೆ.

ಸ್ವದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಲು ಬರುವ ಪ್ರದೇಶವೆಂದರೆ ಕೇರಳ. ಇಲ್ಲಿ ಇದೀಗ ಸಾಕಷ್ಟು ಸೌಕರ್ಯಗಳಿಲ್ಲ. ಅಲ್ಲದೆ ಸಂರಕ್ಷಣೆ ಕೂಡ ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಈ ಕೊರತೆಯನ್ನು ನೀಗಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಕೇರಳದಲ್ಲಿ ಪ್ರವಾಸಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲು ಸಾಕಷ್ಟು ಅವಕಾಶಗಳಿದ್ದರೂ ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿದೆ. ಪ್ರವಾಸೋದ್ಯಮ ಸಂಬಂಧ ನಡೆಯುವ ಎಲ್ಲಾ ಸಭೆಗಳಲ್ಲೂ ಕೇರಳದಲ್ಲಿ ಪ್ರವಾಸಿಗರಿಗೆ ಸರಿಯಾದ ಸಂರಕ್ಷಣೆ ಲಭಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಲೇ ಇರುತ್ತವೆ. ಇದನ್ನು ಪರಿಗಣಿಸಿ ಪೊಲೀಸರನ್ನು ಪ್ರವಾಸಿ ಕೇಂದ್ರಗಳಲ್ಲಿ ಬಳಸಿಕೊಳ್ಳುವುದು ಮತ್ತು ಅವರಿಗೆ ವಿವಿಧ ಭಾಷೆಗಳನ್ನು ಕಲಿಸುವ ಮೂಲಕ ಈ ಪ್ರವಾಸಿಗರಿಗೆ ಉತ್ತಮ ಗೈಡ್‌ ಎಂಬ ರೀತಿಯಲ್ಲಿ ಪೊಲೀಸರನ್ನು ಬಳಸಿಕೊಳ್ಳಲಾಗುವುದು.

ಕೇರಳದ ವಿವಿಧ ಪ್ರವಾಸಿ ಕೇಂದ್ರಗಳು ಮಾದಕ ವಸ್ತುಗಳ ಮಾಫಿಯಾಗಳ ಸ್ವರ್ಗವಾಗಿ ಬದಲಾಗಿದೆ. ಇಂತಹ ಪರಿಸ್ಥಿತಿಯಿಂದ ಪಾರು ಮಾಡಲು ಮಾದ‌ಕ ದ್ರವ್ಯ ಮಾಫಿಯಾಗಳನ್ನು ನಿಗ್ರಹಿಸುವ ಉದ್ದೇಶದಿಂದ ಇಂತಹ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಿಸಲಾಗುವುದು ಎಂದು ಡಿಜಿಪಿ ಲೋಕನಾಥ್‌ ಬೆಹ್ರಾ ಅವರು ಹೇಳಿದ್ದಾರೆ. ಪ್ರವಾಸೋದ್ಯಮವನ್ನು ಕೇರಳದಲ್ಲಿ 

ಪ್ರವಾಸಿಗರಿಗೆ ಸಂರಕ್ಷಣೆ ಒದಗಿಸಲು ಈಗಾಗಲೆ ರಾಜ್ಯದ ವಿವಿಧೆಡೆಯಾಗಿ 49 ಪ್ರವಾಸಿ ಸುರಕ್ಷಾ ಸಹಾಯ ಕೇಂದ್ರಗಳನ್ನು ರೂಪಿಸಲಾಗಿದೆ. ಇನ್ನೂ ಆರು ಕೇಂದ್ರಗಳನ್ನು ತೆರೆಯಲಾಗುವುದು. ಪ್ರವಾಸೋದ್ಯಮ ಪೊಲೀಸರು ಮತ್ತು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಈ ಕೇಂದ್ರಗಳು ಕಾರ್ಯಾಚರಿಸಲಿದೆ. ಮುಂದಿನ ವಿಶ್ವ ಪ್ರವಾಸಿ ದಿನದ ವರೆಗೆ ಪ್ರವಾಸಿಗರಿಗೆ ಸುರಕ್ಷೆ ಒದಗಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಪ್ರವಾಸೋದ್ಯಮ ಕೇಂದ್ರಗಳಲ್ಲಿ ದುಡಿಯುವ ಪೊಲೀಸರಿಗೆ ಪ್ರತ್ಯೇಕವಾಗಿ ಆ್ಯಪ್‌ ಸೌಲಭ್ಯ ಒದಗಿಸಲಾಗುವುದು. ಈ ಮೂಲಕ ಪೊಲೀಸರಿಗೆ ಸೂಕ್ತ ಸಲಹೆ, ನಿರ್ದೇಶಗಳನ್ನು ನೀಡಲು ಸಾಧ್ಯವಾಗುವುದು.

ಪೊಲೀಸ್‌ ಮ್ಯೂಸಿಯಂ ಸ್ಥಾಪನೆ  
ಪ್ರವಾಸಿಗರಿಗೆ ಗರಿಷ್ಠ ಮಟ್ಟದಲ್ಲಿ ಸಂರಕ್ಷಣೆ ಒದಗಿಸಲು ಪೊಲೀಸ್‌ ಇಲಾಖೆ ಯನ್ನು ಸಜ್ಜುಗೊಳಿಸಲಾಗುವುದು. ಅಲ್ಲದೆ ಪೊಲೀಸರಿಗೆ ವಿಶೇಷವಾದ ಆ್ಯಪ್‌ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಅಲ್ಲದೆ ರಾಜ್ಯದ ತಿರುವನಂತಪುರ, ಕೊಚ್ಚಿ ಮತ್ತು ಕಲ್ಲಿಕೋಟೆಯಲ್ಲಿ ಪೊಲೀಸ್‌ ಮ್ಯೂಸಿಯಂ ಆರಂಭಿಸಲಾಗುವುದು. ಇದಕ್ಕಾಗಿ ಪ್ರಾರಂಭಿಕ ಪ್ರಕ್ರಿಯೆಗಳು ಆರಂಭಗೊಂಡಿವೆ.
– ಲೋಕನಾಥ್‌ ಬೆಹ್ರಾ, ಡಿಜಿಪಿ

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.