ಖ್ಯಾತ ವಯಲಿನ್ ವಾದಕ ಬಾಲಭಾಸ್ಕರ್ ನಿಧನ
Team Udayavani, Oct 3, 2018, 2:15 AM IST
ತಿರುವನಂತಪುರ : ಕಳೆದ ತಿಂಗಳು ರಸ್ತೆ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ವಯಲಿನ್ ವಾದಕ ಬಾಲಭಾಸ್ಕರ್ ಅವರು ಮಂಗಳವಾರ ಬೆಳಗಿನ ಜಾವ ನಿಧನ ಹೊಂದಿದರು. ಅವರಿಗೆ 40 ವರ್ಷ ವಯಸ್ಸಾಗಿತ್ತು. ಸೆ. 25ರಂದು ಸಂಭವಿಸಿದ ಅಪಘಾತದಲ್ಲಿ ಬಾಲಭಾಸ್ಕರ್ ಅವರ ಎರಡು ವರ್ಷದ ಮಗಳು ಸಾವಿಗೀಡಾಗಿದ್ದರೆ ಬಾಲಭಾಸ್ಕರ್ ಮತ್ತು ಅವರ ಪತ್ನಿ ಲಕ್ಷ್ಮೀ ತೀವ್ರವಾಗಿ ಗಾಯಗೊಂಡಿದ್ದರು. ಬಾಲಭಾಸ್ಕರ್ ಕುಟುಂಬ ತೃಶ್ಶೂರ್ನ ದೇಗುಲವೊಂದರಲ್ಲಿ ಪೂಜೆ ಸಲ್ಲಿಸಿ ಮರಳುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆಬದಿಯ ಮರಕ್ಕೆ ಢಿಕ್ಕಿ ಹೊಡೆದಿತ್ತು.
ತೀವ್ರ ಗಾಯಗೊಂಡಿದ್ದ ಬಾಲಭಾಸ್ಕರ್ ಅವರಿಗೆ ಶಸ್ತ್ರಚಿಕಿತ್ಸೆಯೊಂದನ್ನು ನಡೆಸಲಾಗಿತ್ತು. ಸೋಮವಾರ ಮಧ್ಯರಾತ್ರಿ ಬಳಿಕ 1 ಗಂಟೆ ವೇಳೆ ಅವರಿಗೆ ಭಾರೀ ಹೃದಯಾಘಾತ ಸಂಭವಿಸಿತು ಮತ್ತು ಅವರು ಕೊನೆಯುಸಿರೆಳೆದರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಬಾಲಭಾಸ್ಕರ್ ಮತ್ತು ಲಕ್ಷ್ಮೀ ದಂಪತಿಗೆ ವಿವಾಹವಾದ 16 ವರ್ಷಗಳ ಬಳಿಕ ಏಕೈಕ ಪುತ್ರಿ ತೇಜಸ್ವಿನಿ ಜನಿಸಿದ್ದಳು. ಬಾಲಭಾಸ್ಕರ್ ಅವರು ಕನಿಷ್ಠ ಮೂರು ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದರಲ್ಲದೆ ಅನೇಕ ಮ್ಯೂಸಿಕ್ ಆಲ್ಬಂಗಳನ್ನು ಹೊರ ತಂದಿದ್ದರು ಹಾಗೂ ಕೇರಳಿಗರಿಗೆ ಫ್ಯೂಶನ್ ಸಂಗೀತವನ್ನು ಪರಿಚಯಿಸಿದ್ದರು. ಅಲ್ಲದೆ ಅನೇಕ ವೇದಿಕೆಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದರು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಾಲಭಾಸ್ಕರ್ ಅವರ ಕಳೇಬರಕ್ಕೆ ಪುಷ್ಪಗುಚ್ಛವಿರಿಸಿ ಅಂತಿಮ ನಮನ ಸಲ್ಲಿಸಿದರಲ್ಲದೆ ಅವರ ನಿಧನದಿಂದ ಸಂಗೀತಲೋಕ ಅತ್ಯಂತ ಪ್ರತಿಭಾನ್ವಿತ ಕಲಾವಿದನೋರ್ವನನ್ನು ಕಳಕೊಂಡಿದೆಯೆಂದು ಹೇಳಿದರು. ಕಳೇಬರವನ್ನು ತಿರುವನಂತಪುರದ ಯೂನಿವರ್ಸಿಟಿ ಕಾಲೇಜಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು ಬಾಲಭಾಸ್ಕರ್ ಅವರ ಸಹಸ್ರಾರು ಅಭಿಮಾನಿಗಳು ಅವರಿಗೆ ಅಂತಿಮ ನಮನ ಸಲ್ಲಿಸಿದರು. ತಿರುಮಲದ ಅವರ ಪೂರ್ವಿಕರ ಮನೆ ಸಮೀಪ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆಯೆಂದು ರಾಜ್ಯದ ಸಂಸ್ಕೃತಿ ಸಚಿವ ಎ.ಕೆ. ಬಾಲನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್