ಪ್ಲಾಸ್ಟಿಕ್ ನಿಷೇಧ ಕಡ್ಡಾಯ ಜಾರಿಯಲ್ಲಿ ಗೊಂದಲ!


Team Udayavani, Oct 3, 2018, 10:49 AM IST

3-october-5.gif

ಪುತ್ತೂರು: ಪ್ಲಾಸ್ಟಿಕ್‌ ನಿಷೇಧದ ಹಿನ್ನೆಲೆಯಲ್ಲಿ ಅಧಿಕಾರಿಗಳು ಒಂದಾದ ಮೇಲೊಂದರಂತೆ ದಾಳಿಗಳನ್ನು ಯೋಜಿಸುತ್ತಿದ್ದಾರೆ. ದಾಳಿ ನಡೆಸುವ ವೇಳೆಯಲ್ಲಿ ಅಂಗಡಿ ಮಾಲಕರು ಎದುರಿಡುವ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಟಾಗುತ್ತಿದ್ದಾರೆ. ಕಾರಣ ಯಾವೆಲ್ಲ ಬಗೆಯ ಪ್ಲಾಸ್ಟಿಕ್‌ಗಳನ್ನು ನಿಷೇಧ ಮಾಡಲಾಗಿದೆ ಎನ್ನುವ ಬಗ್ಗೆ ಅಧಿಕಾರಿಗಳಿಗೇ ಸರಿಯಾಗಿ ಮಾಹಿತಿ ಇಲ್ಲ. ಇದು ಕಟು ಸತ್ಯ.

ರಾಜ್ಯ ಸರಕಾರ, ಜಿಲ್ಲಾಡಳಿತ ಪ್ಲಾಸ್ಟಿಕ್‌ ನಿಷೇಧದ ಬಗೆಗಿನ ಸುತ್ತೋಲೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಿದೆ. ಸುತ್ತೋಲೆಯಲ್ಲಿ ಉಲ್ಲೇಖ ಮಾಡಿದಂತೆ 2016 ನ. 25ರಂದು ಪ್ಲಾಸ್ಟಿಕ್‌ ನಿಷೇಧದ ಸೂಚನೆ ನೀಡಲಾಗಿತ್ತು. ಸೂಚನೆಯ ಆನಂತರ 6 ತಿಂಗಳ ಅವಧಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗಿತ್ತು. ಆದರೆ ದ.ಕ. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪ್ಲಾಸ್ಟಿಕ್‌ ಬಳಕೆಯ ನಿಷೇಧವನ್ನು ಸಂಪೂರ್ಣವಾಗಿ ನಿಯಂತ್ರಿಸಿರುವುದಿಲ್ಲ. ಆದ್ದರಿಂದ ಎಲ್ಲ ಅಧಿಕಾರಿ, ನೌಕರರು ಮತ್ತು ಗ್ರಾ.ಪಂ. ವ್ಯಾಪ್ತಿಯ ಪಿಡಿಒಗಳು ಪ್ಲಾಸ್ಟಿಕ್‌ ನಿಷೇಧವನ್ನು ಜಾರಿಗೆ ತರಲು ಸೂಚಿಸಿದ್ದಾರೆ.

ಕಂಪೆನಿಗಳಿಗೆ ರಿಯಾಯಿತಿ
ಕುರುಚಲು ತಿನಿಸು, ಆಹಾರ ಪದಾರ್ಥವನ್ನು ಪ್ಯಾಕ್‌ ಮಾಡಿರುವ ಪ್ಲಾಸ್ಟಿಕ್‌ ಗಳಿಗೆ ನಿಷೇಧ ಹೇರಲಾಗಿಲ್ಲ. ನಿಷೇಧದ ಪಟ್ಟಿಯಲ್ಲಿ ಕೆಲವು ಪ್ರಕರಣಗಳಲ್ಲಿ ವಿನಾಯಿತಿ ನೀಡಿ ಎಂದು ಉಲ್ಲೇಖೀಸಲಾಗಿದೆ. ತಿಂಡಿ- ತಿನಸು, ಕೆಲ ವಸ್ತುಗಳನ್ನು ಪ್ಲಾಸ್ಟಿಕ್‌ ಕವರ್‌ ನಲ್ಲಿ ತುಂಬಿ ಮಾರಾಟ ಮಾಡುವುದಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ಪ್ಲಾಸ್ಟಿಕ್‌ ನಿಷೇಧದಿಂದ ದೊಡ್ಡ ಕಂಪೆನಿಗಳನ್ನು ದೂರ ಇಡಲಾಗಿರುವುದು ಮಾತ್ರ ತಾರತಮ್ಯ ಧೋರಣೆಯಾಗಿದೆ.

150 ಕೆ.ಜಿ. ವಶಕ್ಕೆ
ಪುತ್ತೂರು ನಗರಸಭೆ ಈಗಾಗಲೇ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ವಶಕ್ಕೆ ತೆಗದುಕೊಂಡ ಪ್ಲಾಸ್ಟಿಕ್‌ ಗಳು ಸುಮಾರು 150 ಕೆ.ಜಿ.ಯಷ್ಟು ಇದೆ. ಹೀಗೆ ದಾಳಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್‌ ಅನ್ನು ಏನು ಮಾಡಬೇಕು ಎನ್ನುವುದನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವಾಣಿಜ್ಯ ಮಳಿಗೆ, ಹೊಟೇಲ್‌, ಪ್ಲಾಸ್ಟಿಕ್‌ ಉತ್ಪನ್ನ ತಯಾರಿಸುವ ಕೈಗಾರಿಕೆಗಳಿಗೆ ಆಗ್ಗಿಂದಾಗೆ ದಾಳಿ ನಡೆಸುತ್ತಿರಬೇಕು. ವಶಪಡಿಸಿಕೊಂಡು ಮಹಜರು ಮಾಡಿದ ಪ್ಲಾಸ್ಟಿಕ್‌ಗಳನ್ನು ರಾಜ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಅಥವಾ ಸಹಾಯಕ ಆಯುಕ್ತರ ವಶಕ್ಕೆ ನೀಡಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ಅಧಿಸೂಚನೆಯನ್ನು ಉಲ್ಲಂಘಿಸಿದರೆ ಆಯಾ ವ್ಯಾಪ್ತಿಯ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸುವಂತೆ ಸೂಚಿಸಲಾಗಿದೆ.

ಬ್ಯಾನರ್‌ಗಳಿಗೂ ಕಡಿವಾಣ
ಎಲ್ಲ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ಆಧಾರಿತ ಯಾವುದೇ ಜಾಹೀರಾತು ಬ್ಯಾನರ್‌ಗಳಿಗೆ ಪರವಾನಿಗೆ ನೀಡಬಾರದೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅನಧಿಕೃತವಾಗಿ ಹಾಕಲಾದ ಪ್ಲಾಸ್ಟಿಕ್‌ ಆಧಾರಿತ ಯಾವುದೇ ಜಾಹೀರಾತು ಬ್ಯಾನರ್‌, ಬಾವುಟ, ಬಂಟಿಂಗ್ಸ್‌ಗಳನ್ನು ಕೂಡಲೇ ತೆಗೆದುಹಾಕಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯಾವೆಲ್ಲ ಪ್ಲಾಸ್ಟಿಕ್‌ ನಿಷೇಧ?
ಅಂಗಡಿಗಳಲ್ಲಿ ಮಾರಾಟ ಮಾಡಲಾಗುವ ಎಲ್ಲ ರೀತಿಯ ಪ್ಲಾಸ್ಟಿಕ್‌ಗಳಿಗೂ ನಿಷೇಧ ಹೇರಲಾಗಿದೆ. ಅಂದರೆ ಜೂಸ್‌ ಕುಡಿಯಲು ಬಳಕೆ ಮಾಡುವ ಸ್ಟ್ರಾ ಕೂಡ ನಿಷೇಧದ ಪಟ್ಟಿಯಲ್ಲಿದೆ ಎನ್ನುತ್ತಾರೆ ಅಧಿಕಾರಿಗಳು. ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌, ಪ್ಲಾಸ್ಟಿಕ್‌ ಭಿತ್ತಿಪತ್ರ, ಪ್ಲಾಸ್ಟಿಕ್‌ ತೋರಣ, ಪ್ಲಾಸ್ಟಿಕ್‌ ಬಾವುಟ, ಪ್ಲಾಸ್ಟಿಕ್‌ ತಟ್ಟೆ, ಪ್ಲಾಸ್ಟಿಕ್‌ ಲೋಟ, ಪ್ಲಾಸ್ಟಿಕ್‌ ಚಮಚ, ಕ್ಲಿಂಗ್‌ ಫಿಲ್ಮ್ಸ್ , ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್‌ ಹಾಳೆ, ಥರ್ಮಕೋಲ್‌ ಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಪ್ಲಾಸ್ಟಿಕ್‌ ಮೈಕ್ರೋ ಬೀಡ್ಸ್‌ನಿಂದ ತಯಾರಾದ ವಸ್ತುಗಳ ತಯಾರಿಕೆ, ಸರಬರಾಜು, ಬಳಕೆಗೂ ನಿಷೇಧ ಹೇರಲಾಗಿದೆ.

ಮರುಬಳಕೆಗೆ ಅವಕಾಶ
ಸ್ಥಳೀಯಾಡಳಿತಗಳು ಪ್ಲಾಸ್ಟಿಕ್‌ ವಶಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿವೆ. ಈ ಪ್ಲಾಸ್ಟಿಕ್‌ಗಳನ್ನು ನಮ್ಮ ವಶಕ್ಕೆ ನೀಡಿದರೆ ಅದನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗುತ್ತದೆ. ಈ ಪ್ಲಾಸ್ಟಿಕ್‌ಗಳನ್ನು ಸುಡಲು ಅಥವಾ ಹೂಳಲು ಅವಕಾಶವಿಲ್ಲ. ಮರುಬಳಕೆಗೆ ಮಾತ್ರ ಅವಕಾಶವಿದೆ.
– ಎಚ್‌.ಕೆ. ಕೃಷ್ಣಮೂರ್ತಿ
ಸಹಾಯಕ ಆಯುಕ್ತರು, ಪುತ್ತೂರು

ಗಣೇಶ್‌ ಎನ್‌. ಕಲ್ಲರ್ಪೆ 

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.