ವಯಸ್ಸಾಯಿತೆಂದು ಕೊರಗದೆ ಲವಲವಿಕೆಯಿಂದಿರಿ
Team Udayavani, Oct 3, 2018, 5:27 PM IST
ಹಾವೇರಿ: ಎಲ್ಲರಿಗೂ ಬಾಲ್ಯ, ಯೌವ್ವನ ಹಾಗೂ ವೃದ್ಧಾಪ್ಯ ಸಹಜವಾದ ಪ್ರಕ್ರಿಯೆ ಆದರೆ ವಯಸ್ಸಾಯಿತು ಎಂದು ಕೊರಗುತ್ತ ಸತ್ತವರಂತೆ ಬದುಕಬಾರದು. ಭೂಮಿ ಮೇಲೆ ಇರುವಷ್ಟು ದಿನ ಲವಲವಿಕೆ ಚಟುವಟಿಕೆಯಿಂದ ಜೀವನ ನಡೆಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಸ್.ಎಚ್. ರೇಣುಕಾದೇವಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ನಿವೃತ್ತ ನೌಕರರ ಸಂಘದ ಆಶ್ರಯದಲ್ಲಿ ಹೊಸಮಠದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಭೂಮಿ ಯಾರನ್ನೂ ಲೆಕ್ಕಕ್ಕೆ ಇಟ್ಟಿಲ್ಲ ಹಾಗೂ ಭೂಮಿಗೆ ಯಾರೂ ಅನಿವಾರ್ಯರಲ್ಲ. ಇದನ್ನು ಮೊದಲು ತಿಳಿಯಬೇಕು. ಇಳಿ ವಯಸ್ಸಿನಲ್ಲಿ ಸಾಮಾಜಿಕ ಕಾರ್ಯಗಳಲ್ಲಿ, ಪರೋಪಕಾರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಆರ್ಥಿಕವಾಗಿ ಸದೃಢವಾಗಿದ್ದವರು ದುರ್ಬಲರಿಗೆ ಸಹಾಯ ಮಾಡಬೇಕು. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಿಬೇಕು ಎಂದು ಹೇಳಿದರು. ವಯಸ್ಸು ದೇಹಕ್ಕೆ ಹೊರತು ಮನಸ್ಸಿಗಲ್ಲ, 60ಕ್ಕೆ ಅರಳುಮರಳು ಅಲ್ಲ ‘ಮರಳಿ ಅರಳು’ ಎಂದು ತಿಳಿದು ಹಿರಿಯರು ಸದಾಕಾಲ ಲವಲವಿಕೆ, ಉತ್ಸಾಹದಿಂದ ಜೀವನ ನಡೆಸಬೇಕು. ಮನೆಯಲ್ಲಿ ನನಗೆ ಗೌರವ ಕೊಡುತ್ತಿಲ್ಲ, ನನ್ನ ಮಾತು ಯಾರೂ ಕೇಳುತ್ತಿಲ್ಲ ಎಂಬ ಮನೋಭಾವದಿಂದ ಮೊದಲು ಹೊರಬನ್ನಿ. ನಿಮ್ಮನ್ನು ಯಾರು ಗೌರವಿಸುತ್ತಾರೋ ಅವರೊಂದಿಗೆ ಬೆರೆಯಿರಿ. ನಿಮ್ಮ ಸ್ನೇಹಿತರು, ಅಕ್ಕಪಕ್ಕದವರನ್ನು ಪ್ರೀತಿಸಿ, ಬೇರೆಯವರನ್ನು ನಗಿಸಿ, ನೀವು ಸದಾ ನಗುತ್ತಿರಿ ಎಂದರು.
ಹಿರಿಯ ಸಿವಿಲ್ ನ್ಯಾಯಾ ಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೈ.ಎಲ್. ಲಾಡಖಾನ್ ಮಾತನಾಡಿ, ಹಿರಿಯ ನಾಗರಿಕರ ಕಾಯ್ದೆಯು 2007ರಲ್ಲಿ ಜಾರಿಗೆ ಬಂದಿದ್ದು, ಮಕ್ಕಳಿಂದ ತಿರಸ್ಕಾರಕ್ಕೊಳಗಾದ ಹಾಗೂ ಸೌಲಭ್ಯಗಳಿಂದ ವಂಚಿತರಾದ ಹಿರಿಯ ನಾಗರಿಕರು ಕಾನೂನು ಮೂಲಕ ನ್ಯಾಯ ಪಡೆದುಕೊಳ್ಳಬೇಕು. ಹುಟ್ಟಿನ ಪೂರ್ವದಿಂದ ಮರಣದ ವರೆಗೆ ಕಾನೂನು ಅವಶ್ಯಕ. ದೇಶದಲ್ಲಿನ ಕಾನೂನು ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ನಾಗರಿಕ ಸಮಾಜದಲ್ಲಿನ ನಮ್ಮ ಹಕ್ಕು ಹಾಗೂ ಕರ್ತವ್ಯವನ್ನು ಅರಿಯಬೇಕು ಎಂದರು. ಸನ್ಮಾನ: ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಿಂದ ಸಿದ್ದುಮತಿ ನೆಲವಿಗಿ ಹಾಗೂ ಜಿ.ಎಂ. ಮಠದ, ಶಿಕ್ಷಣ ಕ್ಷೇತ್ರದಿಂದ ಬಸಮ್ಮ ಹಳಕೊಪ್ಪ, ಸಾಮಾಜಿಕ ಕ್ಷೇತ್ರದಿಂದ ಚನ್ನಬಸಪ್ಪ ವೀರಪ್ಪ ಶೆಟ್ಟರ ಹಾಗೂ ಕಣಸಿದ್ಧಗೇರಿಯ ಹಾಲಪ್ಪ ಬಳಗಾವಿ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲ ಸಿ.ಜಿ. ನೆಗಳೂರ, ಹಿರಿಯ ನಾಗರಿಕರ ಕಾಯ್ದೆ ಕುರಿತು ಹಾಗೂ ನಗರ ಪೊಲೀಸ್ ಠಾಣೆಯ ಎಸ್.ಬಿ.ಸಾಗರ ಪೊಲೀಸ್ ದೂರು ಪ್ರಾಧಿಕಾರ ರಚನೆಯ ಬಗ್ಗೆ ಉಪನ್ಯಾಸ ನೀಡಿದರು. ಅಪರ ಜಿಲ್ಲಾ ಧಿಕಾರಿ ವಿನೋದ ಹೆಗ್ಗಳಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ದೇವರಾಜ ನಾಯ್ಡು ಹಾಗೂ ನಿವೃತ್ತ ಕೃಷಿ ಅಧಿಕಾರಿ ಎಸ್.ಬಿ.ಅಣ್ಣಿಗೇರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು