ಮರದಲ್ಲಿ ನೇತಾಡುವ ಗೊಂಬೆಗಳು 


Team Udayavani, Oct 4, 2018, 6:00 AM IST

v1-island-1-copy.jpg

ದೇವರಿಗೆ ಹರಕೆ ಕಟ್ಟಿ, ಅಶ್ವತ್ಥನ ಮರಕ್ಕೆ ಅರಿಶಿನ ದಾರ ಕಟ್ಟೋದನ್ನು ನೋಡಿರುತ್ತೀರಿ. ಆದರೆ, ಮೆಕ್ಸಿಕೋದ ಈ ದ್ವೀಪದಲ್ಲಿರೋ ಮರಗಳಿಗೆ ಹಳೆಯ ಗೊಂಬೆಗಳನ್ನು ಕಟ್ಟಲಾಗುತ್ತದೆ. ಪ್ರತಿ ಮರದಲ್ಲೂ ನೇತಾಡುತ್ತಿರೋ ಈ ಗೊಂಬೆಗಳು ಮಾತಾಡುತ್ತವೆ ಅಂತ ನಂಬುವವರೂ ಇದ್ದಾರೆ…  

ಸುತ್ತಲೂ ನೀಲಿ ಸಮುದ್ರ, ಹಸಿರು ತುಂಬಿದ ಗಿಡಗಳು, ಸುಂದರ ವಾತಾವರಣ… ದ್ವೀಪ ಎಂದಾಕ್ಷಣ ಕಣ್ಮುಂದೆ ಸುಳಿಯುವ ಚಿತ್ರಣವಿದು. ಅದಕ್ಕೆಂದೇ ದ್ವೀಪ, ಪ್ರಕೃತಿ ಪ್ರಿಯರ, ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಆದರೆ, ಪ್ರವಾಸಿಗರನ್ನು ಬೆಚ್ಚಿಬೀಳಿಸುವಂತ ದ್ವೀಪವೊಂದಿದೆ. ಅದಿರುವುದು ಮೆಕ್ಸಿಕೋದ ಕ್ಯಾನೊನ್‌ ಎಂಬ ಪುಟ್ಟ ಹಳ್ಳಿಯಲ್ಲಿ. ಈ ಪ್ರದೇಶ ಭಯ ಹುಟ್ಟಿಸುವಂತಿರುವುದಕ್ಕೆ ಮುಖ್ಯ ಕಾರಣ ಇಲ್ಲಿನ ಮರಗಳಲ್ಲಿ ನೇತಾಡುವ ಗೊಂಬೆಗಳು!

ಗೊಂಬೆಗಳ ಹಿಂದಿನ ಕಥೆ
ಈ ಗೊಂಬೆಗಳ ಹಿಂದೊಂದು ರೋಚಕ ಕಥೆಯಿದೆ. ಜೂಲಿಯನ್‌ ಸಂತಾನ ಬರೆರಾ ಎಂಬುವವರು ಒಮ್ಮೆ ಈ ದ್ವೀಪದಲ್ಲಿ ಸುತ್ತಾಡುತ್ತಿದ್ದರು. ಹೆಣ್ಣುಮಗುವೊಂದು ನೀರಿನಲ್ಲಿ ತೇಲಿಕೊಂಡು ಹೋಗುವುದು ಅವರ ಕಣ್ಣಿಗೆ ಬಿತ್ತು. ಜೊತೆಗೇ ಒಂದು ಗೊಂಬೆಯೂ ತೇಲುತ್ತಿತ್ತು. ಪ್ರಯತ್ನಪಟ್ಟರೂ ಅವರಿಗೆ ಆ ಮಗುವನ್ನು ಕಾಪಾಡಲು ಸಾಧ್ಯವಾಗಲಿಲ್ಲ, ಗೊಂಬೆ ಮಾತ್ರ ಅವರ ಕೈಗೆ ಸಿಕ್ಕಿತು. ಮಗುವನ್ನು ರಕ್ಷಿಸಲಾಗದ ಕೊರಗು ಅವರನ್ನು ಕಾಡಿದಾಗ, ಜೂಲಿಯನ್‌ ಆ ಗೊಂಬೆಯನ್ನು ಮೇಲಕ್ಕೆತ್ತಿ ತಂದು ಮರಕ್ಕೆ ನೇತು ಹಾಕಿದರು. ಮುಂದೆ ಇದೇ ಪರಿಪಾಠವನ್ನು ಸ್ಥಳೀಯರು ಮುಂದುವರಿಸಿಕೊಂಡು ಬಂದರು. ಇಲ್ಲಿರುವ ಗೊಂಬೆಗಳೆಲ್ಲವೂ ಜನರ ಆಪ್ತರ ನೆನಪನ್ನು ತಮ್ಮಲ್ಲೇ ಉಳಿಸಿಕೊಂಡಿವೆ.

ನೀರಿನಲ್ಲಿ ಮುಳುಗಿದ ಜೂಲಿಯನ್‌
ಅವರು ಅಷ್ಟಕ್ಕೇ ಸುಮ್ಮನಾಗುವುದಿಲ್ಲ. ಎಲ್ಲೇ ಹಳೆಯ ಗೊಂಬೆಗಳನ್ನು ಕಂಡರೂ ಅವುಗಳನ್ನು ತಂದು ಈ ದ್ವೀಪದ ಮರಗಳಿಗೆ ನೇತು ಹಾಕುವುದು ಜೂಲಿಯನ್‌ರ ಹವ್ಯಾಸವಾಗಿಬಿಟ್ಟಿತು. ಅವರು ಐವತ್ತು ವರ್ಷಗಳಿಂದ ಸಂಗ್ರಹಿಸಿದ ಗೊಂಬೆಗಳೆಲ್ಲಾ ಈ ಮರಗಳಲ್ಲಿವೆಯಂತೆ. ವಿಚಿತ್ರವೆಂದರೆ, 2001ರಲ್ಲಿ ಜೂಲಿಯನ್‌ ಕೂಡ ಇದೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು. ಅಲ್ಲಿಂದ ಇಲ್ಲಿಯವರೆಗೂ ಇದೊಂದು ಜನಪ್ರಿಯ ಸ್ಥಳವಾಯಿತು. 

ಅಲ್ಲದೆ ಅನೇಕ ಗಾಳಿಸುದ್ದಿಗಳು ಹರಡಿದವು. ಈ ಗೊಂಬೆಗಳೆಲ್ಲ ಮಾತನಾಡುತ್ತವಂತೆ. ನೀರಿನಲ್ಲಿ ಮುಳುಗಿ ಸತ್ತ ಆ ಹುಡುಗಿಯ ಆತ್ಮ, ದ್ವೀಪದಲ್ಲಿ ಸುತ್ತುತ್ತಿದೆ ಎಂದು ನಂಬುವವರೂ ಇದ್ದಾರೆ. ಈಗಲೂ ರಾತ್ರಿ ಸಮಯದಲ್ಲಿ ಈ ಪ್ರದೇಶಕ್ಕೆ ಬರಲು ಜನ ಹೆದರುತ್ತಾರೆ. 

– ಪುರುಷೋತ್ತಮ್‌

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.