ಸಮಸ್ಯೆಗಳ ಆಲಿಕೆಗೆ ಸೀಮಿತವಾದ ಸಭೆ
Team Udayavani, Oct 4, 2018, 7:00 AM IST
ರಾಮನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆದಿದ್ದ ಕಾರ್ಯಕರ್ತರ ಸಭೆಯಲ್ಲಿ ರಾಮನಗರ ಉಪಚುನಾವಣೆಯ ಬಗ್ಗೆ ವಿಷಯ ಪ್ರಸ್ತಾಪವೇ ಆಗಲಿಲ್ಲ. ಕಾರ್ಯಕರ್ತರು ದೂರುಗಳಿಗೆ ಸಭೆ ಸೀಮಿತವಾಯಿತು.
ಕೇತಿಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಬುಧವಾರ ಚನ್ನಪಟ್ಟಣ ಮತ್ತು ರಾಮನಗರ ಕಾರ್ಯಕರ್ತರ ಸಭೆ ನಡೆಯಿತು. ರಾಮನಗರ ಉಪಚುನಾವಣೆ ಹಿನ್ನೆಲೆಯಲ್ಲೇ ಸಭೆ ಆಯೋಜಿಸಲಾಗಿದೆ ಎಂದು ಬಹುತೇಕ ಕಾರ್ಯಕರ್ತರು ಭಾವಿಸಿದ್ದರು.
ಆದರೆ, ಕುಮಾರಸ್ವಾಮಿ ಅವರೇ ಸ್ವತಃ ಇದು ಉಪಚುನಾವಣೆಗೆ ಸಂಬಂಧಿಸಿದ ಸಭೆ ಅಲ್ಲ ಎಂದು ಸ್ಪಷ್ಟ ಪಡಿಸಿದರು. ಸಮಸ್ಯೆ ಆಲಿಸಲೆಂದೇ ಕರೆದ ಸಭೆ, ಉಪಚುನಾವಣೆ ಹಿನ್ನೆಲೆಯಲ್ಲಿ ಎಂಬುದು ಮಾಧ್ಯಮಗಳ ಸೃಷ್ಟಿ ಎಂದರು. ಸರ್ಕಾರ ಬಿದ್ದೇ ಹೋಯ್ತು ಎಂದು ಕೆಲ ಮಾಧ್ಯಮಗಳು ಹೇಳಿದವು. ಆದರೆ ತಮಗೆ 5 ವರ್ಷ ಸರ್ಕಾರ ಹೇಗೆ ನಡೆಸಬೇಕು ಎಂಬುದು ಗೊತ್ತು ಎಂದರು.
ಅಧಿಕಾರಿಗಳ ಮೇಲೆ ದೂರು, ಚನ್ನಪಟ್ಟಣ ಕೆರೆಗಳಿಗೆ ನೀರು ಬಿಟ್ಟಿಲ್ಲ ಹೀಗೆ ಅನೇಕ ಸಮಸ್ಯೆಯನ್ನು ಕಾರ್ಯಕರ್ತರು ಹೇಳಿಕೊಂಡರು. ಅಗತ್ಯ ಕ್ರಮ ವಹಿಸುವುದಾಗಿ ಸಿಎಂ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ