ಶಾಸಕ ಆನಂದ್ ಸಿಂಗ್, ನಾಗೇಂದ್ರಗೆ ಜಾಮೀನು ರಹಿತ ವಾರೆಂಟ್
Team Udayavani, Oct 4, 2018, 6:40 AM IST
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಇಬ್ಬರು ಕಾಂಗ್ರೆಸ್ ಶಾಸಕರು ಸೇರಿದಂತೆ ಮೂವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್ ಸಿಂಗ್, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಮತ್ತು ಆನಂದ್ಸಿಂಗ್ ಸಂಬಂಧಿ ಶ್ಯಾಮರಾಜ್ ಸಿಂಗ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಬಿ.ವಿ.ಪಾಟೀಲ… ವಾರೆಂಟ್ ಜಾರಿ ಮಾಡಿದ್ದಾರೆ.
ಪ್ರಕರಣದ ಆರೋಪಿ ಸ್ಥಾನದಿಂದ ಕೈಬಿಡುವಂತೆ ಆನಂದ್ ಸಿಂಗ್ ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಅರ್ಜಿ ವಜಾಗೊಳಿಸಿ, ಖುದ್ದು ಹಾಜರಾಗುವಂತೆ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದ್ದರು. ಆದರೆ ಈ ಪ್ರಕರಣ ಸಂಬಂಧ 11 ಆರೋಪಿಗಳ ಪೈಕಿ 9 ಆರೋಪಿಗಳು ಮಾತ್ರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮೂವರು ಆರೋಪಿಗಳಾದ ನಾಗೇಂದ್ರ, ಆನಂದ್ ಸಿಂಗ್ ಮತ್ತು ಶ್ಯಾಮರಾಜ್ ಸಿಂಗ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.
2009ರಲ್ಲಿ ಆನಂದ್ಸಿಂಗ್ ಒಡೆತನದ ವೈಷ್ಣವಿ ಮಿನರಲ್ಸ… ಕಂಪೆನಿಯಿಂದ ಅದಿರನ್ನು ಸಿಂಗಾಪುರ ಮತ್ತು ಚೀನಾಕ್ಕೆ ಅಕ್ರಮವಾಗಿ ಸಾಗಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ನಾಗೇಂದ್ರ ಒಡೆತನದ ಕಂಪೆನಿಯು ಈ ಅಕ್ರಮದಲ್ಲಿ ಭಾಗಿಯಾಗಿದೆ ಎಂಬ ಆರೋಪ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
MUST WATCH
ಹೊಸ ಸೇರ್ಪಡೆ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ