ಸವಣೂರು-ಕಾಣಿಯೂರು: ಚರಂಡಿಯಲ್ಲೇ  ವಿದ್ಯುತ್‌ ಕಂಬ


Team Udayavani, Oct 4, 2018, 11:29 AM IST

4-october-5.gif

ಬೆಳಂದೂರು: ಸವಣೂರಿನ 33/11 ಕೆ.ವಿ. ವಿದ್ಯುತ್‌ ವಿತರಣ ಕೇಂದ್ರದ 5 ಎಂವಿಎ ಪವರ್‌ ಟ್ರಾನ್ಸ್‌ಫಾರ್ಮರ್‌ ಅನ್ನು ಉನ್ನತೀಕರಿಸುವ ಸಲುವಾಗಿ ಸವಣೂರಿನಿಂದ ಕಾಣಿಯೂರು ಕಡೆಗೆ ಎಚ್‌ಟಿ ವಿದ್ಯುತ್‌ ತಂತಿ (11 ಕೆ.ವಿ.) ಎಳೆಯುವ ನಿಟ್ಟಿನಲ್ಲಿ ಕಂಬಗಳನ್ನು ಅಳವಡಿಸಲಾಗುತ್ತಿದೆ.

ಆಲಂಕಾರು, ಕಾಣಿಯೂರು, ಏಣಿತ್ತಡ್ಕ, ಭಕ್ತಕೋಡಿ ಫೀಡರ್‌ಗಳಿಗೆ ವಿದ್ಯುತ್‌ ಸರಬರಾಜುಗೊಳಿಸಲು ಹೊಸದಾಗಿ ಅಳವಡಿಸುವ ಕಂಬಗಳನ್ನು ಮುಖ್ಯರಸ್ತೆಯ ಚರಂಡಿಗಳಲ್ಲಿ ಹಾಕಲಾಗಿದೆ.

ಹೂಳು ತೆಗೆಯಲೂ ತೊಡಕು
ಸವಣೂರು-ಕಾಣಿಯೂರು ರಾಜ್ಯ ಹೆದ್ದಾರಿಯ ಚರಂಡಿಯಲ್ಲೇ ಕಂಬಗಳನ್ನು ಅಳವಡಿಸಿರುವುದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯದಂತಾಗಿದೆ. ಅನೇಕ ಕಡೆ ಸ್ಟಡ್‌ಪೋಲ್‌ (ಸಪೋರ್ಟಿವ್‌ ಕಂಬ) ಗಳನ್ನು ಚರಂಡಿಗೆ ಹಾಕಲಾಗಿದ್ದು, ಇನ್ನು ಮುಂದೆ ಜೆಸಿಬಿಯಲ್ಲಿ ಚರಂಡಿ ಹೂಳು ತೆಗೆಯುವಲ್ಲೂ ತೊಡಕಾಗಿ ಪರಿಣಮಿಸಲಿದೆ.

ಇಲಾಖೆ ಗಮನ ಹರಿಸಲಿ
ಚರಂಡಿ ಬ್ಲಾಕ್‌ ಆದಲ್ಲಿ ನೀರು ರಸ್ತೆಯಲ್ಲೇ ಹರಿದು ಹೋಗುವ ಪರಿಣಾಮ ರಸ್ತೆ ಹದಗೆಡಲು ಇದೂ ಒಂದು ಕಾರಣವಾಗಲಿದೆ. ಆದ್ದರಿಂದ ಲೋಕೋಪಯೋಗಿ ಇಲಾಖೆಯೂ ಗಮನ ಹರಿಸುವುದು ಅಗತ್ಯ. ಗುತ್ತಿಗೆದಾರರು ಚರಂಡಿ ಬಿಟ್ಟು ಅಕ್ಕಪಕ್ಕದಲ್ಲಿ ಕಂಬ ಅಳವಡಿಸಬೇಕೆನ್ನುವುದು ಸ್ಥಳೀಯರ ಆಗ್ರಹವಾಗಿದೆ.

ನಿರ್ಲಕ್ಷ್ಯ ಬೇಡ
ಸಮರ್ಪಕ ಚರಂಡಿ ವ್ಯವಸ್ಥೆ ಮಾಡಿ ರಸ್ತೆ ಕೆಡದಂತೆ ಜವಾಬ್ದಾರಿ ವಹಿಸುತ್ತಿರುವ ಲೋಕೋಪಯೋಗಿ ಇಲಾಖೆ ಈ ನಿಟ್ಟಿನಲ್ಲಿ ನಿರ್ಲಕ್ಷ್ಯ  ಹೊಂದಬಾರದು. ಗುತ್ತಿಗೆದಾರರು ಚರಂಡಿಗೆ ಕಂಬ ಅಳವಡಿಸಿ ನೀರು ಹರಿಯಲು ತೊಡಕಾಗುವಂತೆ ಮಾಡಿರುವುದು ಸರಿಯಲ್ಲ. ಇದರಿಂದಾಗಿ ಮುಂದಿನ ದಿನಗಳಲ್ಲಿ ಚರಂಡಿ ಹೂಳು ತೆಗೆಯಲೂ ಸಾಧ್ಯವಾಗದು.
ಕರುಣಾಕರ ಪೂಜಾರಿ ಪಟ್ಟೆ,
  ಉಪಾಧ್ಯಕ್ಷರು, ಪ್ರಾ.ಕೃ.ಸ.ಸ. ಸಂಘ, ಸವಣೂರು

ಮೇಲಧಿಕಾರಿಗಳ ಗಮನಕ್ಕೆ ತರುವೆ 
ಸವಣೂರಿನಿಂದ ಹೊಸದಾಗಿ ಕಾಣಿಯೂರು, ಆಲಂಕಾರು ಫೀಡರ್‌ಗಳಿಗೆ ಎಚ್‌ಟಿ ಲೈನ್‌ ಎಳೆಯಲಾಗುತ್ತಿದೆ. ಕೆಲವೊಂದು ಕಡೆ ಗುತ್ತಿಗೆದಾರರು ಚರಂಡಿಗೆ ಕಂಬ ಅಳವಡಿಸಿದ್ದಾರೆ. ಕಂಬವನ್ನು ಚರಂಡಿಯಲ್ಲಿ ಅಳವಡಿಸದಂತೆ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಈ ಕುರಿತು ಮೇಲಧಿಕಾರಿಯವರ ಗಮನಕ್ಕೂ ತರಲಿದ್ದೇನೆ.
– ನಾಗರಾಜ್‌ ಕೆ.,
ಜೆಇ, ಸವಣೂರು ಮೆಸ್ಕಾಂ

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.