ಕಾರಾಗೃಹದಲ್ಲಿ ಗಾಂಧಿ ಜಯಂತಿ ಆಚರಣೆ


Team Udayavani, Oct 4, 2018, 4:20 PM IST

4-october-18.gif

ಹಾವೇರಿ: ಇಲ್ಲಿಯ ಬಸವೇಶ್ವರ ನಗರದ ಮಹಿಳಾ ನಾಗರಿಕ ವೇದಿಕೆ ಗಾಂಧಿ ಜಯಂತಿ ಜಿಲ್ಲಾ ಕಾರಾಗೃಹದ ವಿಚಾರಣಾ ಕೈದಿಗಳೊಂದಿಗೆ ವಿಶಿಷ್ಟವಾಗಿ ಆಚರಿಸಿತು. ಜಿಲ್ಲಾ ಕಾರಾಗೃಹದ ಗ್ರಂಥಾಲಯಕ್ಕೆ ಭೇಟಿ ಕೊಟ್ಟ ವೇದಿಕೆ ಸದಸ್ಯರು ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಕೈದಿಗಳ ಓದಿಗಾಗಿ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾರಾಗೃಹದ ಅಧೀಕ್ಷಕ ಟಿ.ಬಿ. ಭಜಂತ್ರಿ ಮಾತನಾಡಿ, ಮಹಿಳೆ ಸಮಾಜದಲ್ಲಿ ಬೆರೆತು ತೊಡಗಿಸಿಕೊಳ್ಳಬೇಕೆಂಬ ಗಾಂಧೀಜಿಯವರ ಆಶಯದಂತೆ ಮಹಿಳಾ ವೇದಿಕೆಯವರು ಕೈದಿಗಳೊಂದಿಗೆ ಗಾಂಧಿ ಜಯಂತಿ ಆಚರಿಸಲು ಬಂದದ್ದು ಸಂತೋಷ ಸಂಗತಿ. ನೊಂದವರೊಂದಿಗೆ ಸಂತೋಷ ಹಂಚಿಕೊಳ್ಳುವುದು ಬಲು ದೊಡ್ಡ ಪ್ರೀತಿ ಎಂದರು.

ವೇದಿಕೆಯ ಅಧ್ಯಕ್ಷೆ ಅನುಪಮಾ ಹಿರೇಮಠ ಮಾತನಾಡಿ, ತಪ್ಪು ಮಾಡಿಯೋ, ಮಾಡದೆಯೋ ಬಂಧಿತರು ಜೈಲಿನೊಳಗೆ ನೋವು ಅನುಭವಿಸುತ್ತಿದ್ದರೆ ಕುಟುಂಬದ ಸದಸ್ಯರು ಹೊರಗೆ ಮನೆಯಲ್ಲಿ ಯಾತನೆಯನ್ನು ಅನುಭವಿಸುತ್ತಿರುತ್ತಾರೆ. ಶಿಕ್ಷೆ ಎಂಬುದು ಎರಡೂ ಕಡೆಗೆ ಇರುತ್ತದೆ. ಪರಿವರ್ತನೆಯೇ ದುಃಖಕ್ಕೆ ಪರಿಹಾರ ಎಂಬ ಗಾಂಧೀಜಿ ಅವರ ಮಾತನ್ನು ಅನುಸರಿಸುವಂತಾಗಬೇಕು ಎಂದರು. ನಗರಸಭೆ ಮಾಜಿ ಅಧ್ಯಕ್ಷೆ ರತ್ನಾ ಭೀಮಕ್ಕನವರ ಮಾತನಾಡಿ, ತಪ್ಪುಗಳಿಗೆ ಪ್ರಾಯಶ್ಚಿತ ಪಟ್ಟು ಹೊಸ ಜೀವನ ನಡೆಸುವ ಸಂಕಲ್ಪವು ಸೆರೆವಾಸದಲ್ಲಿ ಆದರೆ, ಮಹಾಪರಿವರ್ತನೆ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಪಾರ್ವತಮ್ಮಾ ಹಲಗಣ್ಣನವರ, ತೇಜಶ್ವಿ‌ನಿ ಕಾಶೆಟ್ಟಿ, ಶಶಿಕಲಾ ಮಠದ, ಜಯಶ್ರೀ ಕಾರಂಜಿ, ನಿರ್ಮಲಾ ಯತ್ನಳ್ಳಿ, ಕಸ್ತೂರಮ್ಮಾ ರಿತ್ತಿ ಮುಂತಾದವರು ಪಾಲ್ಗೊಂಡಿದ್ದರು. ಗಾಂಧಿ ಭಜನ ಮತ್ತು ದೇಶ ಭಕ್ತಿಗೀತೆಗಳನ್ನು ಕೈದಿಗಳೊಂದಿಗೆ ಮಮತಾ ಹಿಂಚಿಗೇರಿ ಮುಂತಾದವರು ಹಾಡಿ ಮನಗೆದ್ದರು. ರಾಜೇಶ್ವರಿ ಸಾರಂಗಮಠ ಗಾಂಧೀಜಿ ಕುರಿತು ಕಾವ್ಯವಾಚನ ಮಾಡಿದರು. 

ವೇದಿಕೆಯ ಕಾರ್ಯದರ್ಶಿ ಲತಾ ಹಳಕೊಪ್ಪ ಪ್ರಾರ್ಥನೆ ಹಾಡಿದರು. ಜಿಲ್ಲಾ ಕಾರಾಗೃಹದ ಸಂದರ್ಶಕ ಮಂಡಳಿಯ ಸದಸ್ಯೆ ರೇಣುಕಾ ಗುಡಿಮನಿ ಸ್ವಾಗತಿಸಿದರು. ಕವಿತಾಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರೆ, ಸರೋಜಾ ಬಣಕಾರ ನಿರೂಪಿಸಿದರು. ಪ್ರೇಮಾ ಬೋಗಾರ ವಂದಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.