ಜೆಕೆಗೆ ವಾರಂಟ್‌


Team Udayavani, Oct 5, 2018, 6:00 AM IST

s-19.jpg

ಒಂದು ಚಿತ್ರ ಮೂವರು ಸಂಗೀತ ನಿರ್ದೇಶಕರು, ಮೂವರು ಛಾಯಾಗ್ರಾಹಕರು..!
– ಇದು “ವಾರಂಟ್‌’ ಕಥೆಯೊಳಗಿನ ಗುಟ್ಟು. ನಾಗೇಂದ್ರ ಅರಸ್‌ ಸದ್ದಿಲ್ಲದೆಯೇ ಮುಗಿಸಿದ ಚಿತ್ರವಿದು. ಚಿತ್ರದ ಬಗ್ಗೆ ಹೇಳಲೆಂದೇ ತಂಡ ಕಟ್ಟಿಕೊಂಡು ಮಾಧ್ಯಮ ಮುಂದೆ ಬಂದಿದ್ದರು ನಾಗೇಂದ್ರ ಅರಸ್‌. ಮೊದಲು ಮಾತು ಶುರುಮಾಡಿದ್ದು ನಿರ್ದೇಶಕ ನಾಗೇಂದ್ರ ಅರಸ್‌, “ಇದು ಆ್ಯಕ್ಷನ್‌ ಚಿತ್ರ. ಒಂದು ರೀತಿಯ ರಿವೇಂಜ್‌ ಕಥೆ. ಹಾಗಂತ, ಇಲ್ಲಿ ಅಂಡರ್‌ವರ್ಲ್ಡ್ ಕಥೆ ಇಲ್ಲ. ನಡೆದ ಒಂದು ಘಟನೆಯನ್ನು ಹೇಗೆ ಪತ್ತೆ ಹಚ್ಚುತ್ತಾರೆ ಎಂಬುದೇ ಕಥೆ. ಇಲ್ಲಿ ಮನರಂಜನೆಗೂ ಜಾಗವಿದೆ. ಸೆಂಟಿಮೆಂಟ್‌ ಅಂಶಗಳೂ ಇವೆ. ಬ್ಯಾಂಕಾಕ್‌ನಲ್ಲಿ 13 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಬೆಂಗಳೂರಿನಲ್ಲಿ 20 ದಿನ ಚಿತ್ರೀಕರಿಸಿದ್ದು, ಈಗ ಚಿತ್ರ ಡಬ್ಬಿಂಗ್‌ ಹೋಗಲು ಸಜ್ಜಾಗಿದೆ. ಚಿತ್ರದಲ್ಲಿ ಮನೋಹರ್‌, ಮ್ಯಾಥು ಮನು ಸಂಗೀತವಿದೆ. ಶ್ರೀಧರ್‌ ಹಿನ್ನೆಲೆ ಸಂಗೀತವಿದೆ. ಇನ್ನು, ಡಿಸೋಜ, ಎಂ.ಬಿ.ಹಳ್ಳಿಕಟ್ಟಿ ಮತ್ತು ಸಂದೀಪ್‌ ಮಲ್ಲಿಕಾರ್ಜುನ್‌ ಅವರ ಛಾಯಾಗ್ರಹಣವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಡಿಸೆಂಬರ್‌ ಅಥವಾ ಜನವರಿ ಒಳಗೆ “ವಾರಂಟ್‌’ ಬರಲಿದೆ’ ಎಂದು ಹೇಳಿಕೊಂಡರು ನಾಗೇಂದ್ರ ಅರಸ್‌.

ಚಿತ್ರಕ್ಕೆ ಜೆಕೆ ನಾಯಕ. ಅವರಿಗೆ ಇದೊಂದು ಬೇರೆ ರೀತಿಯ ಚಿತ್ರವಂತೆ.”ಕಳೆದ ಒಂದುವರೆ ವರ್ಷದ ಹಿಂದೆ ಶುರುವಾದ ಚಿತ್ರವಿದು. ಕಥೆ ಬರೆದಿದ್ದ ನಿರ್ಮಾಪಕಿ ಮನೀಷಾ ಅವರು ಒಮ್ಮೆ ಕಥೆ ಮತ್ತು ಪಾತ್ರ ವಿವರಿಸಿದರು. ಚೆನ್ನಾಗಿತ್ತು. ಸಾಕಷ್ಟು ಅಂಶಗಳಿದ್ದವು. ಜೊತೆಗೆ ನಾಗೇಂದ್ರ ಅರಸ್‌ ನಿರ್ದೇಶನ ಅಂತ ಗೊತ್ತಾಯ್ತು. ಅವರ ಜೊತೆಗೆ “ಜಸ್ಟ್‌ ಲವ್‌’ .”ಮೇ 1′ ಚಿತ್ರ ಮಾಡಿದ್ದೆ. ಇದು ಮೂರನೇ ಸಿನಿಮಾ. ಇಲ್ಲಿ ಕಮರ್ಷಿಯಲ್‌ ಅಂಶಗಳಿವೆ. ಚಿತ್ರದ ಬಗ್ಗೆ ಹೇಳುವುದಾದರೆ, ವ್ಯಕ್ತಿಯ ಬದುಕಿನಲ್ಲೊಂದು ತಪ್ಪು ನಡೆದಾಗ, ಆ ವ್ಯಕ್ತಿ ಹೇಗಾಗುತ್ತಾನೆ. ಅದೇ ವ್ಯಕ್ತಿ ತನ್ನ ತಪ್ಪು ತಿದ್ದಿಕೊಂಡು ಮುನ್ನೆಡೆದಾಗ ಹೇಗೆಲ್ಲಾ ಬದಲಾಗುತ್ತಾನೆ ಎಂಬುದು ಕಥೆ. ನನಗಿಲ್ಲಿ ಎರಡು ಶೇಡ್‌ ಪಾತ್ರವಿದೆ. ಮೊದಲು ಕೆಟ್ಟ ಕೆಲಸ ಮಾಡಿಕೊಂಡು ಆ ಬಳಿಕ ಅದರಿಂದ ಎಚ್ಚೆತ್ತುಕೊಂಡು ಒಳ್ಳೆಯ ಕೆಲಸ ಮಾಡಲು ಹೊರಡುವ ಪಾತ್ರ’ ಎಂದು ಹೇಳಿದರು ಜೆಕೆ. 

ನಿರ್ಮಾಪಕಿ ಮನೀಷಾ ಚಿತ್ರಕ್ಕೆ ಕಥೆ ಬರೆದಿದ್ದಲ್ಲದೆ, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಅವರು ಜೆಕೆ ಜೊತೆಗೆ ಹಾಡೊಂದಕ್ಕೆ ಕುಣಿದಿದ್ದಾರೆ. ಮೂಲತಃ ಕಾರವಾರ­ದವರಾದ ಅವರು ಮುಂಬೈನಲ್ಲಿ ವಾಸ ವಾಗಿದ್ದಾರೆ. ಒಂದು ವರ್ಷದ ಹಿಂದೆ ಕಥೆ ಬರೆದಿದ್ದರಂತೆ. ಅದನ್ನು ಚಿತ್ರ ಮಾಡಬೇಕು ಅಂತ ನಿರ್ಧರಿಸಿ, ಜೆಕೆ ಮತ್ತು ನಾಗೇಂದ್ರ ಅರಸ್‌ ಬಳಿಕ ಚರ್ಚಿಸಿ, ಚಿತ್ರ ಮಾಡಿದ್ದಾರೆ. ಸಮಾಜದಲ್ಲಿ ನಡೆವ ಸಣ್ಣ ಪುಟ್ಟ ಘಟನೆಗಳು ಚಿತ್ರಕ್ಕೆ ಸ್ಫೂರ್ತಿ ಎನ್ನುವ ಮನೀಷಾ, ಇಲ್ಲೊಂದು ಸಂದೇಶ ಹೇಳಿ­ದ್ದಾರಂತೆ. ಆದೇ ನೆಂಬ ಕುತೂಹಲ ವಿದ್ದರೆ ಸಿನಿಮಾ ನೋಡಬೇಕು ಎಂಬುದು ಅವರ ಮಾತು.ಚಿತ್ರಕ್ಕೆ ಒಂದು ಹಾಡುಕೊಟ್ಟ ವಿ.ಮನೋಹರ್‌ ಮಾತನಾಡಿ, ತಂಡಕ್ಕೆ ಶುಭ ಕೋರಿದರು.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.