ಹತ್ಯಾಚಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ


Team Udayavani, Oct 6, 2018, 12:23 PM IST

vij-2.jpg

ವಿಜಯಪುರ: ಬುದ್ಧಿಮಾಂದ್ಯ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಬಂಜಾರಾ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಂಘಟನೆ ಅಧ್ಯಕ್ಷ ರಾಜು ಪವಾರ, ಬಸವನಬಾಗೇವಾಡಿ ತಾಲೂಕಿನ ಚಿಮ್ಮಲಗಿ ಭಾಗ-2 ತಾಂಡಾದಲ್ಲಿ ಬುದ್ಧಿಮಾಂದ್ಯ ವಿಕಲಚೇತನ ಅಪ್ರಾಪೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿಲಾಗಿದೆ. ಅನಾಮಧೇಯವಾಗಿ ತೊಗರಿ ಜಮೀನಿನಲ್ಲಿ ಸಿಕ್ಕ ಶವವನ್ನು ಪತ್ತೆ ಹಚ್ಚಲಾಗಿದೆ.

ನಿಡಗುಂದಿ ಠಾಣೆ ಪೊಲೀಸರು ಭವಿಷ್ಯದಲ್ಲಿ ಇಂಥ ಕೃತ್ಯಗಳು ಜರುಗದಂತೆ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಮಾಡಬೇಕು ಎಂದು ಆಗ್ರಹಿಸಿದರು.

ನೀಲಕಂಠ ಚವ್ಹಾಣ, ಸಂತೋಷ ಚವ್ಹಾಣ, ಗೋಪಿಚಂದ ಚವ್ಹಾಣ, ಅನಿಲ ಚವ್ಹಾಣ, ವಿಕಾಸ ಪವಾರ, ತಾರಾಸಿಂಗ್‌ ರಾಠೊಡ, ಸಂಜೀವ ಚವ್ಹಾಣ, ಶ್ರೀಕಾಂತ ಚವ್ಹಾಣ, ರಾಜು ರಾಠೊಡ, ಸಂಜೀವ ಚವ್ಹಾಣ, ವಿನೋದ ಚವ್ಹಾಣ, ವಿಕಾಸ ಚವ್ಹಾಣ, ಕುಮಾರ ಚವ್ಹಾಣ ಸೇರಿದಂತೆ ಮುಂತಾದವರು ಇದ್ದರು. 

ಮುದ್ದೇಬಿಹಾಳ: ಚಿಮ್ಮಲಗಿ ತಾಂಡಾದ ಮಂದಬುದ್ಧಿಯ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರಿಗೆ ಗಲ್ಲು ಶಿಕ್ಷೆ ದೊರಕುವಂತೆ ಮಾಡಬೇಕು ಎಂದು ಒತ್ತಾಯಿಸಿ ಅಂಗವಿಕಲರು ಶುಕ್ರವಾರ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬಾಲಕಿ ಮನೆಯಿಂದ ಕಾಣೆಯಾಗಿದ್ದಳು. ಮರುದಿನ ಸಂಜೆ ಹೊಲವೊಂದರಲ್ಲಿ ಅತ್ಯಾಚಾರಕ್ಕೊಳಗಾಗಿ ಅರೆಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಗ್ರಾಮಸ್ಥರು ಬಾಲಕಿ ಶವ ಮುಂದಿಟ್ಟುಕೊಂಡು ಅಹೋರಾತ್ರಿ ಹೋರಾಟ ನಡೆಸಿದ್ದರು. ಆರೋಪಿಗಳ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವ ಭರವಸೆಯನ್ನು ಪೊಲೀಸರು, ಸರ್ಕಾರಿ ಅಧಿಕಾರಿಗಳು ನೀಡಿದ್ದರಿಂದ ಶವದ ಮರಣೋತ್ತರ ಪರೀಕ್ಷೆಗೆ ಅವಕಾಶ ಒದಗಿಸಿಕೊಡಲಾಗಿತ್ತು. ಘಟನೆ ನಡೆದು 3 ದಿನಗಳಾದರೂ ಇದುವರೆಗೂ ಆರೋಪಿಗಳ ಬಂಧನ ಆಗದಿರುವುದು ಅನುಮಾನ ಮೂಡಿಸಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪೊಲಿಸ್‌ ಇಲಾಖೆ ಕೂಡಲೇ ಹೆಚ್ಚು ಸಕ್ರಿಯವಾಗಿ ತನಿಖೆ ನಡೆಸುವ ಮೂಲಕ ಆರೋಪಿಗಳು ಯಾರೇ ಆಗಿರಲಿ, ಎಷ್ಟೇ ಪ್ರಭಾವಶಾಲಿಯಾಗಿರಲಿ ಅವರೆಲ್ಲರನ್ನೂ ಬಂಧಿಸಿ ಗಲ್ಲು ಶಿಕ್ಷೆ ದೊರಕುವಂತೆ ನೋಡಿಕೊಂಡು ಹತ್ಯಾಚಾರಿಗಳಿಗೆ ಪಾಠ
ಕಲಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿಅಂಗವಿಕಲರು ಒಂದಾಗಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮುದ್ದೇಬಿಹಾಳ ತಾಲೂಕು ವಿಆರ್‌ಡಬ್ಲ್ಯೂ, ಎಂಆರ್‌ಡಬ್ಲ್ಯೂಗಳ ಒಕ್ಕೂಟ, ಅಂಗವಿಕಲರ ಪಾಲಕರ ಒಕ್ಕೂಟ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಎಸ್‌.ಕೆ. ಘಾಟಿ, ಪಿ.ಪಿ. ಚಲವಾದಿ, ಈರಯ್ಯ ಹಿರೇಮಠ ಹಿರೇಮುರಾಳ, ಸಂಗಣ್ಣ ಹುಣಶ್ಯಾಳ, ಪ್ರಭುಗೌಡ ಚಿಂಚೋಳಿ, ರುದ್ರಗೌಡ ಗೌಡರ, ಶಶಿಕಾಂತ ಯಾಳಗಿ, ರಾಜು ರಾಠೊಡ, ಎಸ್‌.ಸಿ. ಮೇಟಿ, ಯಲ್ಲಪ್ಪ ಮಾದರ, ರೇಣುಕಾ ಕೋಳೂರ, ಸಂಗಮ್ಮ ಜಂಬಗಿ, ಸಂಗಣ್ಣ ಮದರಿ, ನಿಂಗಪ್ಪ ಹೊಕ್ರಾಣಿ, ಅಲ್ತಾಫ್‌ ಮೂಲಿಮನಿ, ಅಡಿವೆಪ್ಪ ಕೊಡಗಾನೂರ, ಈರಮ್ಮ ಮಡಿವಾಳರ, ಸಂಗಮ್ಮ ಕಂಚಲಕಾಯಿ, ಚನ್ನವೀರ ಮಮ್ಮದಕೋಟಿ, ಬಾಲಪ್ಪ ಬಿಸಲದಿನ್ನಿ ಇದ್ದರು.

ಇಂಡಿ: ಬಸವನಬಾಗೇವಾಡಿ ತಾಲೂಕಿನ ಚಿಮ್ಮಲಗಿ ಎಲ್‌ಟಿ ಗ್ರಾಮದಲ್ಲಿ ಬುದ್ಧಿಮಾಂಧ್ಯಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿ ಧಿಸಲು ಆಗ್ರಹಿಸಿ ತಾಲೂಕಿನ ಅಂಗವಿಕರು ಹಾಗೂ ಪಾಲಕರ
ಒಕ್ಕೂಟದಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. 

ಈ ವೇಳೆ ಕರ್ನಾಟಕ ವಿಕಲಚೇತನರ ಹಾಗೂ ಪಾಲಕರ ಒಕ್ಕೂಟದ ತಾಲೂಕು ಘಟಕದ ಅಧ್ಯಕ್ಷ ಎಸ್‌.ಎಂ. ಮಕಾಂದಾರ ಮಾತನಾಡಿ, ದೇಶದಲ್ಲಿ ಅತ್ಯಾಚಾರ ಹಾಗೂ ಕೊಲೆ ಕೃತ್ಯಗಳು ನಡೆಯುತ್ತಿರುವುದು ಖೇದಕರ ಸಂಗತಿ. ಈ ಕಾರ್ಯ ಮಾಡಿದ ಆರೋಪಿಗಳಿಗೆ ಗಲ್ಲಿಗೇರಿಸಬೇಕು. ಆರೋಪಿಗಳನ್ನು ಬಂಧಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಶಿವಲಿಂಗಪ್ಪ ನಾಯ್ಕೊಡಿ , ಸೋಮಯ್ಯ ಮೋಮಿನ, ನೀಲಮ್ಮ ಶಿವಶರಣ, ಪಾಂಡು ರಾಠೊಡ, ಭರಮಣ್ಣ ಪೂಜಾರಿ, ಸಂತೋಷ ಚೌಹಾಣ, ಹಸೀನಾ ಬಿರಾದಾರ, ಮುಸ್ತಾಕ ಮೋಮಿನ, ಆನಂದ ತೋಡಕರ,
ರಮೇಶ ರಾಠೊಡ, ಬೀರಪ್ಪ ಡಂಬಳ,ಅಶೋಕ ರಾಠೊಡ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.