ಮುಂದುವರಿದ ಎಸಿಬಿ ಬೇಟೆ:ಬೆಳಗಾವಿಯಲ್ಲಿ ಮತ್ತೊಂದು ತಿಮಿಂಗಿಲ ಬಲೆಗೆ
Team Udayavani, Oct 6, 2018, 12:30 PM IST
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶನಿವಾರವೂ ಭ್ರಷ್ಟರ ಮೇಲೆ ದಾಳಿ ಮುಂದುವರಿಸಿದ್ದು ಬೆಳಗಾವಿಯಲ್ಲಿ ಭಾರೀ ತಿಮಿಂಗಿಲವೊಂದರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಖಾನಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಕಾಂತ್ ಪಾಟೀಲ್ ರ ಬೆಳಗಾವಿ ರಾಮತೀರ್ಥದಲ್ಲಿರುವ ನಿವಾಸ, ಬೈಲಹೊಂಗಲದಲ್ಲಿರುವ ಕಚೇರಿ ,ಸಹೋದರನ ನಿವಾಸಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ಪತ್ತೆ ಹಚ್ಚಿದ್ದಾರೆ.
ದಾಳಿ ವೇಳೆ 10 ಲಕ್ಷ ರೂಪಾಯಿಗೂ ಅಧಿಕ ನಗದು ಹಣ, ಅರ್ಧ ಕೆ.ಜಿಗೂ ಹೆಚ್ಚು ಚಿನ್ನ, 3 ಕೆ.ಜಿಗೂ ಅಧಿಕ ಬೆಳ್ಳಿ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ರಗಳು ಪತ್ತೆಯಾಗಿವೆ.
ಶುಕ್ರವಾರ ಬೆಂಗಳೂರು ಅಭಿ ವೃದ್ಧಿ ಪ್ರಾಧಿಕಾರದ ಮುಖ್ಯ ಇಂಜಿನಿ ಯರ್ ಎನ್.ಜಿ.ಗೌಡಯ್ಯ ಮತ್ತು ಕೆಐಎಡಿಬಿ ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್.ಸ್ವಾಮಿ ಅವರ ಮನೆ ಮತ್ತು ಕಚೇರಿಗಳ ಮೇಲೆ ನಡೆಸಿ ಅಪಾರ ಪ್ರಮಾಣದ ನಗದು, ಚಿನ್ನ, ಆಸ್ತಿ ದಾಖಲೆ ವಶಕ್ಕೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು