ಕೋರ್ಟ್ಗೆ ಹಾಜರಾದ ನಟ ದುನಿಯಾ ವಿಜಯ್
Team Udayavani, Oct 7, 2018, 12:50 PM IST
ಬೆಂಗಳೂರು: ಜಿಮ್ ತರಬೇತುದಾರ ಮಾರುತಿಗೌಡನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ದುನಿಯಾ ವಿಜಯ್, ಶನಿವಾರ ನಗರದ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಇದೇ ವೇಳೆ ಪ್ರಕರಣದ ಆರೋಪ ಪಟ್ಟಿ ಸಲ್ಲಿಕೆಯಾಗುವವರೆಗೂ ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡಬೇಕು ಎಂದು ವಿಜಯ್ ತಮ್ಮ ವಕೀಲರ ಮೂಲಕ ಕೋರ್ಟ್ಗೆ ಮನವಿ ಮಾಡಿದರು. ಆದರೆ, ನ್ಯಾ. ಜಗದೀಶ್ಬಾಬು ಅವರು ಮನವಿಯನ್ನು ತಿರಸ್ಕರಿಸಿ ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿದರು. ಪ್ರಕರಣದ ಇತರೆ ಆರೋಪಿಗಳಾದ ಕುಮಾರ್, ಪ್ರಸಾದ್ ಹಾಗೂ ಮಣಿ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.