ಇಂದಿರಾ ಕ್ಯಾಂಟೀನ್‌ಗೆ ಹೆಚ್ಚಿದ ಬೇಡಿಕೆ 


Team Udayavani, Oct 7, 2018, 5:34 PM IST

7-october-23.gif

ಹುಬ್ಬಳ್ಳಿ: ನಗರದಲ್ಲಿ ಆರಂಭಗೊಂಡ ಮೂರು ಇಂದಿರಾ ಕ್ಯಾಂಟೀನ್‌ಗಳಿಗೆ ಜನಸ್ಪಂದನೆ ಹೆಚ್ಚುತ್ತಿದ್ದು, ನಿತ್ಯ 500 ಜನರಿಗೆ ಊಟ-ಉಪಹಾರ ನೀಡಿದರೂ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದೆ. ನಗರದ ಇನ್ನಷ್ಟು ಕಡೆ ಇಂದಿರಾ ಕ್ಯಾಂಟೀನ್‌ ಆರಂಭಿಸುವ ಒತ್ತಾಯವೂ ಹೆಚ್ಚತೊಡಗಿದೆ.

ನಗರದಲ್ಲಿ ಪ್ರಸ್ತುತ ಆರಂಭಗೊಂಡಿರುವ ಪ್ರತಿ ಕ್ಯಾಂಟೀನ್‌ ನಲ್ಲಿ 500 ಪ್ಲೇಟ್‌ ಉಪಹಾರ, ಊಟ ನೀಡಲಾಗುತ್ತಿದೆ. ಆದರೆ ಇದು ಕಡಿಮೆ ಬೀಳುತ್ತಿದ್ದು, ಬೆಳಗ್ಗೆ ಉಪಹಾರ ಹಾಗೂ ಮಧ್ಯಾಹ್ನ ಊಟಕ್ಕೆ ಹೆಚ್ಚಿನ ಬೇಡಿಕೆ ಇದೆ. ಬೆಳಗ್ಗೆ ಉಪಹಾರ 500 ಹಾಗೂ ಮಧ್ಯಾಹ್ನ ಊಟ 500 ಪ್ಲೇಟ್‌ಗಳು ಖಾಲಿ ಆಗುತ್ತಿದ್ದು ಜನರು ಮರಳಿ ಹೋಗುತ್ತಿದ್ದಾರೆ. ಆದರೆ ರಾತ್ರಿ ಊಟ ಸುಮಾರು 350-400 ಪ್ಲೇಟ್‌ಗಳು ಮಾರಾಟವಾಗುತ್ತಿದೆ.

ಅವಳಿನಗರಕ್ಕೆ ಮಂಜೂರಾದ 12 ಕ್ಯಾಂಟೀನ್‌ಗಳಲ್ಲಿ, ಸದ್ಯಕ್ಕೆ ಮೂರು ಮಾತ್ರ ಆರಂಭವಾಗಿದ್ದು, ಇನ್ನುಳಿದ 9 ಕ್ಯಾಂಟೀನ್‌ ಗಳು ಆರಂಭವಾಗಬೇಕಾಗಿವೆ. ಇದರಲ್ಲಿ ಬೆಂಗೇರಿ ಮಾರುಕಟ್ಟೆ, ಉಣಕಲ್ಲ ಹಾಗೂ ಕಿಮ್ಸ್‌ ಹಿಂಭಾಗ, ಹೊಸ ಬಸ್‌ ನಿಲ್ದಾಣದಲ್ಲಿನ ಕ್ಯಾಂಟಿನ್‌ಗಳು ಸಿದ್ಧಗೊಂಡಿದ್ದರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ.

ಕಿಮ್ಸ್‌, ಬೆಂಗೇರಿ ಹಾಗೂ ಉಣಕಲ್ಲನಲ್ಲಿರುವ ಕ್ಯಾಂಟೀನ್‌ಗಳಿಗೆ ದಿನವೂ ಜನರು ಬಂದು ಹೋಗುತ್ತಿದ್ದಾರೆ. ಆದರೆ ಉದ್ಘಾಟನೆಯಾಗದ ಹಿನ್ನೆಲೆಯಲ್ಲಿ ಉಪಹಾರ, ಊಟ ಅಲ್ಲಿ ವಿತರಿಸಲಾಗುತ್ತಿಲ್ಲ. ಧಾರವಾಡದಲ್ಲಿ ಮಿನಿವಿಧಾನಸೌಧ ಹಾಗೂ ಹೊಸ ಬಸ್‌ ನಿಲ್ದಾಣದಲ್ಲಿ ಕ್ಯಾಂಟೀನ್‌ ನಿರ್ಮಾಣ ಸಂಪೂರ್ಣವಾಗಿದ್ದು ಉದ್ಘಾಟನೆ ಆಗಬೇಕಿದೆ. ಹುಬ್ಬಳ್ಳಿ ಹೊಸ ಬಸ್‌ ನಿಲ್ದಾಣದಲ್ಲಿ ನೀರಿನ ಕೊರತೆ ಎದುರಾಗಿದೆ.

ಎಲ್ಲ ಕ್ಯಾಂಟೀನ್‌ಗಳಲ್ಲಿ ನೀರಿನ ಕೊರತೆ: ಈಗಾಗಲೇ ಆರಂಭಗೊಂಡಿರುವ ನ್ಯೂ ಇಂಗ್ಲಿಷ್‌ ಸ್ಕೂಲ್‌, ಎಸ್‌.ಎಂ.ಕೃಷ್ಣ ನಗರ ಹಾಗೂ ಸೋನಿಯಾ ಗಾಂಧಿ ನಗರ ಇಂದಿರಾ ಕ್ಯಾಂಟೀನ್‌ ಗಳಲ್ಲಿ ನೀರಿನ ಕೊರತೆ ಎದುರಾಗುತ್ತಿದ್ದು, ಜಲಮಂಡಳಿ ಪ್ರತಿದಿನ ಒಂದು ಟ್ಯಾಂಕರ್‌ ನೀರು ನೀಡುತ್ತಿದೆ. ಆದರೆ ಎಲ್ಲ ಕ್ಯಾಂಟೀನ್‌ ಹಾಗೂ ಬೆಂಗೇರಿಯಲ್ಲಿರುವ ಕಿಚನ್‌ಗೆ ಎರಡು ನೀರಿನ ಟ್ಯಾಂಕ್‌ಗಳು ಬೇಕಾಗುತ್ತದೆ. ಇನ್ನು ಎಸ್‌.ಎಂ.ಕೃಷ್ಣಾ ನಗರ ಹಾಗೂ ಸೋನಿಯಾ ಗಾಂಧಿ ನಗರದಲ್ಲಿ ಕುಡಿಯುವ ನೀರಿನ ಬದಲಾಗಿ ಬೋರ್‌ವೆಲ್‌ ನೀರು ನೀಡಲಾಗುತ್ತಿದ್ದು, ಇದು ಕೂಡಾ ಒಂದು ಸಮಸ್ಯೆ ಆಗಿದೆ.

ಸದ್ಯ ಆರಂಭಗೊಂಡಿರುವ ಮೂರು ಇಂದಿರಾ ಕ್ಯಾಂಟೀನ್‌ನಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೆಚ್ಚಿನ ಬೇಡಿಕೆಯೂ ಬರುತ್ತಿದೆ. ಆದರೆ ಸರಕಾರದ ನಿರ್ದೇಶನದಂತೆ 500 ಪ್ಲೇಟ್‌ಗಳಿಗೆ ಸೀಮಿತಗೊಳಿಸಿದ್ದಾರೆ. ಹೆಚ್ಚಿಗೆ ಆಗಮಿಸಿದ ಜನರು ಮರಳಿ ಹೋಗುತ್ತಿರುವುದನ್ನು ಕಾಣುತ್ತಿದ್ದೇವೆ. ಇನ್ನುಳಿದ ಹುಬ್ಬಳ್ಳಿಯ ಮೂರು ಹಾಗೂ ಧಾರವಾಡದ ಎರಡು ಕ್ಯಾಂಟೀನ್‌ಗಳು ಉದ್ಘಾಟನೆಗೊಂಡರೆ ಜನರಿಗೆ 
 ಅನುಕೂಲವಾಗಲಿದೆ. ಇದಲ್ಲದೇ ಕಿಮ್ಸ್‌ ಹಿಂಭಾಗದಲ್ಲಿರುವ ಕ್ಯಾಂಟೀನ್‌ಗೆ ದಿನನಿತ್ಯ ಜನರು ಆಗಮಿಸಿ ಯಾವಾಗ ಆರಂಭಿಸುತ್ತೀರಿ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
 ಪ್ರಕಾಶ ಪವಾರ,
 ಇಂದಿರಾ ಕ್ಯಾಂಟಿನ್‌ ನಿರ್ವಹಣಾ ವ್ಯವಸ್ಥಾಪಕ.

„ಬಸವರಾಜ ಹೂಗಾರ

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.