ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತಾಂಡವ: ನ್ಯಾ| ನಾಗರಾಜ


Team Udayavani, Oct 8, 2018, 11:39 AM IST

gul-3.jpg

ಕಲಬುರಗಿ: ನ್ಯಾಯಾಂಗ, ಸಾಹಿತ್ಯ ಸೇರಿದಂತೆ ಎಲ್ಲ ಕ್ಷೇತ್ರಗಳು ಸದ್ಯ ಕಲುಷಿತಗೊಂಡಿವೆ. ಭ್ರಷ್ಟಾಚಾರ, ಜಾತೀಯತೆ ಹಾಗೂ ಪಕ್ಷಪಾತ ತುಂಬಿಕೊಂಡಿದೆ ಎಂದು ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಗಂಗಾವತಿ ವಿಷಾದ ವ್ಯಕ್ತಪಡಿಸಿರು.

ನಗರದ ಭವಾನಿ ನಗರದ ಬಬಲಾದ ಮಠದ ಶ್ರೀ ಗುರು ಚನ್ನವೀರೇಶ್ವರ ಮಂಟಪದಲ್ಲಿ ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘ ಹಮ್ಮಿಕೊಂಡಿದ್ದ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಭದ್ರತಾ ನಿರೀಕ್ಷಕರಾಗಿ ಸೇವಾ ನಿವೃತ್ತಿ ಹೊಂದಿದ ಕುಪೇಂದ್ರ ಬಿರಾದಾರ ಮರಗುತ್ತಿ ಅವರ ಸನ್ಮಾನ ಸಮಾರಂಭದ ಅಂಗವಾಗಿ ರವಿವಾರ ವಿವಿಧ ಕ್ಷೇತ್ರಗಳ ಸಾಧಕರಿಗೆ “ಮೋಡದಲ್ಲಿ ಮಿನುಗುವ ನಕ್ಷತ್ರ’ ಪ್ರಶಸ್ತಿ ಪ್ರದಾನ ಹಾಗೂ ಗೌರವ ಸತ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು 30 ವರ್ಷಗಳ ಹಿಂದೆ ಕಠಿಣ ಕಾನೂನು ಜಾರಿಯಾಗಿದೆ. ಆದರೂ ಭ್ರಷ್ಟಾಚಾರ ಮಾತ್ರ ಹೆಚ್ಚಾಗುತ್ತಲೇ ಇದೆ. ಉನ್ನತ ಹುದ್ದೆಗೇರಿದ ನ್ಯಾಯಮೂರ್ತಿಗಳೂ ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗುತ್ತಿದ್ದಾರೆ. ಇದೇ ರೀತಿ ಶಿಕ್ಷಣ, ಆರೋಗ್ಯ, ಸಾಹಿತ್ಯ ಮತ್ತು ಮಠ-ಮಾನ್ಯಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಶೇ.90ರಷ್ಟು ರಾಜಕಾರಣಿಗಳು ಭ್ರಷ್ಟರಿದ್ದಾರೆ ಎಂದು ಹೇಳಿದರು. 

ಭ್ರಷ್ಟಾಚಾರವನ್ನು ಹೀಗೆ ಬಿಟ್ಟರೆ ಭವಿಷ್ಯತ್‌ ನಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಆದ್ದರಿಂದ ಭ್ರಷ್ಟಾಚಾರ ವಿರುದ್ಧ ಯುವಕರು ಈಗಲೇ ಜಾಗೃತಗೊಳ್ಳಬೇಕು. ಆಯಸ್ಸು, ಆರೋಗ್ಯ ಮತ್ತು ಅವಕಾಶ ಬಳಸಿಕೊಂಡು ಭ್ರಷ್ಟಾಚಾರ ತೊಡೆದು ಹಾಕಲು ಹೋರಾಡಲು ಸ್ವಾಮೀಜಿಗಳು, ಹಿರಿಯರು, ಸಾರ್ವಜನಿಕರು ಸಾಥ್‌ ನೀಡಬೇಕು ಎಂದು ಹೇಳಿದರು.

ಮಾಜಿ ಸಚಿವ ಎಸ್‌.ಕೆ. ಕಾಂತಾ ಮಾತನಾಡಿ, ಉತ್ತಮ ಸಮಾಜಕ್ಕೆ ಸಮಾನತೆಯೇ ಪ್ರಮುಖವಾಗಿದೆ. ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆ ಇದ್ದರೆ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು. 

ಶ್ರೀನಿವಾಸ ಸರಡಗಿಯ ರೇವಣಸಿದ್ದ ಶಿವಾಚಾರ್ಯರು, ಯಳಸಂಗಿಯ ಮುತ್ಯಾನ ಬಬಲಾದನ ಗುರುಪಾದಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವದಿಸಿದರು.

ಪ್ರಶಸ್ತಿ ಪುರಸ್ಕೃತರು: ನ್ಯಾಯವಾದಿ ಸುಭಾಷ್‌ ಚಂದ್ರ ಬಾಣಿ (ಕಾನೂನು), ನರರೋಗ ತಜ್ಞ ಡಾ| ಅನಿಲಕುಮಾರ ಬಿ. ಪಾಟೀಲ (ವೈದ್ಯಕೀಯ), ಮಹಾಂತಪ್ಪ ಎಂ. ಬಿರಾದಾರ (ಸಮಾಜ ಸೇವೆ), ಶ್ರೀಶೈಲ ಪವಾಡಶೆಟ್ಟಿ (ಸಮಾಜಸೇವೆ), ಸೂರ್ಯಕಾಂತ ಪೋದ್ದಾರ (ಶಿಕ್ಷಣ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಗೌರವ ಸತ್ಕಾರ: ಮಲ್ಲಿಕಾರ್ಜುನ ಎಸ್‌. ಧೂಳಬಾ ಫೀರೋಜಾಬಾದ್‌ (ಕೃಷಿ, ಸಮಾಜ ಸೇವೆ), ಕಸ್ತೂರಬಾಯಿ ಎಸ್‌. ಕಲ್ಲಾ(ರಾಜಕೀಯ), ಕ್ಷೇಮಲಿಂಗ ಸಲಗರ (ಸಮಾಜ ಸೇವೆ), ಸಂಗಮೇಶ ವೈ. ಹೂಗಾರ(ಸಾಹಿತ್ಯ), ಸಂಗಣ್ಣಗೌಡ ಸಿದ್ದಗೊಂಡ (ಆರೋಗ್ಯ ಸೇವೆ) ಅವರನ್ನು ಸತ್ಕರಿಸಲಾಯಿತು. 

ನ್ಯಾಯವಾದಿ ಹಣಮಂತರಾಯ ಎಸ್‌. ಅಟ್ಟೂರ ಅಧ್ಯಕ್ಷತೆ ವಹಿಸಿದ್ದರು. ದಾಲ್‌ಮಿಲ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ| ಚಿದಂಬರರಾವ್‌ ಪಾಟೀಲ ಮರಗುತ್ತಿ, ಗುಂಡಣ್ಣ ಡಿಗ್ಗಿ, ರೇವಣಸಿದ್ದಯ್ಯ ಸ್ವಾಮಿ, ಡಾ| ಬಾಬುರಾವ್‌ ಶೇರಿಕಾರ್‌, ಶ್ರಾವಣಕುಮಾರ ಮಠ, ಶರಣು ಜೆ. ಪಾಟೀಲ, ದೇವಿಂದ್ರಪ್ಪ ಗೋಗಿ ಇದ್ದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.