ಶಬರಿಮಲೆ ಪ್ರವೇಶ: ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ
Team Udayavani, Oct 8, 2018, 12:00 PM IST
ಹೊಸದಿಲ್ಲಿ : ಕೇರಳದಲ್ಲಿನ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋವರ್ಗದ ಮಹಿಳೆಯರಿಗೆ ಪ್ರವೇಶಾವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ಮೇಲ್ಮನವಿಯನ್ನು ಸಲ್ಲಿಸಲಾಗಿದೆ.
ನ್ಯಾಶನಲ್ ಅಯ್ಯಪ್ಪ ಡಿವೋಟೀಸ್ ಅಸೋಸಿಯೇಶನ್ ಅಧ್ಯಕ್ಷ ಶೈಲಜ ವಿಜಯನ್ ಅವರು ಈ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.
ಕಳೆದ ಸೆ.28ರ ತೀರ್ಪಿನಲ್ಲಿ ಎಲ್ಲ ವಯೋವರ್ಗದ ಮಹಿಳೆಯರಿಗೆ ಕೇರಳದ ಶಬರಿಮಲೆ ದೇವಳವನ್ನು ಪ್ರವೇಶಿಸುವುದಕ್ಕೆ ಅವಕಾಶ ನೀಡಿರುವ ಸುಪ್ರೀಂ ಕೋರ್ಟಿನ ತೀರ್ಪು “ಸಂಪೂರ್ಣ ತರ್ಕರಹಿತ, ಅಸಾಧು’ ಎಂದು ಮೇಲ್ಮನವಿಯಲ್ಲಿ ವಕೀಲ ವಿಜಯನ್ ವಾದಿಸಿದ್ದಾರೆ.