ಕೋಟಿ ವೆಚ್ಚದಲ್ಲಿ ಬಸ್‌ ನಿಲ್ದಾಣ ಮೇಲ್ದರ್ಜೆಗೆ


Team Udayavani, Oct 8, 2018, 2:28 PM IST

ray-1.jpg

ರಾಯಚೂರು: ನಗರದ ಕೇಂದ್ರ ಬಸ್‌ ನಿಲ್ದಾಣದ ಮೇಲ್ದರ್ಜೆಗೆ ಎಚ್‌ಕೆಆರ್‌ಡಿಬಿಯಿಂದ ಅನುಮೋದನೆ ಸಿಕ್ಕಿದ್ದು, ಶೀಘ್ರದಲ್ಲೇ ಸಾಕಷ್ಟು ಬದಲಾವಣೆಗಳ ನಿರೀಕ್ಷೆ ಇವೆ. ಮುಖ್ಯವಾಗಿ ಒಂದನೇ ಡಿಪೋವನ್ನು ಸಿಟಿ ಬಸ್‌ ನಿಲ್ದಾಣವನ್ನಾಗಿಸುವುದು ಹಾಗೂ ಒಂದು ಕೋಟಿ ರೂ. ವೆಚ್ಚದಲ್ಲಿ ಕೋಟೆ ಕೆಳಭಾಗದ ಕಂದಕ ಮುಚ್ಚಿಸಿ ಶೆಲ್ಟರ್‌ ನಿರ್ಮಿಸುವ ಯೋಜನೆ ರೂಪಿಸಲಾಗಿದೆ.

ಕಳೆದ ದಶಕಕ್ಕೆ ಹೋಲಿಸಿದರೆ ಕೇಂದ್ರ ಬಸ್‌ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಸ್ಥಳ ಮಾತ್ರ ಕಿಷ್ಕಿಂದೆಯಂತಾಗಿದೆ. ಹೀಗಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ನಿಲ್ದಾಣ ಮೇಲ್ದರ್ಜೆಗೇರಿಸಲು ಎಚ್‌ಕೆಆರ್‌ ಡಿಬಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಈಗ ಅದಕ್ಕೆ ಪ್ರತಿಕ್ರಿಯೆ ಬಂದಿದ್ದು ಬಸ್‌ ನಿಲ್ದಾಣ ಮೇಲ್ದರ್ಜೆ ಕೆಲಸಗಳಿಗೆ ಒಂದು ಕೋಟಿ ರೂ. ನೀಡಲು ಅನುಮೋದನೆ ಸಿಕ್ಕಿದೆ. ಆದರೆ, ಅನುದಾನ ಬರಬೇಕಿದ್ದು, ಬಂದ ಮರುಕ್ಷಣವೇ ಕಾಮಗಾರಿ ಶುರುವಾಗಲಿದೆ ಎನ್ನುವುದು ಅಧಿಕಾರಿಗಳ ವಿವರಣೆ

ಮೇಲ್ದರ್ಜೆ ಉದ್ದೇಶ: ಈಗಿರುವ ಬಸ್‌ ನಿಲ್ದಾಣದಲ್ಲಿ ಸ್ಥಳಾಭಾವ ಸಮಸ್ಯೆ ಕಾಡುತ್ತಿದೆ. ಏಕಕಾಲಕ್ಕೆ ಬಸ್‌ಗಳು ಬಂದಲ್ಲಿ ತೊಂದರೆಯಾಗುತ್ತದೆ. ಆದರೆ, ನಿಲ್ದಾಣಕ್ಕೆ ಹೊಂದಿಕೊಂಡಿರುವ ಕೋಟೆ ಕಂದಕ ನಿರುಪಯುಕ್ತವಾಗಿದ್ದು, ಅದನ್ನು ಸಮತಟ್ಟು ಮಾಡಿ ಬಸ್‌ ನಿಲುಗಡೆಗೆ ಬಳಸಿಕೊಳ್ಳುವ ಯೋಜನೆ ರೂಪಿಸಲಾಗಿದೆ. ಪ್ರಾಚ್ಯವಸ್ತು ಇಲಾಖೆಯವರು ಕೋಟೆ ಪಕ್ಕ ದೊಡ್ಡ ಕಟ್ಟಡಗಳನ್ನು ಕಟ್ಟದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಅಲ್ಲಿ ಕಂದಕವನ್ನು ಸಂಪೂರ್ಣ ಮುಚ್ಚಿಸಿ ಕೇವಲ ಬಸ್‌ ಶೆಲ್ಟರ್‌ ಮಾತ್ರ ನಿರ್ಮಿಸುವ ಯೋಜನೆಯಿದೆ. ಅದರ ಜತೆಗೆ ಶೌಚಗೃಹವನ್ನು ತೆರವುಗೊಳಿಸಿ ಅದನ್ನು ಹಿಂದಕ್ಕೆ ನಿರ್ಮಿಸಿ, ತೆರವಾದ ಸ್ಥಳವನ್ನು ಸಂಪೂರ್ಣ ಬೈಕ್‌ ಪಾರ್ಕಿಂಗ್‌ಗಾಗಿ ಬಳಸಿಕೊಳ್ಳುವ ಚಿಂತನೆ ಇದೆ. ಇದರಿಂದ
ನಿಲ್ದಾಣದಲ್ಲಿ ಬಸ್‌ ಸಂಚಾರವೂ ಸುಗಮಗೊಳ್ಳಲಿದೆ, ಸ್ಥಳಾವಕಾಶವೂ ಹೆಚ್ಚಾಗಲಿದೆ.

ಸಿಟಿ ಬಸ್‌ ಸ್ಟಾಪ್‌ ಬದಲಾವಣೆ: ಅದರ ಜತೆಗೆ ಬಹುವರ್ಷಗಳ ಯೋಜನೆಯಾದ ಸಿಟಿ ಬಸ್‌ ನಿಲ್ದಾಣ ಸ್ಥಳಾಂತರ ಯೋಜನೆಗೂ ಸಮ್ಮತಿ ಸಿಕ್ಕಿದೆ. ಇದಕ್ಕಾಗಿ ಐದು ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಗೆ ಎಚ್‌ಕೆಆರ್‌ಡಿಬಿ ಗ್ರೀನ್‌ ಸಿಗ್ನಲ್‌ ನೀಡಿದ್ದು, ಕೇಂದ್ರ ಬಸ್‌ ನಿಲ್ದಾಣ ಮುಂಭಾಗದ ಒಂದನೇ ಡಿಪೋ ಸಿಟಿ ಬಸ್‌ ನಿಲ್ದಾಣವಾಗಿ ಮಾರ್ಪಡಲಿದೆ. ಈಗಾಗಲೇ ಮೂರನೇ ಡಿಪೋ ಕೂಡ ಸೇವೆಗೆ ಮುಕ್ತಗೊಂಡಿದೆ. ಒಂದನೇ ಡಿಪೋವನ್ನು 2ರಲ್ಲಿ ಸಂಯೋಜಿಸುವ ಉದ್ದೇಶವಿದೆ. ಖಾಲಿಯಾದ ಒಂದನೇ ಡಿಪೋ ಸ್ಥಳದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ, ಸಿಟಿ ಬಸ್‌ಗಳ ನಿಲುಗಡೆಗೆ ಬಳಸಿಕೊಳ್ಳುವ ಯೋಜನೆಯಿದೆ.

ಮಾನ್ವಿಯಲ್ಲೂ ಸ್ಥಳಾಂತರ
ಇದು ಕೇವಲ ರಾಯಚೂರು ನಗರ ಬಸ್‌ ನಿಲ್ದಾಣಕ್ಕೆ ಮಾತ್ರವಲ್ಲ ಮಾನ್ವಿ ಬಸ್‌ ನಿಲ್ದಾಣದಲ್ಲೂ ಕೆಲ ಬದಲಾವಣೆ ಸಾಧ್ಯತೆಗಳಿವೆ. ಅಲ್ಲಿನ ಡಿಪೋವನ್ನು ಬಸ್‌ ನಿಲ್ದಾಣವನ್ನಾಗಿ ಮಾರ್ಪಡಿಸಲು ಯೋಜನೆ ರೂಪಿಸಲಾಗಿದೆ. ರಾಯಚೂರು ರಸ್ತೆಯಲ್ಲಿರುವ ಎಲ್‌ಐಸಿ ಕಚೇರಿ ಬಳಿ ಐದು ಎಕರೆ ಜಮೀನು ನಿಗಮಕ್ಕೆ ಹಸ್ತಾಂತರವಾಗಿದ್ದು, ಅಲ್ಲಿಗೆ ಡಿಪೋ ಸ್ಥಳಾಂತರ ಮಾಡಲಾಗುತ್ತಿದೆ. ನಿಲ್ದಾಣವನ್ನು ಹಳೇ ಡಿಪೋ ಸ್ಥಳದಲ್ಲಿ ನಿರ್ಮಿಸುವ ಸಾಧ್ಯತೆಗಳಿವೆ. ಜನಸಂಖ್ಯೆಗೆ ಅನುಗುಣವಾಗಿ ಸಾರಿಗೆ ನಿಗಮವೂ ಬದಲಾವಣೆ ಬಯಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಅಂದುಕೊಂಡ ಯೋಜನೆಗಳು ತ್ವರಿತಗತಿಯಲ್ಲಿ ಮುಗಿಸಿದರೆ ಅನುಕೂಲ ಎಂಬುದು ಪ್ರಯಾಣಿಕರ ಅನಿಸಿಕೆ.

ಕೇಂದ್ರ ಬಸ್‌ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವುದು, ಒಂದನೇ ಡಿಪೋವನ್ನು ನಿಲ್ದಾಣಕ್ಕೆ ಬಳಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಎಚ್‌ಕೆಆರ್‌ಡಿಬಿ ಒಟ್ಟು ಆರು ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಿದೆ. ಅನುದಾನ ಬಿಡುಗಡೆಯಾದ ಕೂಡಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. 
 ಶ್ರೀರಾಮ್‌ ಬಿ., ವಿಭಾಗೀಯ ನಿಯಂತ್ರಣಾಧಿಕಾರಿ, ಈಶಾನ್ಯ ಸಾರಿಗೆ ಸಂಸ್ಥೆ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.