ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಗೂಡ್ಸ್ ರೈಲುಗಳ ಸಂಚಾರ ಆರಂಭ
Team Udayavani, Oct 9, 2018, 6:15 AM IST
ಸಕಲೇಶಪುರ: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಗೂಡ್ಸ್ ರೈಲುಗಳ ಸಂಚಾರ ಆರಂಭಗೊಂಡಿದೆ. ಆದರೆ ಪ್ಯಾಸೆಂಜರ್
ರೈಲುಗಳ ಸಂಚಾರ ಪೂರ್ವ ನಿಗದಿಯಂತೆ ಈ ತಿಂಗಳ 10ರಿಂದ ಪುನಾರಂಭವಾಗುವುದು ಅನುಮಾನ.
ಕಳೆದ ಆಗಸ್ಟ್ ಮೊದಲ ಹಾಗೂ ಎರಡನೇ ವಾರದಲ್ಲಿ ಸುರಿದ ಮಹಾಮಳೆಯಿಂದ ಪಶ್ಚಿಮಘಟ್ಟದ ಬೆಟ್ಟ, ಗುಡ್ಡ, ಮಳೆಕಾಡು,
ಕಂದಕಗಳ ನಡುವೆ ಹಾದು ಹೋಗಿರುವ ಸಕಲೇಶಪುರ- ಸುಬ್ರಹ್ಮಣ್ಯ ನಡುವಿನ ರೈಲು ಹಳಿಗಳ ಮೇಲೆ ಬೆಟ್ಟಗಳು ಕುಸಿದು ಬಿದ್ದಿದ್ದವು.
ಸುಮಾರು 2 ಲಕ್ಷ ಕ್ಯೂಬಿಕ್ ಮೀಟರ್ಗೂ ಹೆಚ್ಚು ಪ್ರಮಾಣದ ಮಣ್ಣು, ಭಾರೀ ಗಾತ್ರದ ಬಂಡೆಗಳು, ಮರ, ಗಿಡಗಳು ರೈಲು ಹಳಿಗಳನ್ನು ಮುಚ್ಚಿಕೊಂಡಿದ್ದವು. ಕಡಗರವಳ್ಳಿಯಿಂದ ಎಡಕುಮೇರಿ, ಶಿರಿವಾಗಿಲು ಹಾಗೂ ಸುಬ್ರಹ್ಮಣ್ಯದವರೆಗೆ 64 ಕಡೆ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾಗಿತ್ತು. ಬೆಟ್ಟದಿಂದ ಉರುಳಿ ಬಿದ್ದ ಬಂಡೆಗಳಿಗೆ ರೈಲ್ವೆ ಹಳಿಗಳೇ ತುಂಡಾಗಿ ಕೊಚ್ಚಿಹೋಗಿದ್ದವು. ಈ ಹಿನ್ನೆಲೆಯಲ್ಲಿ ರೈಲ್ವೆ ಸಂಚಾರ ಸ್ಥಗಿತಗೊಳಿಸಲಾಗಿತ್ತು.
ಶಿರಿವಾಗಿಲು ಸಮೀಪ ಹೆಚ್ಚಿನ ಅನಾಹುತ ಸಂಭವಿಸಿದ್ದರಿಂದ ದುರಸ್ತಿ ಕಾಮಗಾರಿ ಮುಗಿಯುವುದು ತುಸು ವಿಳಂಬವಾಗಿತ್ತು.
ಸದ್ಯ ರೈಲ್ವೆ ಹಳಿ ಮೇಲೆ ಬಿದ್ದ ಮಣ್ಣು,ಬಂಡೆಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದ್ದು, ರೈಲ್ವೆ ಹಳಿಗಳನ್ನು ಕೂಡ ದುರಸ್ತಿ
ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಮಂಗಳವಾರದಿಂದ ಗೂಡ್ಸ್ ರೈಲುಗಳಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
ಒಂದು ವಾರದಿಂದ ನಿರಂತರವಾಗಿ ಈ ಮಾರ್ಗದಲ್ಲಿ ಗೂಡ್ಸ್ ರೈಲುಗಳು ಸಂಚರಿಸುತ್ತಿದ್ದು ಅ. 10ರಿಂದ ಪ್ರಯಾಣಿಕರ
ರೈಲು ಸಂಚರಿಸಬಹುದೆಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ ಇದೀಗ ರೈಲು ಓಡಿಸುವ ಬಗ್ಗೆ ಉನ್ನತ ಅಧಿಕಾರಿಗಳಿಂದ ಯಾವುದೇ ಪ್ರಕಟಣೆ ಬಂದಿಲ್ಲವೆಂದು ಸಕಲೇಶಪುರ ರೈಲು ನಿಲ್ದಾಣದ ಅಧಿಕಾರಿಗಳು ಹೇಳಿದ್ದು ಇದರಿಂದಾಗಿ ಪೂರ್ವ ನಿಗದಿಯಂತೆ ರೈಲು ಸಂಚಾರ ಪುನಾರಂಭವಾಗುವುದು ಅನುಮಾನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
ಅಪಹೃತ ಮಹಿಳೆ ಸಿಆರ್ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್ಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
ಇಸ್ರೇಲ್ ದೇಶದಲ್ಲಿ ಅಲ್ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್