ರಾಧಿಕಾ ಹೆಚ್ಚು ಸಿನಿಮಾ ಒಪ್ಪಿಕೊಳ್ಳದಿರಲು ಕಾರಣವೇನು ಗೊತ್ತಾ?


Team Udayavani, Oct 9, 2018, 11:39 AM IST

radhika.jpg

ಒಂದು ಸಮಯದಲ್ಲಿ ವರ್ಷಕ್ಕೆ ರಾಧಿಕಾ ಅವರ ಮೂರ್‍ನಾಲ್ಕು ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ, ಈಗ ವರ್ಷಕ್ಕೆ ಒಂದು ಸಿನಿಮಾ ಕೂಡಾ ಬಿಡುಗಡೆಯಾಗುವುದು ಕಷ್ಟ. ಸಹಜವಾಗಿಯೇ ಒಂದು ಪ್ರಶ್ನೆ ಮೂಡುತ್ತದೆ. ಚಿತ್ರರಂಗದಲ್ಲಿ ಅಷ್ಟೊಂದು ಆ್ಯಕ್ಟೀವ್‌ ಆಗಿದ್ದ ನಟಿ ಯಾಕೆ ಸಿನಿಮಾಗಳಿಂದ ದೂರವಾಗುತ್ತಿದ್ದಾರೆ, ವರ್ಷಕ್ಕೆ ಒಂದು ಸಿನಿಮಾ ಬಿಡುಗಡೆಯಾಗದಷ್ಟು ಬಿಝಿಯಾದರಾ ಎಂದು. ಈ ಪ್ರಶ್ನೆಗೆ ಸ್ವತಃ ರಾಧಿಕಾ ಉತ್ತರಿಸುತ್ತಾರೆ. 

ರಾಧಿಕಾ ಹೇಳುವಂತೆ ಅವರಿಗೆ ವರ್ಷಕ್ಕೆ ಒಂದೆರಡು ಸಿನಿಮಾವಾದರೂ ಬಿಡುಗಡೆಯಾಗಬೇಕೆಂಬ ಆಸೆ ಇದೆಯಂತೆ. ಆದರೆ, ಅವರದೇ ಆದ ಕಮಿಟ್‌ಮೆಂಟ್‌ಗಳಿಂದ ಸಿನಿಮಾಕ್ಕೆ ಸಮಯ ಮೀಸಲಿರಿಸಲು ಸಾಧ್ಯವಾಗುತ್ತಿಲ್ಲವಂತೆ. “ನಾನು 14ನೇ ವರ್ಷಕ್ಕೆ ಚಿತ್ರರಂಗಕ್ಕೆ ಬಂದಾಗ ಸಿನಿಮಾನೇ ನನ್ನ ಲೈಫ್. ಸಿನಿಮಾ ಬಿಟ್ಟು ಬೇರೇನೂ ಯೋಚನೆ ಮಾಡುತ್ತಿರಲಿಲ್ಲ. ಈಗ ಸಿನಿಮಾ ಒಂದು ಭಾಗವಾಗಿದೆ ಅಷ್ಟೇ. ಪ್ಯಾಶನ್‌ಗಾಗಿ ಸಿನಿಮಾ ಮಾಡುತ್ತಿದ್ದೇನೆ.

ಈಗ ಮೊದಲಿನ ತರಹ ಸಿನಿಮಾ ಒಪ್ಪಿಕೊಳ್ಳೋದು ಕಷ್ಟ. ಕನ್ನಡವಷ್ಟೇ ಅಲ್ಲದೇ, ಮಲಯಾಳಂ, ತಮಿಳಿನಿಂದಲೂ ಆಫ‌ರ್‌ ಬರುತ್ತಿವೆ. ಆದರೆ, ಡೇಟ್ಸ್‌ ಹೊಂದಿಸಲು ಸಾಧ್ಯವಾಗುತ್ತಿಲ್ಲ. ನನ್ನ ಮಗಳಿಗೂ ಸಮಯಕೊಡಬೇಕು. ಸಹಜವಾಗಿಯೇ ತಡವಾಗುತ್ತಾ ಹೋಗುತ್ತದೆ. ಮುಂದೆ ವರ್ಷಕ್ಕೆ ಎರಡು ಸಿನಿಮಾವಾದರೂ ಮಾಡಬೇಕೆಂದು ನಿರ್ಧರಿಸಿದ್ದೇನೆ’ ಎನ್ನುತ್ತಾರೆ ರಾಧಿಕಾ. ಜೊತೆಗೆ ಈ ಮೂಲಕ ಗಾಸಿಪ್‌ಗಳಿಗೆ ಉತ್ತರಿಸಬೇಕೆಂದು ಅವರು ನಿರ್ಧರಿಸಿದ್ದಾರೆ. 

ಯಾವ ಗಾಸಿಪ್‌, ಏನು ಉತ್ತರ ಎಂಬ ಪ್ರಶ್ನೆ ನಿಮ್ಮನ್ನು ಕಾಡಬಹುದು. ರಾಧಿಕಾ ಅವರು ಬೆಂಗಳೂರು ಬಿಟ್ಟು, ಮಂಗಳೂರಿನಲ್ಲಿ ಸೆಟ್ಲ ಆಗಿದ್ದಾರಂತೆ, ಮುಂದೆ ಸಿನಿಮಾ ಮಾಡೋದಿಲ್ವಂತೆ ಎಂಬೆಲ್ಲಾ ಗಾಸಿಪ್‌ಗಳು ಕೇಳಿಬಂದಿದ್ದವು. ಇದಕ್ಕೆ ರಾಧಿಕಾ ಸಿನಿಮಾ ಮೂಲಕ ಉತ್ತರ ಕೊಡಲು ನಿರ್ಧರಿಸಿದ್ದಾರೆ. “ಜನ ನಾನು ಇಲ್ಲಿ ಇಲ್ಲ ಎಂದು ಭಾವಿಸಿದ್ದಾರೆ. ಎಲ್ಲರಿಗೂ ಉತ್ತರ ಕೊಟ್ಟು ಸುಸ್ತಾಗಿ ಹೋಯಿತು.

ಇನ್ನು ನಾನು ಮಾತನಾಡುವುದರಲ್ಲಿ ಅರ್ಥವಿಲ್ಲ. ಸಿನಿಮಾ ಮೂಲಕ ಉತ್ತರಿಸಬೇಕು. ವರ್ಷಕ್ಕೆರಡು ಸಿನಿಮಾ ಬಿಡುಗಡೆಯಾದಾಗ ನಾನೆಲ್ಲಿದ್ದೇನೆ ಎಂಬುದು ಜನರಿಗೆ ಗೊತ್ತಾಗುತ್ತದೆ’ ಎಂದು ಸ್ಪಷ್ಟವಾಗಿ ಹೇಳುತ್ತಾರೆ ರಾಧಿಕಾ. ನೀವು ಸೂಕ್ಷ್ಮವಾಗಿ ಗಮನಿಸಿದರೆ, ರಾಧಿಕಾ ಇತ್ತೀಚೆಗೆ ಬೇರೆ ಬ್ಯಾನರ್‌ನ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿಲ್ಲ. ಯಾವುದಾದರೂ ಕಥೆ ಇಷ್ಟವಾದರೆ, ಅದನ್ನು ತಮ್ಮ ಬ್ಯಾನರ್‌ನಲ್ಲೇ ನಿರ್ಮಿಸಿ, ನಟಿಸುತ್ತಾರೆ.

ಯಾಕೆ ಈ ನಿರ್ಧಾರ ಎಂದರೆ,  ತನ್ನಿಂದ ಬೇರೆ ನಿರ್ಮಾಪಕರಿಗೆ ತೊಂದರೆಯಾಗಬಾರದು ಎಂಬ ಉತ್ತರ ಅವರಿಂದ ಬರುತ್ತದೆ. “ನಾನು ಒಮ್ಮೆ ಡೇಟ್‌ ಕೊಟ್ಟ ನಂತರ ಅವರು ಹೇಳಿದಾಗ ಚಿತ್ರೀಕರಣಕ್ಕೆ ಹೋಗಬೇಕು. ನನ್ನಿಂದ ಯಾವ ನಿರ್ಮಾಪಕರಿಗೂ ತೊಂದರೆಯಾಗಬಾರದು. ಅದೇ ಕಾರಣದಿಂದ ನನಗೆ ಬೇರೆ ಬ್ಯಾನರ್‌ಗಳಿಂದ ಅವಕಾಶ ಬಂದರೂ ತುಂಬಾ ಆಲೋಚಿಸಿ ಒಪ್ಪಿಕೊಳ್ಳುತ್ತೇನೆ. ಒಮ್ಮೆ ಕಮಿಟ್‌ ಆದ ನಂತರ ನಮ್ಮಿಂದ ಯಾರಿಗೂ  ತೊಂದರೆಯಾಗಬಾರದು’ ಎನ್ನುತ್ತಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.