ಸೈನಿಕರಿಂದ ಕೆರೆ ಸ್ವತ್ಛತೆ
Team Udayavani, Oct 11, 2018, 12:35 PM IST
ಬೆಂಗಳೂರು: ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಮತ್ತು ಕೇಂದ್ರದ ಸಾವಿರಕ್ಕೂ ಅಧಿಕ ಸೈನಿಕರು ಪರಿಸರ ಸಂರಕ್ಷಣೆಯ ಅಭಿಯಾನದಡಿ ಬುಧವಾರ ಹಲಸೂರು ಕೆರೆಯಲ್ಲಿ ಸ್ವತ್ಛತಾ ಕಾರ್ಯ ನಡೆಸಿದರು.
ಬೆಳಗ್ಗೆಯಿಂದಲೇ ಕರೆಯ ನೀರು ಹಾಗೂ ದಡದಲ್ಲಿ ದಟ್ಟಾವಾಗಿ ಬೆಳೆದಿದ್ದ ಕಳೆ ಕಿತ್ತು, ನೀರನ್ನು ಸಂಪೂರ್ಣವಾಗಿ ಸ್ವತ್ಛಗೊಳಿಸುವ ಪ್ರಯತ್ನ ನಡೆಸಿದರು. ಈ ಮೂಲಕ ಸೈನಿಕರು ದೇಶದ ಗಡಿ ಕಾಯುವುದು ಮಾತ್ರವಲ್ಲದೇ
ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಗೂ ಮುಂದಿದ್ದೇವೆ ಎಂಬುದನ್ನು ಸಾಬೀತು ಮಾಡಿದರು.
ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಮತ್ತು ಕೇಂದ್ರದ ಸೈನಿಕರು ತಮ್ಮ ನಿತ್ಯದ ತರಬೇತಿಗಾಗಿ ಹಲಸೂರು ಕರೆ
ಬಳಸಿಕೊಳ್ಳುತ್ತಾರೆ. ಕಳೆದ ಕೆಲವು ವರ್ಷಗಳಿಂದ ಒಳಚರಂಡಿ ನೀರು ನೇರವಾಗಿ ಕೆರೆಗೆ ಹರಿದುಬರುತ್ತಿರುವುದರಿಂದ ನೀರು ಕಲುಷಿತವಾಗಿರುವ ಜತೆಗೆ ಪಾಚಿ ಹಾಗೂ ಅನುಪಯುಕ್ತ ವಸ್ತುಗಳು ತುಂಬಿಕೊಂಡಿದ್ದವು.
ಆಗಾಗೇ ಸ್ವತ್ಛತಾ ಕಾರ್ಯ ನಡೆಸುತ್ತಿದ್ದರೂ, ತ್ಯಾಜ್ಯ ಬೀಳುವ ಪ್ರಮಾಣ ಮಾತ್ರ ಕಡಿಮೆಯಾಗಿಲ್ಲ. ಇದು ಕೆರೆಯ ಸುತ್ತಲಿನ ಪರಿಸರ ಕಲುಷಿತವಾಗುವಂತೆ ಮಾಡಿದೆ. ಕೆರೆಗೆ ಯಾವುದೇ ರೀತಿಯಲ್ಲೂ ಅನಾಹುತ ಆಗದಂತೆ ಸೈನಿಕರು ಎಷ್ಟೇ ಜಾಗೃತಿ ಹಾಗೂ ಎಚ್ಚರ ವಹಿಸಿದರೂ, ಬೇರೆ ಬೇರೆ ಮೂಲಗಳಿಂದ ಕಲುಷಿತವಾಗುತ್ತಲೇ ಇದೆ.
ಹೀಗಾಗಿ ಆಗಾಗ ಸ್ವತ್ಛತಾ ಕಾರ್ಯವನ್ನು ಮಾಡುತ್ತಿರುತ್ತಾರೆ. ಅದರ ಮುಂದುವರಿದ ಭಾಗವಾಗಿ ಬುಧವಾರ ನಿರಂತರ ಶ್ರಮದಾನ ಮೂಲಕ ಕೆರೆ ಸ್ವತ್ಛತೆ ಮಾಡಿದ್ದಾರೆ. ದೋಣಿ ಸಹಿತವಾಗಿ ವಿವಿಧ ಪರಿಕರಗಳನ್ನು ಬಳಸಿಕೊಂಡು ಕೆರೆಯ ಸ್ವತ್ಛತಾ ಕಾರ್ಯ ನಡೆಸಿ, ವಿವಿಧ ತ್ಯಾಜ್ಯ ವಸ್ತುಗಳನ್ನು ಕೆರೆಯಿಂದ ಮೇಲೆ ತೆಗೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ