ಕಾಯ್ದೆ ಇದ್ದರೂ ಬಾಲ್ಯವಿವಾಹ ನಿಷೇಧ ಆಗುತ್ತಿಲ್ಲವೇಕೆ?


Team Udayavani, Oct 11, 2018, 4:03 PM IST

cta-1.jpg

ಚಿತ್ರದುರ್ಗ: ಇಲ್ಲಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಬುಧವಾರ ಮಕ್ಕಳ ಹಕ್ಕುಗಳು ಹಾಗೂ ವಿಕಲಚೇತನ ಮಕ್ಕಳಿಗೆ ಇರುವ ಸಮಸ್ಯೆಗಳು ಮತ್ತು ಅದರ ಪರಿಹಾರಗಳ ಕುರಿತ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಯಿತು. ಹತ್ತನೇ ತರಗತಿಯೊಳಗಿನ ವಿದ್ಯಾರ್ಥಿನಿಯರು ಕೇಳಿದ ಪ್ರಶ್ನೆಗಳಿಗೆ ಆಯೋಗದ ಸದಸ್ಯರು ಸೇರಿದಂತೆ ಯಾವುದೇ ಅಧಿಕಾರಿಗಳಿಂದ ಸಮರ್ಪಕ ಉತ್ತರ ಬಾರದೇ ಇದ್ದುದು ತೀವ್ರ ಆಕ್ಷೇಪಕ್ಕೆ ಕಾರಣವಾಯಿತು. 

ಮೊಳಕಾಲ್ಮೂರು ತಾಲೂಕಿನ ಕೋನಸಾಗರದ ವಿದ್ಯಾರ್ಥಿನಿ ಕಮಲಾ, ನನ್ನ ನಾಲ್ಕು ಗೆಳತಿಯರಿಗೆ 8ನೇ ತರಗತಿಯಲ್ಲಿದ್ದಾಗ ಮದುವೆ ಆಗಿದೆ. ಬಾಲ್ಯವಿವಾಹ ಅಪರಾಧ ಎನ್ನುವ ಕಾಯ್ದೆ ಇದೆ. ಆಯೋಗ ಈ ಬಗ್ಗೆ ಅರಿವು
ಮೂಡಿಸುತ್ತಿದೆ. ಎಲ್ಲ ಹಂತದ ಅಧಿಕಾರಿಗಳು ಬಾಲ್ಯ ವಿವಾಹ ತಡೆಗೆ ಕೆಲಸ ಮಾಡುತ್ತಾರೆ. ಆದರೂ ಬಾಲ್ಯವಿವಾಹಗಳನ್ನು ನಿಲ್ಲಿಸಲು ಏಕೆ ಆಗುತ್ತಿಲ್ಲ, ಇಂತಹ ಕಾಯ್ದೆಗಳು ಏಕೆ ಬೇಕು, ಮಕ್ಕಳ ಹಕ್ಕುಗಳು ರಕ್ಷಣೆ ಆಗುತ್ತಿಲ್ಲವೇಕೆ, ಮಕ್ಕಳು ಹೇಳಿಕೊಳ್ಳುವ ಸಮಸ್ಯೆಗಳಿಗೆ ಯಾವ ಅಧಿಕಾರಿಗಳಿಂದ ಪರಿಹಾರ ದೊರಕಿದೆ ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿ ತಬ್ಬಿಬ್ಬುಗೊಳಿಸಿದಳು. 

ಚಿತ್ರದುರ್ಗ ತಾಲೂಕಿನ ಐನಹಳ್ಳಿ-ಕುರುಬರಹಟ್ಟಿಯ ವೀರೇಶ್‌, ನಮ್ಮಲ್ಲೂ ಬಾಲ್ಯವಿವಾಹ ಆಗುತ್ತಿವೆ. ಪ್ರಸಕ್ತ
ವರ್ಷದಲ್ಲೇ ನಾಲ್ಕು ಬಾಲ್ಯವಿವಾಹಗಳು ನಡೆದಿವೆ ಎಂದು ಆರೋಪಿಸಿದ. ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿಯ ವೈಶಾಲಿ, ನಾನು 9ನೇ ತರಗತಿ ಓದುತ್ತಿದ್ದೇನೆ. ನಮ್ಮ ಶಾಲೆಯಲ್ಲಿ ಓದುತ್ತಿದ್ದ ಸುಚಿತ್ರ ಎನ್ನುವ ಗೆಳತಿ ಶಾಲೆಗೆ
ಬರುತ್ತಿಲ್ಲ. ಅವರ ಮನೆಯಲ್ಲಿ ವಿಚಾರಿಸಿದೆ. ಅಜ್ಜಿ ಮನೆಯಲ್ಲಿ ಓದಲು ಬಿಟ್ಟಿದ್ದೇವೆ ಎಂದರು. 

ಆದರೆ ಶಿರಾ ತಾಲೂಕಿನ ಹಳ್ಳಿಗೆ ಮದುವೆ ಮಾಡಿಕೊಡಲಾಗಿದೆ. ಚಿಕ್ಕ ಮಕ್ಕಳಿಗೆ ಮದುವೆ ಮಾಡಿದರೆ ಸಂಸಾರದ ಹೊರೆ ಹೊರಲು ಸಾಧ್ಯವೇ, ಮನೆಯಲ್ಲಿ ಮಕ್ಕಳು ತಂದೆ, ತಾಯಿಗಳ ವಿರುದ್ಧ ಮಾತನಾಡಲು ಸಾಧ್ಯವೇ,
ಶಾಲೆಗಳಲ್ಲಿ ಅರಿವು ಮೂಡಿಸಿದರೆ ಸಾಲದು, ಪೋಷಕರಿಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು. ನಮ್ಮ ಅಹವಾಲುಗಳನ್ನು ಹೇಳಿಕೊಳ್ಳೋಣ ಎಂದರೆ ಜಿಲ್ಲಾಧಿಕಾರಿ, ಎಸ್ಪಿ, ಸಿಇಒ ಯಾರೊಬ್ಬರೂ ಇಲ್ಲಿಲ್ಲ ಎಂದು ಆಕ್ರೋಶ
ವ್ಯಕ್ತಪಡಿಸಿದಳು. ಮೇಲಾಧಿಕಾರಿಗಳನ್ನ ಕರೆಸಬೇಕು. 

ಇಲ್ಲವಾದರೆ ನಾವ್ಯಾರು ಇಲ್ಲಿಂದ ಕದಲುವುದಿಲ್ಲ. ನೂರಾರು ಕಿಮೀ ದೂರದಿಂದ ನೋವು ಹೇಳಿಕೊಳ್ಳಲು ಬಂದಿದ್ದೇವೆ. ಮಕ್ಕಳಿಗೆ ನ್ಯಾಯ ಕೊಡಿಸಿ ಎಂದು ಪಟ್ಟು ಹಿಡಿದಳು.
 
ವಿದ್ಯಾರ್ಥಿ ವೀರೇಶ್‌ ಮಾತನಾಡಿ, ನಮ್ಮ ಶಾಲೆಯಲಿ ಕೇವಲ ಎರಡು ಶೌಚಾಲಯವಿದ್ದು, 170 ಮಕ್ಕಳು ಹೇಗೆ ಬಳಕೆ ಮಾಡಬೇಕು, ಕೆರೆಯಂಗಳಕ್ಕೆ ಹೋಗಿ ಮೂತ್ರ ವಿಸರ್ಜನೆ ಮಾಡಬೇಕಿದೆ. ಜಿಪಂ ಸಿಇಒ ಸೇರಿದಂತೆ ಎಲ್ಲರಿಗೂ ಮನವಿ ಮಾಡಿದ್ದೇವೆ. ಇಂದಿಗೂ ಶೌಚಾಲಯ ನಿರ್ಮಿಸಿಲ್ಲ. ಇನ್ನೂ ಶಾಲೆಯ 2 ಕಿಮೀ ದೂರದಲ್ಲಿ ಜೆಲ್ಲಿ ಕ್ರಷರ್‌ ಇದ್ದು ಅದು
ಹೊರ ಸೂಸುವ ಧೂಳಿನಿಂದ ನಾಲ್ಕು ಮಕ್ಕಳು ಅಸ್ತಮಾ ಸೇರಿದಂತೆ ನಾನಾ ರೀತಿಯ ಕಾಯಿಲೆಗೆ ತುತ್ತಾಗಿ ಶಾಲೆ ಬಿಟ್ಟಿದ್ದಾರೆಂದು ನೋವು ತೋಡಿಕೊಂಡ.

ಮಕ್ಕಳ ಸಮಸ್ಯೆ ಆಲಿಸಿದ ಆಯೋಗದ ಸದಸ್ಯ ರೂಪ ನಾಯ್ಕ, ಯಾವ್ಯಾವ ಊರುಗಳಲ್ಲಿ ಬಾಲ್ಯ ವಿವಾಹ ನಡೆಯುತ್ತಿದೆ ಎದ್ದು ನಿಲ್ಲಿ ಎಂದು ಸೂಚಿಸಿದರು. ಅಹವಾಲುಗಳನ್ನು ಹೇಳಿಕೊಳ್ಳಲು ಆಗಮಿಸಿದ್ದ ಶೇ. 90 ರಷ್ಟು ಮಕ್ಕಳು ಎದ್ದು ನಿಂತು ಬಾಲ್ಯವಿವಾಹಗಳು ನಡೆಯುತ್ತಿವೆ ಎಂದು ಕೂಗಿ ಹೇಳಿದರು.

ನಮ್ಮೂರಿಗೆ ಬಸ್‌ ಸೌಲಭ್ಯವಿಲ್ಲ, ರಸ್ತೆಯಿಲ್ಲ, ಶಾಲೆಗೆ ಕಾಂಪೌಂಡ್‌ ಇಲ್ಲ, ಕುಡಿಯುವ ನೀರಿಲ್ಲ, ಶಿಕ್ಷಕರಿಲ್ಲ, ಕ್ರೀಡಾಂಗಣವಿಲ್ಲ, ಶಾಲಾ ಕಟ್ಟಡ ಬೀಳುವಂತಿದೆ. ಕೊಠಡಿಗಳ ಸಮಸ್ಯೆ ಇದೆ ಎಂದು ನೂರಾರು ದೂರುಗಳನ್ನು ಹೇಳಿಕೊಂಡರು. ಆಯೋಗದ ಸದಸ್ಯರು, ನಾವೆಲ್ಲ ಮಕ್ಕಳ ಹಣದಲ್ಲಿ ಸಂಬಳ ಪಡೆಯುತ್ತಿದ್ದೇವೆ. ಮಕ್ಕಳಿಗೆ ನ್ಯಾಯ ಕೊಡಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ ನಮಗೆಲ್ಲ ನಾಚಿಕೆ ಆಗಬೇಕು. ಕಾಟಾಚಾರಕ್ಕೆ ಸಭೆ ಆಗುತ್ತಿದೆ, ಯಾವ ಅಧಿ ಕಾರಿಗಳೂ ಸಭೆಗೆ ಆಗಮಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಪಂ ಉಪ ಕಾರ್ಯದರ್ಶಿ ಬಸವರಾಜಪ್ಪ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ರಾಜಾ ನಾಯ್ಕ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಭಾಕರ, ಐಎಎಸ್‌ ಪ್ರೊಬೆಷನರಿ ಅಧಿಕಾರಿ ಡಾ| ನಂದಿನಿ ದೇವಿ, ಸಿಪಿಐ ಪ್ರಕಾಶ್‌ ಪಾಟೀಲ್‌, ವಿಶ್ವಸಾಗರ್‌, ವಿಕಲಚೇತನ ಕಲ್ಯಾಣಾಧಿಕಾರಿ ಜೆ. ವೈಶಾಲಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.