ಹಾರನಹಳ್ಳಿ ಗ್ರಾಪಂ ಪಿಡಿಒ ನಿಯೋಜನೆ ರದ್ದು


Team Udayavani, Oct 12, 2018, 1:21 PM IST

blore-10.jpg

ಅರಸೀಕೆರೆ: ತಾಲೂಕಿನ ಹಾರನಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ವೈ.ಟಿ.ಶಾರದಮ್ಮ ನಿಯೋಜನೆ ಸಂಬಂಧ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮುಖಂಡರ ನಡುವೆ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಅಂತ್ಯ ಗೊಂಡಿದೆ.

ಪಿಡಿಒ ನಿಯೋಜನೆಯಲ್ಲಿ ಉಂಟಾಗಿದ್ದ ಬಿಕ್ಕಟ್ಟು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೃಷ್ಣಭೈರೇಗೌಡ ಹಾಗೂ ಜಿಪಂ ಸಿಇಒಗೂ ತಲೆನೋವು ತರಿಸಿತ್ತು. ಅನ್ಯ ಕಾರಣ ನಿಮಿತ್ತ ನಿಯುಕ್ತಿಗೊಂಡಿರುವ ಪಿಡಿಒಗಳು ತಮ್ಮ ಮೂಲ ಗ್ರಾಪಂ ಕೇಂದ್ರದಲ್ಲಿ ಸೇವೆ ಸಲ್ಲಿಸಲು ಸುತ್ತೋಲೆ ಹೊರಡಿಸಿದ್ದು, ತಾಲೂಕಿನ ಹಾರನಹಳ್ಳಿ ಗ್ರಾಪಂ ಪಿಡಿಒ ನಿಯೋಜನೆ ಸಂಬಂಧಪಟ್ಟಂತೆ ಉಂಟಾಗಿದ್ದ ಸಮಸ್ಯೆಗೆ ತೆರೆ ಬಿದ್ದಂತಾಗಿದೆ.

ಈ ಕುರಿತಂತೆ ಅ.5ರಂದು ಜಿಪಂ ಸಿಇಒ ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ಕಾರಣ, ಸ್ಥಳೀಯ ಆಡಳಿತ ಮಟ್ಟದ ಒತ್ತಡ, ನೌಕರರ ಕೋರಿಕೆ ಸೇರಿದಂತೆ ಇತ್ಯಾದಿ ನೆಪಗಳನ್ನಿರಿಸಿಕೊಂಡು ಗ್ರಾಪಂ ಪಿಡಿಒ, ಕಾರ್ಯದರ್ಶಿ ಹಾಗೂ ಲೆಕ್ಕ ಸಹಾಯಕರನ್ನು ವರ್ಗಾವಣೆ ಮಾಡಬಾರದು.
ಇದರಿಂದಾಗಿ ಗ್ರಾಮಗಳ ಅಭಿವೃದ್ಧಿ ಕಾರ್ಯಗಳು, ಹಣಕಾಸು ನಿರ್ವಹಣೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಯಾಗಲಿದೆ ಎನ್ನುವ ಸೂಚನೆ ನೀಡುವ ಮೂಲಕ ನಿಯೋಜನೆ ಪ್ರಕ್ರಿಯೆಗೆ ಸರ್ಕಾರ ಬ್ರೇಕ್‌ ಹಾಕಿದೆ.

ಸರ್ಕಾರದ ಸುತ್ತೂಲೆಗೆ ಕಾರಣ: ತಾಲೂಕಿನ ಹಾರನಹಳ್ಳಿ ಗ್ರಾಪಂ ಪಿಡಿಒ ಆಗಿ ಕಾರ್ಯ ನಿರ್ವಹಿಸಿದ್ದ ವೈ.ಟಿ.ಶಾರದಮ್ಮ ಅವರನ್ನು ಮತ್ತೆ ಇಲ್ಲಿಗೆ ನಿಯೋಜನೆ ಮಾಡಿದ್ದನ್ನು ಗ್ರಾಪಂ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಮುಖಂಡ ಎಚ್‌.ಎಸ್‌. ನಂದೀಶ್‌ ಹಾಗೂ ಅವರ ಬೆಂಬಲಿತ ಸದಸ್ಯರು ವಿರೋಧ ವ್ಯಕ್ತಪಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೃಷ್ಣಭೈರೇಗೌಡ ಹಾಗೂ ಮುಖ್ಯಕಾರ್ಯದರ್ಶಿ ಗಮನಕ್ಕೂ ತಂದಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಗೀಜಿ ಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಧರ್ಮೇಶ್‌ ಹಾಗೂ ಜೆಡಿಎಸ್‌ ಬೆಂಬಲಿತ ಸದಸ್ಯರು ಪಿಡಿಒ ಶಾರದಮ್ಮ ಪರ ತಾಪಂ ಕಚೇರಿ ಎದುರು ಧರಣಿ ನಡೆಸಿದ್ದರು.

ಈ ಸಂಬಂಧ ಉಂಟಾಗಿದ್ದ ರಾಜಕೀಯ ಸಮಸ್ಯೆಯು ಸ್ಥಳೀಯ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮುಖಂಡರ ಮುಸುಕಿನ ಗುದ್ದಾಟಕ್ಕೆ ಕಾರಣ ವಾಗಿತ್ತು. ಈ ಹಿನ್ನೆಲೆಯಲ್ಲಿ ಸಮಸ್ಯೆಯ ತೀವ್ರತೆ ಮನಗಂಡ ಅಧಿಕಾರಿಗಳು ಇದೀಗ ನೀಯೋ
ಜನೆಯ ಎಲ್ಲಾ ಪ್ರಕ್ರಿಯೆಯನ್ನು ರದ್ದುಪಡಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ. ಇದರಿಂದಾಗಿ ತಾಲೂಕಿನ ಅನ್ಯ ಗ್ರಾಪಂಗೆ ನಿಯೋಜನೆಗೊಂಡಿರುವ ಪಿಡಿಒಗಳು ನಿರಾಳರಾಗಿದ್ದು, ತಮ್ಮ ಮೂಲ ಗ್ರಾಪಂ ಕೇಂದ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ ದಂತಾಗಿದೆ. 

ರಾಜ್ಯ ಸರ್ಕಾರದ ಸೂಚನೆಯಂತೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ನಿಯೋಜನೆ ರದ್ದುಗೊಳಿಸಲಾಗಿದೆ. ಅನ್ಯ
ಕಾರಣ ನಿಮಿತ್ತ ನಿಯುಕ್ತಿಗೊಂಡಿರುವ ಪಿಡಿಒಗಳು ತಮ್ಮ ಮೂಲ ಗ್ರಾಪಂ ಕೇಂದ್ರದಲ್ಲಿ ಸೇವೆ ಸಲ್ಲಿಸಲು ಸೂಚಿಸ
ಲಾಗಿದೆ. ಜೊತೆಗೆ ಜಿಪಂ ಸೂಚನೆ ಮೇರೆಗೆ ಹೋಗಿದ್ದ ಪಿಡಿಒಗಳ ವಿವರ ಕುರಿತು ಸಿಇಒಗೆ ಮಾಹಿತಿ ನೀಡಲಾಗಿದೆ.
 ಕೃಷ್ಣಮೂರ್ತಿ, ಅರಸೀಕೆರೆ ತಾಪಂ, ಇಒ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.