ಇರಾನ್ನಿಂದ ಭಾರತ ತೈಲ ಖರೀದಿಸಿದರೆ ಲಾಭವಿಲ್ಲ
Team Udayavani, Oct 13, 2018, 10:13 AM IST
ವಾಷಿಂಗ್ಟನ್: ಇರಾನ್ನಿಂದ ತೈಲವನ್ನು ಹಾಗೂ ರಷ್ಯಾದಿಂದ ರಕ್ಷಣಾ ವ್ಯವಸ್ಥೆಯನ್ನು ಭಾರತ ಖರೀದಿಸಿದರೆ ಭಾರತಕ್ಕೇನೂ ಲಾಭವಾಗದು ಎಂದು ಅಮೆರಿಕ ಹೇಳಿದೆ.
ಇರಾನ್ನಿಂದ ತೈಲ ಖರೀದಿಗೆ ನಿಷೇಧ ಹೇರಿರುವ ಕುರಿತು ಮಾತನಾಡಿದ ಅಮೆರಿಕದ ವಿದೇಶಾಂಗ ವ್ಯವಹಾರಗಳ ವಕ್ತಾರೆ ಹೀದರ್ ನವರ್ಟ್, ವಿಶ್ವದ ಹಲವು ದೇಶಗಳೊಂದಿಗೆ ನಾವು ನಿಷೇಧದ ಬಗ್ಗೆ ಮಾತುಕತೆ ನಡೆಸಿದ್ದೇವೆ. ಅಲ್ಲದೆ ಭಾರತದ ಈ ವಹಿವಾಟನ್ನು ನಾವು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ ಎಂದಿದ್ದಾರೆ. ಈ ಮಧ್ಯೆ ನವೆಂಬರ್ 4ರಿಂದ ಇರಾನ್ನಿಂದ ತೈಲ ಆಮದು ಮಾಡಿಕೊಳ್ಳುವುದರ ಮೇಲೆ ಅಮೆರಿಕ ಹೇರಿರುವ ನಿಷೇಧದ ಹೊರತಾಗಿಯೂ ಭಾರತದ ತೈಲ ಕಂಪೆನಿಗಳು ಇರಾನ್ನಿಂದ ತೈಲ ಖರೀದಿಸಲು ಆರ್ಡರ್ ಮಾಡಿವೆ ಎಂದು ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಇರಾನ್ನಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲು ಅಮೆರಿಕ ಯತ್ನಿಸುತ್ತಿದೆ.
ನಿಷೇಧದ ನಡುವೆಯೂ ವಹಿವಾಟು ಜೋರು
ಚೀನ ಹಾಗೂ ಅಮೆರಿಕದ ಮಧ್ಯೆ ವ್ಯಾಪಾರ ಯುದ್ಧ ತಾರಕಕ್ಕೇರಿದರೂ, ಚೀನದಿಂದ ಅಮೆರಿಕಕ್ಕೆ ರಫ್ತಾಗುತ್ತಿರುವ ಸಾಮಗ್ರಿಗಳು ಹೆಚ್ಚಳವಾಗುತ್ತಲೇ ಇವೆೆ. ಆದರೆ ಅಮೆರಿಕದಿಂದ ಚೀನ ಆಮದು ಮಾಡಿಕೊಳ್ಳುತ್ತಿರುವ ಪ್ರಮಾಣ ಕಡಿಮೆಯಾಗಿದೆ. ಇದರಿಂದಾಗಿ ಚೀನ ವಿರುದ್ಧ ಅಮೆರಿಕ ಇನ್ನಷ್ಟು ನಿಷೇಧ ಹೇರುವ ಸಾಧ್ಯತೆಯಿದೆ.
ತೈಲ ಕಂಪೆನಿಗಳ ಉತ್ಪಾದನೆ ಪರಿಶೀಲನೆ
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ತೈಲ ಉತ್ಪಾದನೆ ಕಂಪೆನಿಗಳಾದ ಒಎನ್ಜಿಸಿ, ಆಯಿಲ್ ಇಂಡಿಯಾ ಉತ್ಪಾದನಾ ಸಾಮರ್ಥ್ಯದ ಮರುಪರಿಶೀಲನೆಯನ್ನು ಪ್ರಧಾನಿ ಮೋದಿ ಶುಕ್ರವಾರ ನಡೆಸಿದ್ದಾರೆ. ಶೇ. 10ರಷ್ಟು ತೈಲ ಆಮದು ಕಡಿತಗೊಳಿಸುವ ನಿರ್ಧಾರ ಹೇಗೆ ಪರಿಣಾಮ ಬೀರಲಿದೆ ಎಂಬುದನ್ನು ಈ ವೇಳೆ ಚರ್ಚೆ ನಡೆಸಲಾಯಿತು. ಮುಂದಿನ 5 ವರ್ಷಗಳವರೆಗೆ ತಮ್ಮ ಕಂಪೆನಿಗಳ ತೈಲ ಉತ್ಪಾದನೆ ಬಗ್ಗೆ ಈ ಕಂಪೆನಿಗಳು ವಿವರಣೆ ನೀಡಿವೆ. 2022ರ ವೇಳೆಗೆ ತೈಲ ಆಮದು ಅವಲಂಬನೆ ಶೇ. 67ಕ್ಕೆ ಇಳಿಸಬೇಕು ಎಂದು ಮೋದಿ ಕರೆ ನೀಡಿದ್ದರಾದರೂ, 2013-14ರಿಂದ ಅಂತಾರಾಷ್ಟ್ರೀಯ ತೈಲ ಬೆಲೆ ಇಳಿಕೆಯಾಗಿದ್ದರಿಂದ, ಆಮದು ಪ್ರಮಾಣ ಹೆಚ್ಚಾಗುತ್ತಲೇ ಸಾಗಿದೆ. 2017-18ರಲ್ಲಿ ಇದು ಶೇ. 82.8ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ನಡೆಸಿದ ಸಭೆ ಅತ್ಯಂತ ಮಹತ್ವದ್ದಾಗಿದ್ದು, ದೇಶೀಯ ನಿಕ್ಷೇಪಗಳಿಂದ ತೈಲ ಹೊರತೆಗೆಯುವ ಪ್ರಕ್ರಿಯೆ ಇನ್ನು ಚುರುಕು ಮೂಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ