ಉಗ್ರನ ಸೆರೆಗೆ ಅತಿವೃಷ್ಟಿ ಕಾರಣ


Team Udayavani, Oct 13, 2018, 12:45 PM IST

blore-1.jpg

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರಿಂದ ಬಂಧನವಾಗಿರುವ ಲಷ್ಕರೆ-ಇ-ತೊಯ್ಬಾ ಸಂಘಟನೆ ಉಗ್ರ ಪಿ.ಎ.ಸಲೀಂ ಇತ್ತೀಚೆಗೆ ಕೇರಳದಲ್ಲಿ ಸಂಭವಿಸಿದ ನೆರೆ ಸಂದರ್ಭದಲ್ಲಿ ಕಣ್ಣೂರಿನ ಪಿಣರಾಯಿ ಕಾಡಿನಿಂದ ಹೊರಬಂದಿದ್ದು, ಈ ಮಾಹಿತಿ ಪಡೆದು ಬಂಧಿಸಲಾಯಿತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

2008ರಲ್ಲಿ ನಡೆದ ಸ್ಫೋಟದ ಬಳಿಕ ಗಲ್ಫ್ ದೇಶಗಳಲ್ಲಿ ತಲೆಮರೆಸಿಕೊಂಡಿದ್ದ. ಅಂದಿನಿಂದ ರಾಜ್ಯ ಪೊಲೀಸರ ಜತೆಗೆ ಕೇಂದ್ರ ಗುಪ್ತಚರ ಇಲಾಖೆ ಮತ್ತು ರಾ ಅಲ್ಲದೆ ನಾನಾ ತನಿಖಾ ಸಂಸ್ಥೆಗಳು ಈತನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದವು. ಕೇರಳ ಪೊಲೀಸರಿಗೂ ಪತ್ತೆಯಾಗಿರಲಿಲ್ಲ. ಆದರೆ, ಕೆಲ ವರ್ಷಗಳಿಂದ ಪಿಣರಾಯಿ ಅರಣ್ಯದಲ್ಲಿ ತಲೆಮರೆಸಿಕೊಂಡಿದ್ದ ಮಾಹಿತಿ ತನಿಖಾ ಸಂಸ್ಥೆಗಳಿಗೆ ಸಿಕ್ಕಿತ್ತು. ಆದರೆ, ಬಂಧನ ಸಾಧ್ಯವಾಗಿರಲಿಲ್ಲ.

ಈ ಮಧ್ಯೆ ಕೆಲ ತಿಂಗಳ ಹಿಂದೆ ಕೇರಳದಲ್ಲಿ ಸಂಭವಿಸಿದ ಜಲಪ್ರಳಯದಿಂದ ಕಾಡಿನಲ್ಲಿ ಭೂಕುಸಿತ ಉಂಟಾಗಿತ್ತು. ಇದರಿಂದ ಆತಂಕಗೊಂಡ ಸಲೀಂ ತನ್ನ ಸ್ಥಳ ಬದಲಾವಣೆಗೆ ಸಂಬಂಧಿಯೊಬ್ಬರನ್ನು ಸಂಪರ್ಕಿಸಿ, ನಾಡಿನೊಳಗೆ ಬಂದಿದ್ದ. ಈತ ರಹಸ್ಯವಾಗಿ ಕೇರಳದಲ್ಲಿ ಓಡಾಡುತ್ತಿರುವ ಮಾಹಿತಿ ಅರಿತ ಕೇರಳ ಪೊಲೀಸರು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೆ, ಆರೋಪಿ ಆಗಾಗ್ಗೆ ಪಿಣರಾಯಿಯಲ್ಲಿರುವ ತನ್ನ ಮನೆಗೆ ಬಂದು ಹೋಗುತ್ತಿದ್ದ.
 
ಕಾಡಿನಿಂದಲೇ ಸಂಘಟನೆ: ಕಳೆದ ಆರೇಳು ವರ್ಷಗಳಿಂದ ಆರೋಪಿ ಕಾಡಿನಲ್ಲೇ ವಾಸವಾಗಿದ್ದ. ವೇಷ ಬದಲಿಸಿ ಅಪರೂಪಕ್ಕೊಮ್ಮೆ ಮಾತ್ರ ನಾಡಿನೊಳಗೆ ಬಂದು ಹೋಗುತ್ತಿದ್ದ. ಕಾಡಿನಿಂದಲೇ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಸಕ್ರಿಯವಾಗಿರುವ ತನ್ನ ಲಷ್ಕರೆ-ಇ-ತೊಯ್ಬಾ ಸಂಘಟನೆ ಕಾರ್ಯಕರ್ತರ ಜತೆ ನಿರಂತರ ಸಂಪರ್ಕದಲ್ಲಿದ್ದ. ಜತೆಗೆ ತನ್ನ ವಿರುದ್ಧ ಇರುವ ಕೆಲ ತಾಂತ್ರಿಕ ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಆದರೆ, ಕೆಲ ಸಾಕ್ಷ್ಯಗಳನ್ನು ಬೇರೆಡೆ ಮುಚ್ಚಿಟ್ಟಿರುವ ಸಾಧ್ಯತೆಗಳಿವೆ. ಇನ್ನು ಬಿಡುವಿದ್ದ ವೇಳೆಯಲ್ಲಿ ಈ ಮೊದಲಿನಂತೆ ಸರ್ಕ್ನೂಟ್‌ ತಯಾರು ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ರೆಡ್‌ಕಾರ್ನರ್‌ ನೋಟಿಸ್‌: ಪಿ.ಎ.ಸಲೀಂ ವಿರುದ್ಧ ಕೇಂದ್ರ ಗುಪ್ತಚರ ಇಲಾಖೆ ಮತ್ತು ರಾ ಈ ಹಿಂದೆ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಿತ್ತು. ಇದನ್ನು ಅರಿತ ಸಲೀಂ ಗಲ್ಫ್ ದೇಶಗಳಿಂದ ರಹಸ್ಯ ಮಾರ್ಗವಾಗಿ ಕೇರಳ ಸೇರಿಕೊಂಡಿದ್ದ. ಹೀಗಾಗಿ ಈತನ ಬಳಿಯಿರುವ ಪಾಸ್‌ಪೋರ್ಟ್‌ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ತನಿಖೆಗೆ ಸಹಕರಿಸದ ಸಲೀಂ: ಆರೋಪಿ ಸಲೀಂ ಸಿಸಿಬಿ ಪೊಲೀಸರ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಹೇಳಲಾಗಿದೆ. ಆರೋಪಿಗೆ ಕನ್ನಡ, ಇಂಗ್ಲೀಷ್‌ ಮತ್ತು ತಮಿಳು ಭಾಷೆಗಳು ಅರ್ಥವಾಗುತ್ತಿದ್ದು, ಮಾತನಾಡುವುದಿಲ್ಲ. ಆದರೆ, ಮಲಾಯಳಂನಲ್ಲಿ ಮಾತ್ರ ಉತ್ತರಿಸುತ್ತಾನೆ. ಆರೋಪಿ ಸ್ಫೋಟಕ್ಕೂ ಮೊದಲು ತನ್ನ ಸಂಘಟನೆ ಸದಸ್ಯರ ಜತೆ ಬೆಂಗಳೂರಿಗೆ ಬಂದಿರುವುದಾಗಿ ಒಪ್ಪಿಕೊಳ್ಳುವ ಸಲೀಂ ಸ್ಫೋಟದ ಬಗ್ಗೆ ಮಾಹಿತಿ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾನೆ.
ಹೀಗಾಗಿ ಆರೋಪಿಯನ್ನು ತೀವ್ರ ರೀತಿಯಲ್ಲಿ ವಿಚಾರಣೆ ಮಾಡುವ ಸಾಧ್ಯತೆಯಿದೆ.

ಪ್ರಕರಣದ ಕೆಲ ಆರೋಪಿಗಳು ಕರ್ನಾಟಕದಲ್ಲಿ ಸ್ಫೋಟಿಸಲು ಎರ್ನಾಕುಲಂನಲ್ಲಿ ಕಾರೊಂದನ್ನು ಕಳ್ಳತನ ಮಾಡಿದ್ದರು. ಆದರೆ, ಸ್ಥಳೀಯ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು. ಒಂದು ವೇಳೆ ಆರೋಪಿಗಳು ಬಂಧನವಾಗದಿದ್ದರೆ, ಕಾರಿನಲ್ಲಿ ಅಮೋನಿಯಂ ನೈಟ್ರೇಟ್‌, ಜೆಲಿಟಿನ್‌ ಪುಡಿಗಳ ಜತೆ ಸಿಲಿಂಡರ್‌ಗಳನ್ನು ಹಾಕಿ ಮೆಜೆಸ್ಟಿಕ್‌, ಕೆ.ಆರ್‌.ಮಾರುಕಟ್ಟೆ ಸೇರಿ ಕೆಲ ಜನಜಂಗುಳಿ ಇರುವ ಸ್ಥಳಗಳಲ್ಲಿ ಸ್ಫೋಟಿಸಲು ಸಂಚು ರೂಪಿಸಿದ್ದರು. ಆದರೂ ಕೆಲ ಆರೋಪಿಗಳು ಸ್ಫೋಟಕ್ಕೂ ಕೆಲ ದಿನಗಳ ಮೊದಲು ಮುಂಜಾನೆ 3ಗಂಟೆಯಿಂದ ಮಡಿವಾಳದಿಂದ ಮೈಸೂರು ರಸ್ತೆವರೆಗೂ ಸ್ಫೋಟದ ಸ್ಥಳಗಳನ್ನು ಗುರುತಿಸುತ್ತಿದ್ದರು.

ಅಷ್ಟರಲ್ಲಿ ಬೆಳಗ್ಗೆ 5 ಗಂಟೆ ಆಗಿತ್ತು. ಈ ವೇಳೆ ತಮ್ಮ ಬಳಿಯಿದ್ದ ಪೆಟ್ಟಿಗೆಯಲ್ಲಿ ಇದ್ದ ಇನ್ನಷ್ಟು ಸ್ಫೋಟಕ ವಸ್ತುಗಳನ್ನು ಕೊಂಡೊಯ್ದು ಚನ್ನಪಟ್ಟಣ ಬಳಿ ಬಿಸಾಡಿ ಹೋಗಿದ್ದರು. ಅನಂತರ ಮತ್ತೆ ಬಂದು ನಿಗದಿ ಮಾಡಿದ್ದ ಸ್ಥಳಗಳಲ್ಲಿ ಸುಧಾರಿತ ಸ್ಫೋಟಕ ಸಾಧನ ಸ್ಫೋಟಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. 

ಆಟೋ ಚಾಲಕ ಆಗಿದ್ದ ಸಲೀಂ ಸಲೀಂ ಮೂಲತಃ ಆಟೋ ಚಾಲಕನಾಗಿದ್ದು, ನಾಸೀರ್‌ ಮದನಿಯ ಪಿಡಿಪಿ ಪಕ್ಷದ ಕಾರ್ಯಕರ್ತನಾಗಿದ್ದ. ನಂತರ ಸಂಬಂಧಿ ಸತ್ತಾರ್‌ ಸಲಹೆ ಮೇರೆಗೆ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗು ತ್ತಾನೆ.
ಆದರೆ, 2008ರ ಸ್ಫೋಟದ ಬಳಿಕ ಆರೋಪಿ ಗಲ್ಫ್ ದೇಶಗಳಿಂದ ಬಂದು ಕೇರಳದ ಕಾಡಿನಲ್ಲಿ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.

 ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.