ಮಧುಮೇಹ: ನಾವು ತಿಳಿಯಬೇಕಾದದ್ದು ಏನು?


Team Udayavani, Oct 14, 2018, 6:00 AM IST

diabetes-13.jpg

ಹಿಂದಿನ ವಾರದಿಂದ- ವ್ಯಾಯಾಮ ಮತ್ತು ಸೇವಿಸುವ ಆಹಾರಗಳ ನಡುವೆ ಉತ್ತಮ ಸಮತೋಲನ ಹೊಂದಿರುವುದು ಕೂಡ ಆವಶ್ಯಕ. ಇದು ಸ್ನಾಯುಶಕ್ತಿ ಮತ್ತು ಸೂಕ್ತ ದೇಹತೂಕವನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ. ಪ್ರತಿದಿನ ನಡಿಗೆ, ಜಾಗಿಂಗ್‌ನಂತಹ ಮಧ್ಯಮ ತೀವ್ರತೆಯ ವ್ಯಾಯಾಮವನ್ನು 30 ನಿಮಿಷಗಳ ಕಾಲ ಮಾಡುವುದು ಯೋಗ್ಯವಾಗಿದೆ.

ಮಧುಮೇಹವನ್ನು ಆದಷ್ಟು ಬೇಗನೆ ಪತ್ತೆಹಚ್ಚಿ ಚಿಕಿತ್ಸೆ ಆರಂಭಿಸುವುದು ಕೂಡ ರೋಗ ನಿರ್ವಹಣೆಯಲ್ಲಿ ಅತ್ಯಂತ ಪ್ರಾಮುಖ್ಯವಾಗಿದೆ. ಇದರಿಂದ ಕಾಯಿಲೆಯ ಆರಂಭಿಕ ಹಂತದಿಂದಲೇ ಗ್ಲೆ„ಸೇಮಿಕ್‌ ನಿಯಂತ್ರಣವನ್ನು ಇರಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ಇದು “ಮೆಟಬಾಲಿಕ್‌ ಮೆಮರಿ’ ಎಂಬುದಾಗಿ ಕರೆಯಲ್ಪಡುವ ವಿದ್ಯಮಾನದ ಮೂಲಕ ಮಧುಮೇಹದ ಸಂಕೀರ್ಣ ಸಮಸ್ಯೆಗಳು ಪ್ರಗತಿ ಹೊಂದುವುದನ್ನು ತಡೆಯುತ್ತದೆ ಹಾಗೂ ಚಿಕಿತ್ಸೆಗೆ ಪ್ರತಿಸ್ಪಂದನೆಯನ್ನು ಉತ್ತಮಗೊಳಿಸುತ್ತದೆ. ಮಧುಮೇಹದ ವಿಧ ಮತ್ತು ರೋಗಿಯ ದೇಹಸ್ವಭಾವಕ್ಕೆ ಅನುಗುಣವಾಗಿ ಚಿಕಿತ್ಸೆಯನ್ನು ವ್ಯಕ್ತಿ ನಿರ್ದಿಷ್ಟಗೊಳಿಸಬೇಕಾಗುತ್ತದೆ. 

ಮಧುಮೇಹಕ್ಕೆ ಒದಗಿಸಲಾಗುವ ಔಷಧ ಚಿಕಿತ್ಸೆಯು ಮಧುಮೇಹದಲ್ಲಿ ಅಡಕವಾಗಿರುವ ವಿವಿಧ ಚಯಾಪಚಯ ಸಮಸ್ಯೆಗಳನ್ನು ಉತ್ತರಿಸುವ ಹಲವು ವಿಧದ ಔಷಧಗಳು ಮತ್ತು ಇನ್ಸುಲಿನನ್ನು ಒಳಗೊಂಡಿರುತ್ತದೆ.

ಮಧುಮೇಹದ ದೀರ್ಘ‌ಕಾಲಿಕ ಸಂಕೀರ್ಣ ಸಮಸ್ಯೆಗಳನ್ನು ತಡೆಯುವುದಕ್ಕಾಗಿ ಚಿಕಿತ್ಸೆಯ ಸಂದರ್ಭದಲ್ಲಿ ಹಾಕಿಕೊಳ್ಳಲಾಗಿರುವ ಗುರಿಗಳನ್ನು ಸಾಧಿಸಲಾಗಿದೆಯೇ ಎಂಬುದನ್ನು ಪರಿಶೀಲಿಸುವ ನಿಗದಿತ ಅವಧಿಗಳಲ್ಲಿ ತಪಾಸಣೆಯೂ ಮಧುಮೇಹದ ನಿಭಾವಣೆಯಲ್ಲಿ ಅತ್ಯಂತ ಮುಖ್ಯವಾಗಿದೆ. ಮಧುಮೇಹದ ಬಹುತೇಕ ಸಮಸ್ಯೆಗಳು ಆಂತರಿಕವಾಗಿ ಪ್ರಗತಿ ಹೊಂದುವಂಥವಾಗಿದ್ದು, ಯಾವುದೇ ಚಿಹ್ನೆಗಳನ್ನು ತೋರ್ಪಡಿಸದೆ ಇರುವುದರಿಂದ ಅವುಗಳನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆ ಒದಗಿಸುವುದಕ್ಕಾಗಿ ನಿಗದಿತ ಅವಧಿಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು. ಮಧುಮೇಹವು ಒಂದು ದೀರ್ಘ‌ಕಾಲಿಕ ಆರೋಗ್ಯ ಸಮಸ್ಯೆಯಾಗಿದ್ದು, ಮಧುಮೇಹದ ವಿವಿಧ ಅಂಶಗಳು ಮತ್ತು ವಿಚಾರಗಳ ಬಗ್ಗೆ ಮಧುಮೇಹ ಪೀಡಿತರಿಗೆ ಅರಿವು ಹಾಗೂ ಮಾಹಿತಿಯನ್ನು ಒದಗಿಸಬೇಕು. ಅಲ್ಲದೆ ಸ್ವಯಂ ನಿರ್ವಹಣೆಯ ನಿಟ್ಟಿನಲ್ಲಿ ಆರೋಗ್ಯ ಸೇವಾ ಪೂರೈಕೆದಾರರ ಜತೆಗೆ ಚಿಕಿತ್ಸೆಯ ಯೋಜನೆಯಲ್ಲಿ ಅವರನ್ನು ಸೇರಿಸಿಕೊಳ್ಳಬೇಕು. 

ಟೈಪ್‌ 2 ಮಧುಮೇಹವು ಅತ್ಯಂತ ಕಳವಳಕಾರಿ ವೇಗದಲ್ಲಿ ವೃದ್ಧಿಸುತ್ತಿರುವುದಕ್ಕೆ ಪ್ರಧಾನ ಕಾರಣ ಪ್ರಸ್ತುತ ಜೀವನಶೈಲಿಯೇ ಆಗಿದೆ. ಆರೋಗ್ಯಯುತ ಆಹಾರ ಶೈಲಿ, ಸಮರ್ಪಕ ವ್ಯಾಯಾಮಗಳನ್ನು ಎಳೆಯ ವಯಸ್ಸು ಮತ್ತು ಹದಿಹರೆಯದಲ್ಲಿ ರೂಢಿಸಿಕೊಳ್ಳುವುದು ಮಧುಮೇಹವೆಂಬ ಜಾಗತಿಕ ಆರೋಗ್ಯ ಸಮಸ್ಯೆಯನ್ನು ನಿಯಂತ್ರಿಸಲು ಅತ್ಯಂತ ಮುಖ್ಯವಾಗಿದೆ. ರಕ್ತದಲ್ಲಿ ಗುÉಕೋಸ್‌ ಅಂಶದ ಮೇಲೆ ಆದಷ್ಟು ಬೇಗನೆ ಪರಿಣಾಮಕಾರಿಯಾಗಿ ನಿಯಂತ್ರಣ ಸಾಧಿಸುವುದು ಮಧುಮೇಹದ ಪ್ರಗತಿ ಹಾಗೂ ಸಂಕೀರ್ಣ ಸಮಸ್ಯೆಗಳ ತೀವ್ರತೆಯನ್ನು ಹದ್ದುಬಸ್ತಿನಲ್ಲಿ ಇರಿಸಲು ಸಹಾಯ ಮಾಡುತ್ತದೆ. ಮಧುಮೇಹದ ವಿರುದ್ಧ ಈ ಕ್ಷಣದಿಂದಲೇ ಸಕ್ರಿಯರಾಗೋಣ.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.