ಎಚ್.ಡಿ.ರೇವಣ್ಣ ವಿರುದ್ಧ ಪರಂ ಬೇಸರ
Team Udayavani, Oct 14, 2018, 6:30 AM IST
ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಅನುಪಸ್ಥಿತಿಯಲ್ಲಿ ಎಚ್.ಡಿ.ರೇವಣ್ಣ ಅವರು ತುಮಕೂರು ಜಿಲ್ಲಾ ಕೆಡಿಪಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ತಮ್ಮ ಗಮನಕ್ಕೆ ತಾರದೆ ಹಾಗೂ ತಮ್ಮ ಗೈರು ಹಾಜರಿಯಲ್ಲಿ ಕೆಡಿಪಿ ಸಭೆ ನಡೆಸಿರುವುದಕ್ಕೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ,ಅಸಮಾಧಾನ ಕಡಿಮೆ ಮಾಡಲು ಸ್ವತಃ ರೇವಣ್ಣ ಅವರು ಪರಮೇಶ್ವರ್ಗೆ ದೂರವಾಣಿ ಮೂಲಕ ಕರೆ ಮಾಡಿದರೂ
ಪರಮೇಶ್ವರ್ ಪ್ರತಿಕ್ರಿಯೆ ನೀಡಿಲ್ಲ . ಹೀಗಾಗಿ, ರೇವಣ್ಣ ಅವರು ಪರಮೇಶ್ವರ್ ನೇತೃತ್ವದಲ್ಲಿ ಮುಂದಿನ ವಾರ ಮತ್ತೂಂದು ಕೆಡಿಪಿ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.