ಹುಡ್ಕೋ ಅಧಿಕಾರಿಗಳ ನೀರಿಳಿಸಿದ ನಡಹಳ್ಳಿ


Team Udayavani, Oct 14, 2018, 2:36 PM IST

vij-2.jpg

ತಾಳಿಕೋಟೆ: ಮನೆಗಳನ್ನು ಮಾರಾಟ ಮಾಡಬೇಕಾದರೆ ಅದಕ್ಕೂ ಮೊದಲು ಲೇಔಟ್‌ನಲ್ಲಿ ಸಾರ್ವಜನಿಕ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಅದ್ಯಾವುದನ್ನು ಮಾಡದೇ ಮನೆಗಳನ್ನು ಹಂಚಿಕೆ ಮಾಡಿದ್ದೀರಿ ಎಂದು ಹುಡ್ಕೋ ಅಧಿಕಾರಿಗಳಿಗೆ ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ತರಾಟೆಗೆ ತೆಗೆದುಕೊಂಡರು.

ಪಟ್ಟಣದ ಹುಡ್ಕೋ ನಿವಾಸಿಗಳ ಮನವಿ ಮೇರೆಗೆ ಪ್ರವಾಸಿ ಮಂದಿರದಲ್ಲಿ ಕರೆಯಲಾದ ಹುಡ್ಕೋ ಅಧಿಕಾರಿಗಳ ಹಾಗೂ ಪುರಸಭೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಮನೆಗಳನ್ನು ಕಟ್ಟಿಸಿ ಅಲ್ಲಿ ನಿವಾಸಿಗಳಿಂದ ಸಂಪೂರ್ಣ ಹಣ ತುಂಬಿಸಿಕೊಂಡಿದ್ದೀರಿ. ಅಲ್ಲಿ ಜನರಿಗೆ ನೀಡಬೇಕಾದ ಯಾವ ಮೂಲ ಸೌಲಭ್ಯವೂ ಸಮರ್ಪಕವಾಗಿ ನೀಡಿಲ್ಲ. ಕನಿಷ್ಠ ಪಕ್ಷ ಕುಡಿಯುವ ನೀರಿನ ಪೈಪ್‌ಲೈನ್‌, ಬೀದಿ ದೀಪ, ಚರಂಡಿಗಳನ್ನಾದರೂ ಸರಿಯಾಗಿ ಒದಗಿಸಿದ್ದರೆ ಪುರಸಭೆಯವರು ಹಸ್ತಾಂತರ ಮಾಡಿಕೊಳ್ಳಲು ಒಪ್ಪುತ್ತಿದ್ದರು.

ಆದರೆ ಹಸ್ತಾಂತರಕ್ಕೂ ಮುಂಚೆ ಪುರಸಭೆಗೆ ಕಟ್ಟಬೇಕಾದ ಹಣವನ್ನಾದರೂ ಕಟ್ಟಿದ್ದರೆ ಹಸ್ತಾಂತರ ಪಡೆಯುತ್ತಿದ್ದರು. ಅದ್ಯಾವುದನ್ನು ಮಾಡದೇ ಪುರಸಭೆ ಅಧಿಕಾರಿಗಳ ಮೇಲೆ ಗೂಬೆ ಕೂರಿಸುತ್ತ ಸಾಗಿರುವುದು ದಾಖಲಾತಿಗಳಿಂದಲೇ ಸ್ಪಷ್ಟವಾಗಿದೆ. ಇಲ್ಲಿ ನಿವಾಸಿಗಳು ಸುಮಾರು 7 ವರ್ಷದಿಂದ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ ಎಂದು ಶಾಸಕ ನಡಹಳ್ಳಿ ಅವರು ಹುಡ್ಕೋ ಕಾರ್ಯಪಾಲಕ ಅಭಿಯಂತರ ಕೆ.ಎಲ್‌. ಕುಲಕರ್ಣಿ, ಎಇಇ ದಯಾನಂದ ಮಳಶೇಖರ
ಅವರನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಹುಡ್ಕೋ ನಿವಾಸಿಗಳು ಮಾತನಾಡಿ, ಪುರಸಭೆಯವರು ನೀರು ಕೊಡಲು ಮುಂದಾದರೂ ಅಲ್ಲಿ ನಿರ್ಮಿಸಿದ ಸಿಂಪಿನೊಳಗೆ ನೀರು ನಿಲ್ಲುತ್ತಿಲ್ಲ. ನೇರವಾಗಿ ಪೈಪ್‌ಲೈನ್‌ ಮೂಲಕ ನೀರು ಕೊಡಲು ಹೋದರೆ ಎಲ್ಲ ನೀರು ಸೋರಿಕೆಯಾಗುತ್ತಿದೆ. ಹುಡ್ಕೋ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಅಲ್ಲಿ ಜನರು ಇದ್ದ ಮನೆ ಬಿಟ್ಟು ಮತ್ತೂಂದೆಡೆ ಬಾಡಿಗೆ ಮನೆ ನೋಡಿಕೊಳ್ಳುತ್ತ ಸಾಗಿದ್ದಾರೆ. ಮೊದಲು ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಲು ಸೂಚಿಸಿ ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ನೀರು ಸರಬರಾಜು ಒಳಚರಂಡಿ ಮಂಡಳಿ ಅಧಿಕಾರಿ ಪಟ್ಟಣಶೆಟ್ಟಿ ಮಾತನಾಡಿ, ಈಗಾಗಲೇ ಹುಡ್ಕೋ ಅಧಿಕಾರಿಗಳು ಕಟ್ಟಿದ ದುಡ್ಡಿನಂತೆ ಪೈಪ್‌ಲೈನ್‌ ಕಾರ್ಯಗಳನ್ನು ಮಾಡಿದ್ದೇವೆ. ನೀರು ಸರಬರಾಜು, ಮೇಂಟೆನೆನ್ಸ್‌ ಇಲ್ಲದ್ದಕ್ಕೆ ಎಲ್ಲಾದರೂ ಒಂದೆರಡೂ ಕಡೆ ಕೂಡಿಸಿದ ವಾಲ್‌ಗ‌ಳು ಜಾಮ್‌ ಆಗಿರಬಹುದು ಎಂದರು. ಆಗ ಶಾಸಕ ನಡಹಳ್ಳಿ ಮಾತನಾಡಿ, ನಿಯಮ ಮೀರಿ ಹುಡ್ಕೊà ತನ್ನದಲ್ಲದ ಟೆಂಡರ್‌ ಕರೆಯುವ ಕೆಲಸ ಮಾಡಿದ್ದು ತಪ್ಪು ಎಂದು ತರಾಟೆಗೆ ತೆಗೆದುಕೊಂಡರು.

ಪುರಸಭೆ ಮುಖ್ಯಾಧಿಕಾರಿ ಎ.ಬಿ. ಕಲಾಲ್‌, ಗೃಹ ಮಂಡಳಿ ಗುಲಬರ್ಗಾದ ಕಾರ್ಯಪಾಲಕ ಅಭಿಯಂತರ ಕೆ.ಎಲ್‌. ಕುಲಕರ್ಣಿ, ಎಇಇ ದಯಾನಂದ ಮಳಶೇಖರ, ಪುರಸಭೆ ನೀರು ಸರಬರಾಜು ವಿಭಾಗದ ಶಂಕರಗೌಡ ಬಿರಾದಾರ,
ಮುಖಂಡರಾದ ವಾಸು ಹೆಬಸೂರ, ರಾಜುಗೌಡ ಗುಂಡಕನಾಳ, ಪುರಸಭಾ ಸದಸ್ಯರುಗಳಾದ ಅಣ್ಣಾಜಿ ಜಗತಾಪ, ಪ್ರಕಾಶ ಹಜೇರಿ, ಮಾನಸಿಂಗ್‌ ಕೊಕಟನೂರ, ಕಾಶೀನಾಥ ಮುರಾಳ, ನಾಗಭೂಷಣ ಸೋಂಡೂರ, ಹುಡ್ಕೋ ನಿವಾಸಿಗಳು ಮೊದಲಾದವರು ಇದ್ದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.