ಸೇನೆ ಸೇರುವ ತವಕದಲ್ಲಿ ಸಂತ್ರಸ್ತ ಯುವಕರು


Team Udayavani, Oct 15, 2018, 7:43 AM IST

d-11.jpg

ಮಡಿಕೇರಿ: ವೀರರ ನಾಡು, ಕ್ರೀಡಾಕಲಿಗಳ ಬೀಡು ಎಂಬುದು ಕೊಡಗಿನ ಪ್ರಖ್ಯಾತಿ. ಸೇನೆ ಹಾಗೂ ಕ್ರೀಡಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಈ ಪುಟ್ಟ ಜಿಲ್ಲೆ, ಈಗ ಮಹಾಮಳೆಯಿಂದ ಬೆಟ್ಟದಷ್ಟು ಸಂಕಷ್ಟ ಹೊದ್ದುಕೊಂಡಿದೆ. ಆದರೆ, ಸಂತ್ರಸ್ತ ಯುವ ಸಮೂಹ ಈ ಕಹಿಯನ್ನು ಮೆಟ್ಟಿ ನಿಂತು ದೇಶ ಕಾಯುವ ಯೋಧರಾಗಲು ಸಜ್ಜಾಗುತ್ತಿದೆ.  ಸುಮಾರು ಏಳು ಗ್ರಾ.ಪಂ ವ್ಯಾಪ್ತಿಯ 40ರಷ್ಟು ಗ್ರಾಮಗಳ ಸಾವಿರಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. ಈ ಕುಟುಂಬಗಳ ಯುವ ಸದಸ್ಯರಿಗೆ ಈಗ ಉದ್ಯೋಗದ ಅನಿವಾರ್ಯತೆ
ಎದುರಾಗಿದೆ.

ಕೂಲಿಯಲ್ಲ, ದೇಶಸೇವೆ: ಮಹಾಮಳೆಯಿಂದ ಎಲ್ಲವನ್ನೂ ಕಳೆದುಕೊಂಡು ಕೂಲಿ ಕೆಲಸಕ್ಕೆ ಹೋಗಬೇಕಾದ ಅನಿವಾರ್ಯತೆ ಈ ಯುವಕರದು. ಆದರೆ, ಇಂದಿನ ಪರಿಸ್ಥಿತಿಯಲ್ಲಿ ಕೂಲಿ ಕೆಲಸವೂ ಮರೀಚಿಕೆ. ಇಂಥ ಹೊತ್ತಿನಲ್ಲೇ ಕೊಡವ ಸಮಾಜದ ಪ್ರಮುಖರು ಹಾಗೂ ನಿವೃತ್ತ ಸೇನಾಧಿಕಾರಿಗಳು ದೇಶ ಕಾಯುವ ಗೌರವಯುತ ವೃತ್ತಿಯನ್ನು ಆರಿಸಿಕೊಳ್ಳುವಂತೆ ಇವರನ್ನು ಪ್ರೇರೇಪಿಸಿದ್ದಾರೆ.
ಮಾನಸಿಕವಾಗಿ ಕುಸಿದಿದ್ದರೂ ದೈಹಿಕವಾಗಿ ಸದೃಢರಾಗಿರುವ ಈ ಯುವಕರನ್ನು ನಿವೃತ್ತ ಸೇನಾಧಿಕಾರಿಗಳು ಕೊಡವ ಸಮಾಜದ ಸಹಕಾರದೊಂದಿಗೆ ಸೇನಾ ನೇಮಕಾತಿ ರ್ಯಾಲಿಗೆ ಸಜ್ಜುಗೊಳಿಸಿದ್ದಾರೆ. ಅ.13ರಿಂದ ಮಂಡ್ಯದಲ್ಲಿ ಆರಂಭಗೊಂಡಿರುವ ಆಯ್ಕೆ ರ್ಯಾಲಿಯಲ್ಲಿ ಸಂತ್ರಸ್ತ ಕುಟುಂಬಗಳ 50ಕ್ಕೂ ಹೆಚ್ಚು ಯುವಕರು ಭಾಗವಹಿಸಿದ್ದಾರೆ.

ಸೇನಾ ಮಾರ್ಗದರ್ಶನ, ಸಲಹೆ: ಸೇನಾಧಿಕಾರಿಗಳಾದ ಕ| ಬೆಳ್ಳಿಯಪ್ಪ, ಗಜಾನನ, ನಾಯಕ್‌ ವೀರೇಶ್‌ ಮತ್ತು ನಿವೃತ್ತ
ಸೇನಾಧಿಕಾರಿಗಳಾದ ಮೇ| ನಂದಾ ನಂಜಪ್ಪ, ಕ| ಮುತ್ತಣ್ಣ ಮತ್ತಿತರರು ಈ ಯುವಕರಿಗೆ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದಾರೆ. ಲಿಖಿತ ಮತ್ತು ದೈಹಿಕ ಸಾಮರ್ಥ್ಯದ ಪರೀಕ್ಷೆ ಎದುರಿಸುವ ಕುರಿತು ಸಲಹೆ ನೀಡಿದ್ದಾರೆ. ಈ ಪೂರ್ವಭಾವಿ ತರಬೇತಿ ವೇಳೆ ಶಿಬಿರಾರ್ಥಿಗಳಿಗೆ ಮಡಿಕೇರಿ ಕೊಡವ ಸಮಾಜ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಿತ್ತು. ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್‌ .ದೇವಯ್ಯ, ಪದಾಧಿಕಾರಿಗಳಾದ ಕಾಳೇಂಗಡ ಮುತ್ತಪ್ಪ, ಪುಟ್ಟಿಚಂಡ ಡಾನ್‌, ಮಾದೇಟಿರ ಬೆಳ್ಳಪ್ಪ ಅವರು ಸಂತ್ರಸ್ತ ಯುವಕರನ್ನು ಸೇನೆಗೆ ಸೇರ್ಪಡೆಗೊಳಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.

ಸಂತ್ರಸ್ತ ಯುವಕರಿಗೆ ತರಬೇತಿ ನೀಡಿದ್ದೇವೆ. ದೇಶ ಸೇವೆಗೆ ಸೇನೆ ಉತ್ತಮ ವೇದಿಕೆ, ಇದರಿಂದ ಉದ್ಯೋಗವೂ ದೊರೆತಂತಾ ಗುತ್ತದೆ. ನೌಕಾದಳ ಮತ್ತು ವಾಯುಪಡೆ ಭರ್ತಿಗೂ ತರಬೇತಿ ನೀಡುವ ಚಿಂತನೆಯಿದ್ದು, ಮುಂದಿನ ದಿನಗಳಲ್ಲಿ ಇದು ನಡೆಯಲಿದೆ.
● ಮುತ್ತಣ್ಣ ನಿವೃತ್ತ ಕರ್ನಲ್

ಪ್ರಾಕೃತಿಕ ದುರಂತದಿಂದ ಗ್ರಾಮೀಣ ಕುಟುಂಬಗಳಿಗೆ ಹಲವು ಸಂಕಷ್ಟಗಳು ಎದುರಾಗಿವೆ. ಇಂಥ ಪರಿಸ್ಥಿತಿಯಲ್ಲಿ ಯುವಕರು ಸೇನೆಗೆ ಸೇರ್ಪಡೆಗೊಂಡು ಬದುಕು ಕಟ್ಟಿಕೊಳ್ಳಲು ನೆರವಾಗುವ ದೃಷ್ಟಿಯಿಂದ ಕೊಡವ ಸಮಾಜ ಈ ಚಿಂತನೆ ನಡೆಸಿದೆ.
● ಕೆ ಎಸ್ ದೇವಯ್ಯ. ಕೊಡವ ಸಮಾಜದ ಅಧ್ಯಕ್ಷ

ಎಸ್ ಕೆ ಲಕ್ಷ್ಮೀಶ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.