ನಟ ರಿಷಿ ವಿರುದ್ಧ ಚಿಕ್ಕಮ್ಮನಿಂದಲೇ ದೂರು
Team Udayavani, Oct 15, 2018, 12:43 PM IST
ಬೆಂಗಳೂರು: ಚಿಕ್ಕಮ್ಮನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ “ಆಪರೇಷನ್ ಅಲಮೇಲಮ್ಮ’ ಚಿತ್ರದ ನಾಯಕ ನಟ ರಿಷಿ ವಿರುದ್ಧ ಬಸವೇಶ್ವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್ಸಿಆರ್) ದಾಖಲಿಸಿದ್ದಾರೆ.
ನಟ ರಿಷಿ, ಅವರ ತಂದೆ ನಾಗರಾಜ್, ತಾಯಿ ಅನಲಾ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಟನ ಚಿಕ್ಕಮ್ಮ ಶಾಲಿನಿ ಗೋಪಿನಾಥ್ ದೂರು ನೀಡಿದ್ದಾರೆ. ರಿಷಿ, ಬಸವೇಶ್ವರನಗರದಲ್ಲಿರುವ ತಮ್ಮ ತಾತನ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದಾರೆ. ಅ.10ರಂದು ದೂರುದಾರರಾದ ಶಾಲಿನಿ ಗೋಪಿನಾಥ್ ಪಾರ್ಶ್ವವಾಯುವಿನಿಂದ ಬಳಲುತ್ತಿರುವ ತಮ್ಮ ತಂದೆಯನ್ನು ನೋಡೆಲೆಂದು ಮನೆಗೆ ಬಂದಿದ್ದರು.
ಆ ಸಂದರ್ಭದಲ್ಲಿ ಚಿಕ್ಕಮ್ಮನನ್ನು ಮನೆ ಒಳಗೆ ಬಿಡದ ರಿಷಿ ಮತ್ತು ಅವರ ಪೋಷಕರು, ಆಸ್ತಿ ವಿಚಾರವಾಗಿ ಜಗಳ ಮಾಡಿದ್ದಾರೆ. ಖಾಲಿ ಪೇಪರ್ಗಳ ಮೇಲೆ ಸಹಿ ಹಾಕಿ ಈ ಆಸ್ತಿಯನ್ನು ತಮ್ಮ ಹೆಸರಿಗೆ ಬರೆದುಕೊಟ್ಟರೆ ಮಾತ್ರ ಮನೆ ಒಳಗೆ ಪ್ರವೇಶ ನೀಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರಿಷಿ ತಮ್ಮ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು, ಇದರಿಂದ ಆತಂಕಗೊಂಡು ನಾನು ಜೋರಾಗಿ ಕೂಗಿಕೊಂಡಾಗ ರಿಷಿ ತಾಯಿ ಅನಲಾ ನನ್ನ ಬಾಯಿಗೆ ಬಟ್ಟೆ ತುರುಕಿದ್ದಾರೆ. ಆ ವೇಳೆ ರಿಷಿ ಮಾರಕಾಸ್ತ್ರ ತೋರಿಸಿ ಹೆದರಿಸಿ ಖಾಲಿ ಪೇಪರ್ಗೆ ಸಹಿ ಮಾಡುವಂತೆ ಒತ್ತಾಯಿಸಿದಲ್ಲದೆ, ಪ್ರಾಣಬೆದರಿಕೆ ಹಾಕಿದ್ದರು ಎಂದು ಶಾಲಿನಿ ದೂರಿನಲ್ಲಿ ಉಲ್ಲೇಖೀಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಟ ರಿಷಿ, ಪುನಿತ್ ರಾಜ್ಕುಮಾರ್ ನಿರ್ಮಿಸುತ್ತಿರುವ “ಕವಲುದಾರಿ’ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ತಮಿಳು ನಟ ಧನುಷ್ ನಿರ್ಮಾಣದ ಸಿನಿಮಾದಲೂ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ