ತೈಲ ದರ ಇಳಿಯಲಿ


Team Udayavani, Oct 16, 2018, 6:00 AM IST

z-30.jpg

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ದರ ಏರುತ್ತಲೇ ಇದ್ದು, ಇದರ ಜತೆಗೆ ಅಮೆರಿಕದ ಡಾಲರ್‌ ಮೌಲ್ಯವೂ ಏರಿಕೆಯಾಗುತ್ತಿರುವುದು ಭಾರತದಲ್ಲಿನ ಪೆಟ್ರೋಲ್‌, ಡೀಸೆಲ್‌ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ದರ ಏರಿಕೆಗೆ ಕಾರಣವಾಗಿದೆ. 10 ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಮೇಲೆ 2.50 ರೂ.ನಷ್ಟು ದರ ಇಳಿಕೆ ಮಾಡಿದ್ದರೂ, ಮತ್ತೆ ದರ ಏರಿದ ಹಿನ್ನೆಲೆಯಲ್ಲಿ ಗ್ರಾಹಕ ಜೇಬಿಗೆ ಹೊರೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿದದ್ದಕ್ಕಿಂತ ಏರಿಕೆಯಾಗಿದ್ದೇ ಹೆಚ್ಚು. 

ತೈಲ ದರ ಹೆಚ್ಚಳದಿಂದಾಗಿ ಹಣದುಬ್ಬರವೂ ಏರಿಕೆಯಾಗಿದ್ದು, ಗ್ರಾಹಕ ಮತ್ತಷ್ಟು ಕಂಗಾಲಾಗಿದ್ದಾನೆ. ಈ ಹಿನ್ನೆಲೆಯಲ್ಲಿಯೇ ಸೋಮವಾರ ನಡೆದ ತೈಲೋತ್ಪನ್ನ ಉತ್ಪಾದನೆ ಮಾಡುವಂಥ 40 ದೇಶಗಳ ಪ್ರತಿನಿಧಿಗಳ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಮಾತುಕತೆ ನಡೆಸಿರುವುದು ಉತ್ತಮ ನಡೆ. ಅಲ್ಲದೆ ಈ ಸಂದರ್ಭದಲ್ಲಿ ಅವರು ಹೇಳಿರುವ ಮಾತುಗಳೂ ಅಷ್ಟೇ ಪ್ರಸ್ತುತವಾಗಿವೆ ಕೂಡ. ಸದ್ಯ ತೈಲ ಖರೀದಿ ವಿಚಾರದಲ್ಲಿ ಭಾರತ ಜಗತ್ತಿನಲ್ಲೇ ಮೂರನೇ ಸ್ಥಾನದಲ್ಲಿದೆ. ಉತ್ಪಾದಕ ದೇಶಗಳು, ಗ್ರಾಹಕರ ಹಿತಾಸಕ್ತಿ ಕಾಯುವುದು ಅತೀ ಮುಖ್ಯ. ಏಕೆಂದರೆ, ಗ್ರಾಹಕರು ಎಂದಿಗೂ ಉತ್ಪಾದಕರ ಪಾಲಿಗೆ ಬಂಗಾರದ ಮೊಟ್ಟೆಗಳೇ. ಹಾಗಂತ ದಿನದಿಂದ ದಿನಕ್ಕೆ ಕಚ್ಚಾ ತೈಲ ದರ ಏರಿಕೆ ಮಾಡಿಕೊಂಡು ಹೋದರೆ, ಗ್ರಾಹಕನ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದಿದ್ದಾರೆ. ಜತಗೆ ಈ ಏರಿಕೆಯಿಂದಾಗಿ ಭಾರತದಂಥ ಆರ್ಥಿಕತೆ ಹೊಂದಿರುವ ದೇಶಗಳ ಮಾರುಕಟ್ಟೆಗೂ ಹೊಡೆತ ಬೀಳುತ್ತದೆ ಎಂಬ ಅರಿವನ್ನೂ ಈ ದೇಶಗಳಿಗೆ ಮಾಡಿಸಿದ್ದಾರೆ. 

ಸೋಮವಾರದ ಸಭೆಯ ಇನ್ನೊಂದು ಪ್ರಮುಖಾಂಶವೆಂದರೆ, ಪಾವತಿ ವ್ಯವಸ್ಥೆಯನ್ನು ಪುನರ್‌ಪರಿಶೀಲನೆ ಮಾಡಬೇಕು ಎಂಬ ಭಾರತದ ಆಗ್ರಹ. ಒಂದು ಲೆಕ್ಕಾಚಾರದಲ್ಲಿ ಇದು ಉತ್ತಮವಾದದ್ದು, ಸದ್ಯ ಜಾಗತಿಕ ಆರ್ಥಿಕ ಗೊಂದಲಗಳಿಂದಾಗಿ ಅಮೆರಿಕದ ಡಾಲರ್‌ ಮೌಲ್ಯ ಹೆಚ್ಚುತ್ತಲೇ ಇದೆ. ಹೀಗಾಗಿ ಡಾಲರ್‌ನಲ್ಲೇ ವ್ಯವಹಾರ ಮಾಡುವ ಭಾರತದಂಥ ದೇಶಗಳಿಗೆ ಹೆಚ್ಚಿನ ನಷ್ಟ ಖಂಡಿತ. ಒಂದು ವೇಳೆ ಸ್ಥಳೀಯ ಕರೆನ್ಸಿ ಆಧರಿತವಾಗಿ ವ್ಯವಹಾರ ಮಾಡಿದಲ್ಲಿ ನಷ್ಟ ಕಡಿಮೆಯಾಗಬಹುದು ಎಂಬುದು ಭಾರತದ ಚಿಂತನೆ. ಈ ಹಿಂದೆಯೇ ಕೇಂದ್ರ ಸರ್ಕಾರ ತೈಲೋತ್ಪನ್ನ ದೇಶಗಳ ಮುಂದೆ ಈ ಪ್ರಸ್ತಾಪ ಇಟ್ಟಿತ್ತು. ಅಮೆರಿಕದ ದಿಗ್ಬಂಧನ ಎದುರಿಸುತ್ತಿರುವ ಇರಾನ್‌, ರಷ್ಯಾ, ವೆನೆಜುವೆಲಾ ದೇಶಗಳ ಜತೆಯಲ್ಲೂ ರೂಪಾಯಿ ಲೆಕ್ಕಾಚಾರದಲ್ಲೇ ವಹಿವಾಟು ಮಾಡುವ ಬಗ್ಗೆಯೂ ಗಂಭೀರ ಚಿಂತನೆ ನಡೆಸುತ್ತಿದೆ. ಹೀಗಾದಾಗಲೂ ತೈಲ ದರ ಇಳಿಕೆಯಾಗುವ ಸಂಭವವಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಇನ್ನು ತೈಲ ದರ ಹೆಚ್ಚಳದ ಹಿಂದೆ ಅಮೆರಿಕದ ಪಾತ್ರ ಗಣನೀಯವಾಗಿದೆ. ಸದ್ಯ ಅಮೆರಿಕ, ಪಾಶ್ಚಿಮಾತ್ಯ ದೇಶಗಳು, ಸೌದಿ ಅರೆಬಿಯಾ ವಿರುದ್ಧ ನಿಂತಿವೆ. ಟರ್ಕಿಯ ಇಸ್ತಾಂಬುಲ್‌ನಲ್ಲಿ ಅಮೆರಿಕದ ಪತ್ರಕರ್ತರೊಬ್ಬರು ಹತ್ಯೆಗೀಡಾಗಿದ್ದು, ಇದು ಈ ದೇಶಗಳ ನಡುವೆ ವೈಮನಸ್ಸು ಉಂಟಾಗಲು ಕಾರಣವಾಗಿದೆ. ಒಂದು ವೇಳೆ ಅಮೆರಿಕವಾಗಲಿ ಅಥವಾ ಪಾಶ್ಚಿಮಾತ್ಯ ದೇಶಗಳಾಗಲಿ ಸೌದಿ ಅರೆಬಿಯಾ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾದರೂ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆ ಮತ್ತು ಜಾಗತಿಕ ಆರ್ಥಿಕ ಮಾರುಕಟ್ಟೆಗೆ ಇದರ ಬಿಸಿ ತಾಗುವ ಎಲ್ಲ ಲಕ್ಷಣಗಳಿವೆ. ದಶಕಗಳ ಹಿಂದೆಯೇ ತೈಲವನ್ನು ಗುರಾಣಿಯಾಗಿ ಇಟ್ಟುಕೊಂಡು ಯುದ್ಧ ಮಾಡುವುದಿಲ್ಲ ಎಂದಿದ್ದ ಸೌದಿ ಅರೆಬಿಯಾ ಈ ನೀತಿಯಿಂದ ಹೊರಬರಬಹುದೇ ಎಂಬ ಆತಂಕವೂ ಗೋಚರಿಸಿದೆ. ಈ ಬಗ್ಗೆ ಸ್ವತಃ ಸೌದಿ ಅರೆಬಿಯಾವೇ ಎಚ್ಚರಿಕೆ ನೀಡಿದ್ದು, ಅಮೆರಿಕವೇನಾದರೂ ದಿಗ್ಬಂದನ ಹೇರಿದರೆ ಮುಂದಿನ ಪರಿಣಾಮ ಊಹಿಸಲೂ ಅಸಾಧ್ಯವಾಗುತ್ತದೆ ಎಂದಿದೆ. 

ಈ ಜಗಳದಿಂದ ನಷ್ಟವಾಗುವುದು ಭಾರತದಂಥ ಅಭಿವೃದ್ಧಿಶೀಲ ದೇಶಗಳಿಗೆ. ಸದ್ಯ ಭಾರತ ತನಗೆ ಬೇಕಾದ ಶೇ.80 ರಷ್ಟು ತೈಲವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಅಲ್ಲದೆ ಪಾವತಿಗೂ ಬಳಕೆ ಮಾಡಿಕೊಳ್ಳುತ್ತಿರುವುದು ಅಮೆರಿಕದ ಡಾಲರ್‌. ಮೊದಲೇ ಡಾಲರ್‌ ಮೌಲ್ಯ ಹೆಚ್ಚಿ ತೈಲ ಆಮದಿನಲ್ಲಿ ನಷ್ಟ ಅನುಭವಿಸುತ್ತಿರುವ ಭಾರತಕ್ಕೆ ಈ ಬೆಳವಣಿಗೆ ದೊಡ್ಡ ಶಾಕ್‌ ನೀಡುವ ಸಂಭವವೇ ಇದೆ. ಈ ಎಲ್ಲ ಅಡೆತಡೆಗಳನ್ನು ದಾಟಿ ಭಾರತದ ರೂಪಾಯಿಯ ಮೌಲ್ಯವೂ ಸ್ಥಿರವಾಗಿ, ತೈಲ ದರ ಇಳಿಯಲು ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಜಾಣ ನಡೆ ಇಡುವ ಅಗತ್ಯತೆಯೂ ಇದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.