ಸುಬ್ರಹ್ಮಣ್ಯ ಶ್ರೀಗಳ ಉಪವಾಸ ಅಂತ್ಯ


Team Udayavani, Oct 16, 2018, 10:40 AM IST

15sub1a.jpg

ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ 60 ತಾಸುಗಳ ಬಳಿಕ ಸೋಮವಾರ ಉಪವಾಸ ಅಂತ್ಯಗೊಳಿಸಿದ್ದಾರೆ.

ಶ್ರೀ ನರಸಿಂಹ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಎಳನೀರು ಸೇವನೆ ಮೂಲಕ ಉಪವಾಸ ಕೊನೆಗೊಳಿಸಿದರು. ಉಡುಪಿಯ ಪೇಜಾವರ ಶ್ರೀಗಳು, ಸುತ್ತೂರು ಶ್ರೀಗಳು, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಎಚ್‌.ಡಿ. ರೇವಣ್ಣ ದೂರವಾಣಿ ಕರೆ ಮಾಡಿ ದ್ದಲ್ಲದೇ, ಜಿಲ್ಲಾಡಳಿತ ಕೂಡ ಉಪವಾಸ ಕೈಬಿಡಲು ಕೋರಿತ್ತು. ಮಠದ ಪರಿವಾರವಲ್ಲದೇ, ಅನೇಕ ಮಂದಿ ಭಕ್ತರೂ ನನ್ನೊಂದಿಗೆ ಉಪವಾಸ ಮಾಡುವುದಾಗಿ ಹೇಳಿದ್ದರು. ನವರಾತ್ರಿಯ ಸಂದರ್ಭ ಯಾರಿಗೂ ನನ್ನಿಂದ ತೊಂದರೆಯಾಗಬಾರದು ಎಂದು ಉಪವಾಸ ಅಂತ್ಯಗೊಳಿಸಲು ನಿರ್ಧರಿಸಿದ್ದೇನೆ ಎಂದು ಶ್ರೀಗಳು ಹೇಳಿದರು.

ಪೇಜಾವರ ಶ್ರೀಗಳು ನವರಾತ್ರಿ ಬಳಿಕ ಆಗಮಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದಾಗಿ ತಿಳಿಸಿದ್ದಾರೆ. ಸರಕಾರ ಹಾಗೂ ಹಲವು ರಾಜಕೀಯ ಮುಖಂಡರಿಂದಲೂ ಪರಿಹಾರ ಸಿಗುವ ಆಶ್ವಾಸನೆ ದೊರಕಿದೆ ಎಂದರು.

ಆಡಳಿತ ಮಂಡಳಿ ವಿರುದ್ಧವಲ್ಲ
ದೇಗುಲದ ಆಡಳಿತ ಮಂಡಳಿಯ ಎಲ್ಲ ಸದಸ್ಯರು ಮಠದ ವಿರುದ್ಧ ಆಪಾದನೆಯಲ್ಲಿ ತೊಡಗಿಲ್ಲ. ಕೆಲವೇ
ಮಂದಿ ಹೊರಗಿನವರ ಜತೆ ಸೇರಿಕೊಂಡಿದ್ದಾರೆ. ಮಠದ ಹೆಸರಿನಲ್ಲಿ ಕೆಲವರು ನೀಡುವ ವೈಯಕ್ತಿಕ ಹೇಳಿಕೆಗಳಿಗೂ ಮಠಕ್ಕೂ ಸಂಬಂಧ‌ವಿಲ್ಲ ಎಂದರಲ್ಲದೇ,  ಸರ್ಪಸಂಸ್ಕಾರ, ಆಶ್ಲೇಷಾ ಬಲಿ, ನಾಗಪ್ರತಿಷ್ಠೆ ಸೇವೆಗಳನ್ನು ವೆಬ್‌ಸೈಟ್‌ ಮೂಲಕ ಹಾಕಿ ದೇವಸ್ಥಾನಕ್ಕೆ ಬರುವ ಭಕ್ತರನ್ನು ಸೆಳೆಯುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ನಮ್ಮ ಅಧಿಕೃತ ವೆಬ್‌ಸೈಟ್‌ ಇಲ್ಲ ಹಾಗೂ ಅದಕ್ಕಾಗಿ ಏಜೆಂಟರನ್ನೂ ನೇಮಿಸಿಕೊಂಡಿಲ್ಲ. ಭಕ್ತರು ಸ್ವಯಂಪ್ರೇರಿತರಾಗಿ ಬಂದಲ್ಲಿ ಸೇವೆಗಳನ್ನು ನಡೆಸುತ್ತಿದ್ದೇವೆ ಅಷ್ಟೇ ಎಂದು ಹೇಳಿದರು.

ದೇವಸ್ಥಾನದಿಂದ ಅಧಿಕೃತ ಮಾಹಿತಿ ಇಲ್ಲ
ನೀರು ನೀಡುವ ಕುರಿತು ದೇವಸ್ಥಾನ ದಿಂದ ಅಧಿಕೃತ ಮಾಹಿತಿ ಬಂದಿಲ್ಲ. ನೀರಿನ ಸಮಸ್ಯೆ ಪರಿಹರಿಸಲು ಗ್ರಾಮ ಪಂಚಾಯತ್‌ ಸಿದ್ಧವಿದ್ದು, ತಹಶೀಲ್ದಾರ್‌ ಸಹಿತ ಇಲಾಖೆಯ ಅಧಿಕಾರಿಗಳು ಮಠಕ್ಕೆ ಆಗಮಿಸಿ ಭರವಸೆ ನೀಡಿದ್ದಾರೆಂದು ತಿಳಿಸಿದರು. ಯಜ್ಞೆಶ್‌ ಆಚಾರ್‌, ರಾಜೇಶ್‌ ಎನ್‌.ಎಸ್‌., ಶಿವಕುಮಾರ್‌ ಕಾಮತ್‌, ಗಣೇಶಪ್ರಸಾದ್‌ ಮೊದಲಾದವರು ಉಪಸ್ಥಿತರಿದ್ದರು.

ಪೇಜಾವರ ಸ್ವಾಮೀಜಿ ಹರ್ಷ
ಉಡುಪಿ: ನಮ್ಮೆಲ್ಲರ ಮೇಲಿನ ಅಭಿಮಾನದಿಂದ ಉಪವಾಸ ಅಂತ್ಯಗೊಳಿಸಿದ ಸುಬ್ರಹ್ಮಣ್ಯ ಶ್ರೀಗಳನ್ನು ಅಭಿನಂದಿಸುವುದಾಗಿ ಪೇಜಾವರ ಶ್ರೀಗಳು ತಿಳಿಸಿದ್ದಾರೆ. ದಸರೆಯ ಅನಂತರ ಸಮಸ್ಯೆಯನ್ನು ಬಗೆಹರಿಸುವುದಾಗಿ ಆಶ್ವಾಸನೆ ನೀಡಿ ಶ್ರೀಗಳ ಉಪವಾಸ ಅಂತ್ಯಗೊಳಿಸುವಂತೆ ಮಾಡಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಯವರ ಕ್ರಮವನ್ನೂ ಅವರು ಶ್ಲಾಸಿದ್ದಾರೆ. ಸುಬ್ರಹ್ಮಣ್ಯ ಶ್ರೀಗಳಿಗೆ ಶೀಘ್ರ ನ್ಯಾಯ ಒದಗಿಸಬೇಕು ಎಂದು ಶ್ರೀ ಅದಮಾರು ಮಠಾಧೀಶರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.