ಶಾಸಕರ ಜತೆ ದೇವೇಗೌಡ, ಕುಮಾರಸ್ವಾಮಿ ಸಭೆ
Team Udayavani, Oct 17, 2018, 6:00 AM IST
ಬೆಂಗಳೂರು: ಉಪ ಚುನಾವಣೆ ಕಾರ್ಯತಂತ್ರ ಹಾಗೂ ಜವಾಬ್ದಾರಿ ಹಂಚಿಕೆ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಜೆಡಿಎಸ್ ಶಾಸಕರ ಜತೆ ಸಮಾಲೋಚನೆ ನಡೆಸಿದರು. ಕೆಆರ್ಎಸ್ ಸಮೀಪದ ರೆಸಾರ್ಟ್ನಲ್ಲಿ ನಡೆದ ಸಭೆಯಲ್ಲಿ, ರಾಮನಗರ, ಮಂಡ್ಯ, ಶಿವಮೊಗ್ಗ ಕ್ಷೇತ್ರಗಳಲ್ಲಿ ಜೆಡಿಎಸ್, ಬಳ್ಳಾರಿ ಹಾಗೂ
ಜಮಖಂಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲು ಎಲ್ಲರೂ ಒಟ್ಟುಗೂಡಿ ಕೆಲಸ ಮಾಡಬೇಕು. ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಶಾಸಕರು, ಸಚಿವರಿಗೆ ಹೊಣೆಗಾರಿಕೆ ನೀಡಲಾಗುವುದು. ಮತದಾನ ಮುಗಿಯುವವರೆಗೆ ಅಲ್ಲೇ ವಾಸ್ತವ್ಯ ಹೂಡಿ ಜಾತಿವಾರು, ಸಮುದಾಯವಾರು ಮತಗಳನ್ನು ಸೆಳೆದು ಸಮ್ಮಿಶ್ರ ಸರ್ಕಾರದ ಸಾಧನೆ ತಿಳಿಸಿ ಮತ ಪಡೆಯಬೇಕೆಂದು ಸಭೆಯಲ್ಲಿ ಎಚ್.ಡಿ.ದೇವೇಗೌಡರು ಸೂಚಿಸಿದರು ಎಂದು ಹೇಳಲಾಗಿದೆ.
ಅ.20ಕ್ಕೆ ಸಭೆ: ಈ ಮಧ್ಯೆ, ಬೆಂಗಳೂರಿನಲ್ಲಿ ಮಾತನಾಡಿದ ಎಚ್.ಡಿ.ದೇವೇಗೌಡರು, ಅ.20ರಂದು ಉಪ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಸಭೆಯಿದೆ. ಸಭೆ ಬಳಿಕ ನಾನು, ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತೇವೆ ಎಂದು ಹೇಳಿದರು. ರಾಷ್ಟ್ರೀಯ ಮಟ್ಟದಲ್ಲಿ ಇತ್ತೀಚೆಗೆ
ನಡೆಯುತ್ತಿರುವ ವಿದ್ಯಮಾನಗಳಿಂದ ಮಹಾಘಟಬಂಧನ್ ರಚನೆಗೆ ಅಡ್ಡಿಯಾಗಿಲ್ಲವೇ ಎಂಬ ಪ್ರಶ್ನೆಗೆ ಏನೂ ಆಗಿಲ್ಲ. ಪರಸ್ಪರ ದೂರ ಇದ್ದ ಜೆಡಿಎಸ್-ಕಾಂಗ್ರೆಸ್ ಇಷ್ಟು ಹತ್ತಿರ ಬಂದಿರೋದು ಮಹಾಘಟಬಂಧನ್ನ ಮೊದಲ ಹೆಜ್ಜೆ ಅಲ್ಲವೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ