ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Team Udayavani, Oct 17, 2018, 7:11 AM IST
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ಸೆ.6ಕ್ಕೆ ಹೊರಡಿಸಿದ್ದ ಪರಿಷ್ಕೃತ ಅಧಿಸೂಚನೆಯನ್ನು ಹಿಂದಕ್ಕೆ ಪಡೆದಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾದ ತಕರಾರು ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ರಾಯಚೂರು ಜಿಲ್ಲೆ ಸಿಂಧನೂರು ನಗರಸಭೆಯ ನೂತನ ಸದಸ್ಯ ಆಲಂ ಬಾಷಾ ಸೇರಿ 20 ಮಂದಿ ಸದಸ್ಯರು ಸಲ್ಲಿಸಿದ್ದ ತಕರಾರು ಅರ್ಜಿ ಜತೆಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಇತರ ಏಳು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಎಸ್. ಸುಜಾತ ಅವರಿದ್ದ ರಜಾ ಕಾಲದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿ ಉಳಿದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್
ಜಾರಿಗೊಳಿಸಿ ಆದೇಶಿಸಿತು. ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ 2018ರ ಸೆ.3ರಂದು ರಾಜ್ಯ ಸರ್ಕಾರ ಮೊದಲ ಅಧಿಸೂಚನೆ ಹೊರಡಿಸಿತ್ತು. ಬಳಿಕ ಆ ಅಧಿಸೂಚನೆಯನ್ನು ಮಾರ್ಪಾಡು ಗೊಳಿಸಿ ಸೆ.6ರಂದು ಪರಿಷ್ಕೃತ ಅಧಿಸೂಚನೆ ಹೊರಡಿಸಲಾಗಿತ್ತು. ಅದನ್ನು ಕೆಲವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪರಿಷ್ಕೃತ
ಅಧಿಸೂಚನೆ ವಾಪಸ್ ಪಡೆದು ಅ.9ರಂದು ಅಧಿಸೂಚನೆ ಹೊರಡಿಸಿತ್ತು. ಇದೀಗ ಸೆ.6ರ ಪರಿಷ್ಕೃತ ಅಧಿಸೂಚನೆಯನ್ನು ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲು ನಿಗದಿಪಡಿಸಿ ಸೆ.3ರಂದು ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಕೆಲವೊಂದು ಲೋಪಗಳು ಇದ್ದ ಕಾರಣಕ್ಕೆ ಸರ್ಕಾರ ಅದನ್ನು ವಾಪಸ್ ಪಡೆದು ಸೆ.6ಕ್ಕೆ ಪರಿಷ್ಕೃತ ಅಧಿಸೂಚನೆ ಹೊರಡಿಸಿತು. ಆದರೆ, ಈಗ ಪರಿಷ್ಕೃತ ಅಧಿಸೂಚನೆ ವಾಪಸ್ ಪಡೆದು ಹಿಂದಿನ ಅಧಿಸೂಚನೆಯಂತೆ ಮೀಸಲು ಪಟ್ಟಿ ಮುಂದುವರಿಸಲು ಸರ್ಕಾರ ಮುಂದಾಗಿದೆ. ಹಾಗಾಗಿ, ಲೋಪವಿರುವ ಪಟ್ಟಿಯಂತೆ ನಡೆದುಕೊಳ್ಳುವ ಮೂಲಕ ಸರ್ಕಾರ ಪುನಃ ತಪ್ಪು ಮಾಡುತ್ತಿದೆ. ಅಲ್ಲದೇ ಪರಿಷ್ಕೃತ ಅಧಿಸೂಚನೆ ವಾಪಸ್ ಪಡೆದುಕೊಳ್ಳುವಾಗ ಸಂಬಂಧಪಟ್ಟ
ಬಾಧಿತರ ಆಕ್ಷೇಪಣೆಗೆ ಅವಕಾಶ ಕೊಟ್ಟಿಲ್ಲ. ಆದ್ದರಿಂದ ಸೆ.6ರ ಪರಿಷ್ಕೃತ ಅಧಿಸೂಚನೆ ವಾಪಸ್ ಪಡೆದಿರುವ ಬಗ್ಗೆ ಅ.9ರಂದು ಹೊರಡಿಸಲಾದ ಅಧಿಸೂಚನೆ ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿದಾರರ ಪರ ವಕೀಲ ಎ. ಮಹ್ಮದ್ ತಾಹಿರ್ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
MUST WATCH
ಹೊಸ ಸೇರ್ಪಡೆ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!