ವಿಷ್ಣುವರ್ಧನ್‌ ಕುರಿತ ಸಮಗ್ರ ಸಂಪುಟ


Team Udayavani, Oct 17, 2018, 12:54 PM IST

vishnuvardhan.jpg

ಬೆಂಗಳೂರು: ಬೆಳ್ಳಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕನ್ನಡದ ಮೇರುನಟ ಡಾ. ವಿಷ್ಣುವರ್ಧನ್‌ ಅವರ ಸಮಗ್ರ ಸಂಪುಟವನ್ನು ಪ್ರಕಟಿಸುವ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ಆಲೋಚನೆ ನಡೆಸಿದೆ ಎಂದು ಕಸಾಪ ಅಧ್ಯಕ್ಷ  ಡಾ.ಮನು ಬಳಿಗಾರ್‌ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಡಾ.ವಿಷ್ಣುವರ್ಧನ ಕಲಾ ದತ್ತಿ ಪ್ರಶಸ್ತಿ’ಯನ್ನು ಹಿರಿಯ ಚಿತ್ರ ನಟ ರಮೇಶ್‌ ಭಟ್‌ ಅವರಿಗೆ ಪ್ರದಾನ ಮಾಡಿ ಮಾತನಾಡಿದ ಅವರು ವಿಷ್ಣುವರ್ಧನ್‌ ಅವರ ಸಮಗ್ರ ಸಂಪುಟದ ಪ್ರಕಟಣೆಯ ಹಕ್ಕನ್ನು ಪರಿಷತ್‌ಗೆ ನೀಡಿದ್ದೇ ಆದರೆ ಪರಿಷತ್‌ ವತಿಯಿಂದಲೇ ಸಂಪುಟ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದರು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಿಷ್ಣು ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರವೇ ಆರಂಭಿಸುವಂತೆ ಪರಿಷತ್‌ ವತಿಯಿಂದ ಸರಕಾರದ ಮೇಲೆ ಒತ್ತಡ ತರಲಾಗುವುದು. ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಚಿತ್ರರಂಗದವರೇ ಆಗಿರುವುದರಿಂದ ವಿಷ್ಣು ಸ್ಮಾರಕ ನಿರ್ಮಾಣದ ಕುರಿತು ಮಾತುಕತೆ ನಡೆಸುವುದಾಗಿ ತಿಳಿಸಿದರು.

ವಿಷ್ಣವರ್ಧನ ದತ್ತಿ ಪ್ರಶಸ್ತಿಗೆ ಪಾತ್ರರಾಗಿರುವ ಹಿರಿಯ ನಟ ರಮೇಶ್‌ ಭಟ್‌, ವಿಷ್ಣು ವರ್ಧನ್‌ ಅವರ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ಉತ್ತಮ ಅಭಿನಯದ ಮೂಲಕ ನಾಡಿನ ಜನರ ಮನಸ್ಸನ್ನು ಗೆದ್ದಿದ್ದಾರೆ.ರಮೇಶ್‌ ಭಟ್‌ ಅವರಿಗೆ ತಮ್ಮ ಗೆಳೆಯನ ಹೆಸರಿನಲ್ಲಿ ಪ್ರಶಸ್ತಿ ದೊರಕಿರುವುದು ಸಂತಸವಾಗಿದೆ ಎಂದರು.

ಸಂದರ್ಭದಲ್ಲಿ ಮಾತನಾಡಿದ ಚಿತ್ರಕಲಾವಿದ ರಮೇಶ್‌ ಭಟ್‌, ನನ್ನ ಸಿನಿ ಪಯಣದಲ್ಲಿ ಹಲವಾರು ಪ್ರಶಸ್ತಿ ಹಾಗೂ ಗೌರವಗಳನ್ನು ಪಡೆದಿದ್ದೇನೆ. ಆದರೆ ವಿಷ್ಣುವರ್ಧನ್‌ ಹೆಸರಿನ ಈ ಪ್ರಶಸ್ತಿ ನನ್ನ ಮಡಿಲು ಸೇರಿರುವುದು ಮನಸ್ಸಿಗೆ ತುಂಬಾ ಖುಷಿಕೊಟ್ಟಿದೆ. ಗೌರವ ನನ್ನ ಜವಾಬ್ದಾರಿಯನ್ನೂ ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದರು.

ಡಾ. ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌ ಮಾತನಾಡಿ, “ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣ ಕಾರ್ಯ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕಸಾಪ ಧನಿ ಎತ್ತಬೇಕು. ವಿಷ್ಣು ಸ್ಮಾರಕ ನಿರ್ಮಾಣ ಕಾರ್ಯ ಸರಕಾರದಿಂದ ಆಗದಿದ್ದಾರೆ ಡಾ. ವಿಷ್ಣು ಸೇನಾ ಸಮಿತಿ ವತಿಯಿಂದಲೇ ನಿರ್ಮಿಸುತ್ತೇವೆ. ಅದಕ್ಕಾದರೂ ಸರಕಾರ ಅನುಮತಿ ನೀಡಬೇಕು ಎಂದರು.

ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌, ಕಸಪಾ ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ, ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಟೀ ಅಂಗಡಿಯಿಂದ ಚಿತ್ರರಂಗಕ್ಕೆ: ದೀರ್ಘ‌ವಾದ ಪರಂಪರೆಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನನ್ನ ಬಾಲ್ಯದ ಬಹುತೇಕ ಸಮಯ ಕಳೆದಿದ್ದೇನೆ. 60ವರ್ಷದ ಹಿಂದೆ  ಪರಿಷತ್ತು ಹಿಂದಿರುವ ಮಾಡಲ್‌ ಹೈಸ್ಕೂಲ್‌ನಲ್ಲಿ ಓದುತ್ತಿದ್ದ ನಾನು ನಾಟಕ, ಆಟ, ಗೆಳೆಯರೊಂದಿಗೆ ಹರಟೆ ಹೀಗೆ ಬಹುತೇಕ ಸಮಯವನ್ನು ಈ ಜಾಗದಲ್ಲೇ ಕಳೆದಿದ್ದೇನೆ.

ನಾಟಕದ ಗೀಳಿನಿಂದ ಅರ್ಧದಲ್ಲೇ ಓದು ಕೈಬಿಟ್ಟ ನಾನು ಗಾಂಧಿಬಜಾರ್‌ನಲ್ಲಿ ಟೀ ಅಂಗಟಿ ಇಟ್ಟುಕೊಂಡಿದ್ದ ನನ್ನನ್ನು ಚಿತ್ರರಂಗ ಈ ಮಟ್ಟಕ್ಕೆ ಬೆಳೆಸಿದೆ. ಬಾಲ್ಯದಿಂದಲೇ ವಿಷ್ಣು ಪರಿಚಯವಿತ್ತಾದರೂ, ನಿರ್ದೇಶಕ ಭಾರ್ಗವ ಅವರ ಜೀವನಚಕ್ರ ಚಿತ್ರದ ಮೂಲಕ ನನ್ನ ವಿಷ್ಣುವರ್ಧನ್‌ ಅವರೊಂದಿನ ಸಂಬಂಧ ಮತ್ತಷ್ಟು ಗಟ್ಟಿಗೊಂಡಿತು. ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Byndoor  ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Byndoor  ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.