ಕೊಲೆ ಕೇಸ್; ಸ್ವಯಂಘೋಷಿತ ದೇವಮಾನವ ರಾಮ್ ಪಾಲ್ ಗೆ ಜೀವಾವಧಿ ಶಿಕ್ಷೆ
Team Udayavani, Oct 17, 2018, 2:56 PM IST
ಹರ್ಯಾಣ: 2014ರ ಕೊಲೆ ಪ್ರಕರಣದಲ್ಲಿಯೂ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್ ಹಾಗೂ ಇತರ 13 ಮಂದಿಗೆ ಚಂಡೀಗಢ್ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಇದಕ್ಕೂ ಮೊದಲು ಕೊಲೆ ಹಾಗೂ ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೋರ್ಟ್ ಅಕ್ಟೋಬರ್ 11ರಂದು ರಾಮ್ ಪಾಲ್ ಅನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೇ ನಾಲ್ಕು ಮಹಿಳೆಯರು ಮತ್ತು ಮಗುವಿನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಕೋರ್ಟ್ ರಾಮ್ ಮತ್ತು ಇತರ 14 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಭಾರತೀಯ ದಂಡ ಸಂಹಿತೆ ಕಲಂ 302(ಕೊಲೆ), 343(ಅಕ್ರಮವಾಗಿ ಕೂಡಿಹಾಕುವುದು) ಮತ್ತು 120ಬಿ(ಒಳಸಂಚು) ಕಾಯ್ದೆಯನ್ವಯ ರಾಮ್ ಪಾಲ್ ಮತ್ತು ಸಹಚರರು ದೋಷಿ ಎಂದು ಕೋರ್ಟ್ ಆದೇಶ ನೀಡಿದೆ.
2014ರ ನವೆಂಬರ್ ನಲ್ಲಿ ಆರೋಪಿ ರಾಮ್ ಪಾಲ್ ನನ್ನು ಬಂಧಿಸುವಂತೆ ಪಂಜಾಬ್ ಹರ್ಯಾಣ ಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಈ ಸಂದರ್ಭದಲ್ಲಿ ಪೊಲೀಸರು ರಾಮ್ ಪಾಲ್ ಸಟ್ಲೋಕ್ ಅಶ್ರಮದೊಳಕ್ಕೆ ಪ್ರವೇಶಿಸಲು ಹೋದ ವೇಳೆ ರಾಮ್ ಪಾಲ್ ಅನುಯಾಯಿಗಳು ಅಡ್ಡಿಪಡಿಸಿ, ಹಿಂಸಾಚಾರ ನಡೆಸಿದ್ದರು. ಎರಡು ವಾರಗಳ ಘರ್ಷಣೆಯ ನಂತರ ಕೊನೆಗೂ ನವೆಂಬರ್ 19ರಂದು ರಾಮ್ ಪಾಲ್ ನನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ ಅಶ್ರಮದಲ್ಲಿ ಇದ್ದು ಸುಮಾರು 20 ಸಾವಿರ ಮಂದಿಯನ್ನು ಹೊರಹಾಕಿದ್ದರು.
ಘಟನೆ ನಂತರ ರಾಮ್ ಪಾಲ್ ಹಾಗೂ ಇತರರ ವಿರುದ್ಧ 6ಕ್ಕೂ ಅಧಿಕ ಎಫ್ಐಆರ್ ದಾಖಲಾಗಿತ್ತು. ಅಲ್ಲದೇ ಎರಡು ಪ್ರಕರಣಗಳಲ್ಲಿ ರಾಮ್ ಪಾಲ್ ಖುಲಾಸೆಗೊಂಡಿದ್ದು, ಇನ್ನೂ ಎರಡು ಪ್ರಕರಣಗಳು ಬಾಕಿ ಉಳಿದಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ