ಸೃಷ್ಟಿಯ ಕಣ-ಕಣದಲ್ಲೂ ಇದ್ದಾನೆ ಭಗವಂತ


Team Udayavani, Oct 18, 2018, 1:24 PM IST

bell-1.jpg

ಸಿರುಗುಪ್ಪ: ಹೂವಿನಲ್ಲಿನ ವಾಸನೆಯು ನಮ್ಮ ಮೂಗಿನ ಮೂಲಕ ಅನುಭವಕ್ಕೆ ಬರುತ್ತದೆ. ಆದರೆ ನಮಗೆ ಕಾಣುವುದಿಲ್ಲ. ಅದರಂತೆ ಬ್ರಹ್ಮಾಂಡವನ್ನು ಸೃಷ್ಟಿಸಿದವನನ್ನು ಬ್ರಹ್ಮಾಂಡದ ಪ್ರತಿಯೊಂದು ಸೃಷ್ಟಿಯ ಕಣದಲ್ಲಿಯೂ ಇದ್ದು, ನಡೆಸುತ್ತಿರುವವನು ಕೂಡ ಭಗವಂತನೆ ಆಗಿದ್ದಾನೆ ಎಂದು ಮಂತ್ರಾಲಯದ ವಿದ್ಯಾಪೀಠದ ಅಧ್ಯಾಪಕ ಶ್ರೀಉಡುಪಿ ಕ್ರಿಷ್ಣಚಾರ್‌ ಅಭಿಪ್ರಾಯಪಟ್ಟರು.

ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದ ಸಮಾರೊಪದಲ್ಲಿ ಪ್ರವಚನ ನೀಡಿದ ಅವರು, ಕಲಿಯುಗದಲ್ಲಿ ದೇವರನ್ನು ಕಂಡವರಿಲ್ಲ. ದೇವರಿದ್ದಾನೆ ಎನ್ನುವುದನ್ನು ನಂಬುವುದಾದರೂ ಹೇಗೆ ಎನ್ನುವ ಪ್ರಶ್ನೆಯನ್ನು ಹಾಕಿಕೊಂಡು ಗುರುಗಳು, ದಾಸಶ್ರೇಷ್ಠರು, ಯತಿವರ್ಯರು, ಪಂಡಿತರು, ಪಾಮರರು ಹೊರಟಿದ್ದು, ಈ ಪ್ರಶ್ನೆಯು ಎಲ್ಲರನ್ನೂ ಕಾಡುತ್ತಿದೆ ಎಂದರು.

ಆದರೆ ನಮಗೆ ಕಾಣದೇ ಅನುಭವಕ್ಕೆ ಬರುವ ಮೂಲಕ ಅವನ ಇರುವಿಕೆ ಸತ್ಯವೆಂದು ಗೋಚರವಾಗುತ್ತಿದೆ. ನಮ್ಮ ದೇಹದ ಮೇಲೆ ನಮ್ಮ ಮನಸ್ಸಿನ ಮೇಲೆ ನಮಗೆ ನಿಯಂತ್ರಣವಿಲ್ಲ. ಕಣ್ಣುಗಳಲ್ಲಿ ಸೂರ್ಯಚಂದ್ರರು, ಕಿವಿಗಳಲ್ಲಿ ವಿದ್ಯಾ ದೇವತೆಗಳು, ನಾಲಿಗೆಯಲ್ಲಿ ವರುಣಾ ದೇವರು, ಉಸಿರಾಟದಲ್ಲಿ ವಾಯುದೇವರು ಸೇರಿದಂತೆ ಮಾನವನ ಎಲ್ಲ ಅಂಗಳಲ್ಲಿಯು ದೇವತೆಗಳು ನೆಲೆಸಿದ್ದಾರೆ ಎಂದು ತಿಳಿಸಿದರು.

ಭಗವಂತನು ಅತಿ ದೊಡ್ಡವನು, ಅತಿಸೂಕ್ಷ್ಮನು, ಅತ್ಯಂತ ತೇಜೋಮಯನು ಆಗಿರುವುದರಿಂದ ನಮಗೆ ಭಗವಂತನನ್ನು ನೋಡಲು ತೇಜೋಮಯವಾದ ಕಣ್ಣುಗಳ ಅವಶ್ಯಕತೆ ಇದ್ದು, ಇವುಗಳನ್ನು ಅತ್ಯಂತ ಕಠಿಣ ಸಾಧನೆಯಿಂದ ಮಾತ್ರ ಪಡೆಯಬಹುದಾಗಿದೆ. ಆಗ ಮಾತ್ರ ಭಗವಂತನನ್ನು ಕಾಣಲು ಸಾಧ್ಯವಾಗುತ್ತದೆ. ಎಲ್ಲರಲ್ಲಿಯೂ ಅಂತರ್ಗತನಾಗಿ, ಸರ್ವವ್ಯಾಪಿಯಾಗಿ ಭಗವಂತನು ನೆಲೆಸಿದ್ದು, ಎಲ್ಲರಲ್ಲಿಯೂ ಭಗವಂತನ ಸ್ವರೂಪ ಎಂದು ಕಾಣಬೇಕು ಎಂದು ತಿಳಿಸಿದರು. ಅರ್ಯವೈಶ್ಯ ಮಂಡಳಿ ತಾಲೂಕು ಅಧ್ಯಕ್ಷ ಎಚ್‌. ಜೆ.ಹನುಮಂತಯ್ಯಶೆಟ್ಟಿ ಮತ್ತು ಪದಾಧಿಕಾರಿಗಳು, ಭಕ್ತರು ಇದ್ದರು.  

ಚಂಡಿಕಾ ಹೋಮ
ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಬುಧವಾರ ರಾಜಪುರೋಹಿತ ಶ್ರೀನಿವಾಸಚಾರ್ಯ ನೇತೃತ್ವದ ಪುರೋಹಿತರಿಂದ ಹಾಗೂ ಆರ್ಯವೈಶ್ಯ ಮಂಡಳಿ ವತಿಯಿಂದ ಚಂಡಿಕಾ ಹೋಮ ಹಾಗೂ ಪೂರ್ಣಾಹುತಿ ಕಾರ್ಯಕ್ರಮ ನಡೆಯಿತು. ಹೋಮದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ಶ್ರೀವಾಸವಿ ಮಾತೆಗೆ ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಆರ್ಯವೈಶ್ಯ ಮಂಡಳಿ ತಾಲೂಕು ಅಧ್ಯಕ್ಷ 
 ಚ್‌.ಜೆ.ಹನುಮಂತಯ್ಯಶೆಟ್ಟಿ ಮತ್ತು ಪದಾಧಿಕಾರಿಗಳು, ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.