ಹಬ್ಬದ ಖರೀದಿ ಭರಾಟೆ ಜೋರು


Team Udayavani, Oct 18, 2018, 1:39 PM IST

shiv-1.jpg

ಶಿವಮೊಗ್ಗ: ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಖರೀದಿ ಭರಾಟೆ ಬುಧವಾರ ಜೋರಾಗಿತ್ತು. ಗಾಂಧಿ ಬಜಾರ್‌ ನಿಂದ ಶಿವಪ್ಪ ನಾಯಕ ಸರ್ಕಲ್‌ವರೆಗೂ ಜನದಟ್ಟಣೆ ಹೆಚ್ಚಾಗಿದ್ದರಿಂದ ವಾಹನ ಸವಾರರು ಪರದಾಡಿದರು.

 ಅಷ್ಟೇ ಅಲ್ಲದೆ ಗೋಪಿ ಸರ್ಕಲ್‌, ಜೈಲ್‌ ಸರ್ಕಲ್‌, ಹೊಳೆ ಬಸ್‌ ಸ್ಟಾಪ್‌ ಹೀಗೆ ಹಲವು ಪ್ರಮುಖ ವೃತ್ತಗಳಲ್ಲಿ ಹೂವು, ಹಣ್ಣು, ಬಾಳೆದಿಂಡು, ಕಬ್ಬಿನ ದಿಂಡು, ಬೂದುಗುಂಬಳ ಮಾರಾಟ ಜೋರಾಗಿತ್ತು. ಬೂದುಗುಂಬಳ ಮತ್ತು ಚೆಂಡು ಹೂವು ದರ ಸಾಮಾನ್ಯ ದಿನಕ್ಕಿಂತ ಹೆಚ್ಚಾಗಿತ್ತು.
 
 ಚೆಂಡೂ ಹೂ ಕೆಜಿಗೆ 40 ರಿಂದ 50 ರೂ., ಸೇಬು 100 ರೂ., ಮೂಸಂಬಿ 40 ರಿಂದ 50ರೂ., ಸೀತಾಫಲ 60 ರೂ., ದ್ರಾಕ್ಷಿ 100 ರೂ., ಸಪೋಟ 40 ರೂ., ದಾಳಿಂಬೆ 100 ರೂ., ಸೇವಂತಿಗೆ ಮಾರಿಗೆ 50ರಿಂದ 0 ರೂ., ಮಲ್ಲಿಗೆ ಮಾರಿಗೆ 80 ರೂ., ಬೂದುಗುಂಬಳ ಸೈಜಿನ ಆಧಾರದ ಮೇಲೆ 40 ರಿಂದ 150 ರೂ.ವರೆಗೂ ಮಾರಾಟವಾದವು.

 ಬೆಳೆ ತುಸು ಹೆಚ್ಚಾದರೂ ವ್ಯಾಪಾರಕ್ಕೆ ಗರ ಬಡಿದಿದೆ ಎನ್ನುತ್ತಾರೆ ಹೂವಿನ ವ್ಯಾಪಾರಿ ಸುರೇಶ್‌. ಹಬ್ಬ ಎಂದು ಹೆಚ್ಚಾಗಿ ಹೂವು ತರಿಸಿದ್ದೇವೆ. ಸಂಜೆ ಆದರೂ ಇನ್ನೂ ಖರ್ಚಾಗಿಲ್ಲ. ಹೀಗೆ ಆದರೆ ನಮಗೆ ಲಾಸ್‌ ಆಗುತ್ತದೆ. ಗಣಪತಿ ಹಬ್ಬಕ್ಕೆ ಹೋಲಿಸಿದರೆ ದರದಲ್ಲಿ ತುಂಬಾ ಹೆಚ್ಚಾಗಿಲ್ಲ. ಆದರೂ ವ್ಯಾಪಾರವಾಗುತ್ತಿಲ್ಲ ಎನ್ನುತ್ತಾರೆ ಅವರು.

 ಹಾಸನದಿಂದ ಲಾರಿ ಮಾಡಿಕೊಂಡು ಬೂದುಗುಂಬಳ ತರಿಸಿದ್ದೇನೆ. ಲಾರಿ ಬಾಡಿಗೆಯೇ 10 ಸಾವಿರ ಆಗಿದೆ. ಇಲ್ಲಿ ಜನ ನೋಡಿದರೆ 10, 20 ರೂ.ಗೆ ಕೇಳುತ್ತಾರೆ. ಇದನ್ನು ಇಟ್ಟುಕೊಳ್ಳಲು ಬರೋದಿಲ್ಲ. ಏನು ಮಾಡೋದು ಅದಕ್ಕೆ ಹೋದಷ್ಟು ದರಕ್ಕೆ ಕೊಡುತ್ತಿದ್ದೇವೆ ಎನ್ನುತ್ತಾರೆ ವ್ಯಾಪಾರಿ ಜೋಯ. 

ದೇವಿ ದೇವಸ್ಥಾನಗಳಲ್ಲಿ ನವರಾತ್ರಿ ಅಲಂಕಾರ ಸಂಭ್ರಮ, ಸಡಗರದಿಂದ ಕೂಡಿದ್ದು ಮಹಾನವಮಿಗೆ ಭರದ ಸಿದ್ಧತೆ ನಡೆಯುತ್ತಿದೆ. ಪಾಲಿಕೆ ವತಿಯಿಂದ ನಡೆಯುತ್ತಿರುವ ದಸರಾದಲ್ಲಿ ನಗರದ ದೇವತೆಗಳಿಗೆ ಭಾಗವಹಿಸಲು ಅನುದಾನ ನೀಡಿರುವುದರಿಂದ ಎಲ್ಲ ದೇವಾಲಯಗಳು ಭಾಗವಹಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.