ಹಿರಿಯ ರಾಜಕಾರಣಿ ಎನ್.ಡೀ ತಿವಾರಿ ನಿಧನ
Team Udayavani, Oct 20, 2018, 6:00 AM IST
ನವದೆಹಲಿ: ಮೂರು ಬಾರಿ ಉತ್ತರ ಪ್ರದೇಶದ ಮುಖ್ಯ ಮಂತ್ರಿಯಾಗಿದ್ದ, ಮಾಜಿ ಸ್ವಾತಂತ್ರ ಹೋರಾಟಗಾರ, ಕಾಂಗ್ರೆಸ್ನ ಹಿರಿಯ ನಾಯಕ ನಾರಾಯಣ ದತ್ ತಿವಾರಿ (93) ಗುರುವಾರ ನಿಧನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬಹು ಅಂಗಾಂಗ ವೈಫಲ್ಯಕ್ಕೆ ತುತ್ತಾಗಿದ್ದರು. ಕಳೆದೊಂದು ವರ್ಷದಿಂದಲೂ ದೆಹಲಿಯ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೊಳಗಾಗಿದ್ದ ಅವರು ಗುರುವಾರ ಮಧ್ಯಾಹ್ನ 2:50ಕ್ಕೆ ನಿಧನರಾದರು. 1925ರ ಅ. 18ರಂದು ಜನಿಸಿದ್ದ ತಿವಾರಿ, ತಮ್ಮ 93ನೇ ಹುಟ್ಟುಹಬ್ಬದ ದಿನದಂದೇ ವಿಧಿವಶರಾಗಿದ್ದು ವಿಪರ್ಯಾಸ. ತಿವಾರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್ ಸೇರಿದಂತೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ಸಾಧನೆಗಳು, ವಿವಾದಗಳು: ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದ್ದರು. ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದಾಗ ರಾಜಭವನದ ಸೆಕ್ಸ್ ಹಗರಣದಲ್ಲಿ ಅವರು ತಲೆತಗ್ಗಿಸುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ