ಅರುಣಾಚಲದಲ್ಲಿ ಭಾರೀ ಪ್ರವಾಹ ಭೀತಿ
Team Udayavani, Oct 20, 2018, 6:00 AM IST
ಬೀಜಿಂಗ್: ಟಿಬೆಟ್ ಹಾಗೂ ಚೀನಾ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿರುವುದರಿಂದಾಗಿ ಅರುಣಾಚಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಅಷ್ಟೇ ಅಲ್ಲ, ಭೂ ಕುಸಿತದಿಂದ ಬ್ರಹ್ಮಪುತ್ರ ನದಿಯ ಉಪನದಿಯಾಗಿರುವ ಯಾರ್ಲಂಗ್ ಸಾಂಗ್ಪೋ ಹರಿವಿಗೇ ಅಡ್ಡಿ ಉಂಟಾಗಿದ್ದು, ಕೃತಕ ಸರೋವರ ನಿರ್ಮಾಣವಾಗಿದೆ. ಬುಧವಾರ ಬೆಳಗ್ಗೆಯೇ ಭೂ ಕುಸಿತ ಸಂಭವಿಸಿದ್ದು, ನದಿ ಹರಿವಿನ ಕೆಳಭಾಗದಲ್ಲಿರುವವರಲ್ಲಿ ಆತಂಕ ಸೃಷ್ಟಿ ಯಾಗಿದೆ. ಈಗಾಗಲೇ ಈ ಭಾಗದಲ್ಲಿರುವ ಸುಮಾರು 6 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಗುರುವಾರದ ವೇಳೆಗೆ ಸುಮಾರು 130 ಅಡಿ ಎತ್ತರಕ್ಕೆ ನೀರು ನಿಂತಿರುವುದಾಗಿ ಹೇಳಲಾಗಿದೆ.
ಈ ಬಗ್ಗೆ ಭಾರತಕ್ಕೆ ಕಾಲಕಾಲಕ್ಕೆ ಚೀನಾ ಮಾಹಿತಿ ನೀಡುತ್ತಿದ್ದು, ಈವರೆಗೆ ಯಾವುದೇ ಸಾವುನೋವು ಸಂಭವಿಸಿದ ವರದಿಯಾಗಿಲ್ಲ.ಅರುಣಾಚಲ ಪ್ರದೇಶದ ಈಸ್ಟ್ ಸಿಯಾಂಗ್ ಜಿಲ್ಲೆಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಸದ್ಯ ಬ್ರಹ್ಮಪುತ್ರಾ ನದಿಯಲ್ಲಿ ನೀರಿನ ಪ್ರಮಾಣ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. ಕುಸಿದ ಭಾಗವನ್ನು ಚೀನಾ ತೆರವುಗೊಳಿಸುತ್ತಿದ್ದಂತೆಯೇ ಈ ಭಾಗಕ್ಕೆ ನೀರು ಭಾರಿ ಪ್ರಮಾಣದಲ್ಲಿ ಹರಿಯುವ ಸಾಧ್ಯತೆಯಿದೆ. 2000ನೇ ಇಸ್ವಿಯಲ್ಲಿ ಇದೇ ನದಿಯಿಂದ ವ್ಯಾಪಕ ಪ್ರಮಾಣದಲ್ಲಿ ಒಂದೇ ಸಮನೆ ಹರಿದ ನೀರಿನಿಂದಾಗಿ ಅರುಣಾಚಲ ಪ್ರದೇಶದಲ್ಲಿ ಭಾರಿ ಹಾನಿ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?