ಬಳ್ಳಾರಿಯಲ್ಲಿ ಬಾಡಿಗೆ ಮನೆ ಪ್ರವೇಶಿಸಿದ ಉಗ್ರಪ್ಪ
Team Udayavani, Oct 20, 2018, 6:25 AM IST
ಬಳ್ಳಾರಿ: ಲೋಕಸಭೆ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರು ಬಳ್ಳಾರಿಯಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದು, ವಿಜಯದಶಮಿಯಂದು ಗೃಹಪ್ರವೇಶ ಮಾಡಿದ್ದಾರೆ.
ಉಗ್ರಪ್ಪ ಹೊರಗಿನವರು, ಅಡ್ರೆಸ್ ಇಲ್ಲದವರು ಎಂದು ಬಿಜೆಪಿಯವರ ಆರೋಪಕ್ಕೆ ಗುರಿಯಾಗಿದ್ದ ವಿ.ಎಸ್. ಉಗ್ರಪ್ಪ, ಮನೆ ಮಾಡಲು ನಿರ್ಧರಿಸಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಅಲ್ಲದೆ ವಿಜಯ ದಶಮಿಯಂದು ಗೃಹಪ್ರವೇಶ ಮಾಡುವ ಮೂಲಕ ಪ್ರತಿಸ್ಪರ್ಧಿ ಮತ್ತವರ ಬೆಂಬಲಿಗರ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ಇಲ್ಲಿನ ಕಪ್ಪಗಲ್ ರಸ್ತೆಯ ಸರ್.ಎಂ.ವಿಶ್ವೇಶ್ವರಯ್ಯ ನಗರದ 1ನೇ ಅಡ್ಡರಸ್ತೆಯಲ್ಲಿರುವ ಎರಡು ಅಂತಸ್ತಿನ ಮನೆಯನ್ನು ಬಾಡಿಗೆಗೆ ಪಡೆದು ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, “ನಾನು ಇನ್ಮುಂದೆ ಇಲ್ಲೇ ಇರುವೆ. ಅಡ್ರೆಸ್ ಇಲ್ಲದವರು ಎನ್ನುತ್ತಿದ್ದವರಿಗೆ ಅಡ್ರೆಸ್ ತಿಳಿಸುವ ಕಾರಣಕ್ಕೆ ಮನೆಯನ್ನು ಬಾಡಿಗೆಗೆ ಪಡೆದಿದ್ದೇನೆ. ಇನ್ಮುಂದೆ ನನಗೆ ಇಲ್ಲಿಯದೇ ಅಡ್ರೆಸ್. ಚುನಾವಣೆಯಲ್ಲಿ ಸೋತರೂ ಇಲ್ಲೇ ಇರುವೆ. ನನ್ನ ಪ್ರವಾಸ ಬಳ್ಳಾರಿಯತ್ತ ಕಡ್ಡಾಯವಾಗಿ ಇದ್ದೇ ಇರುತ್ತದೆ’ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು