ಶಿಕ್ಷಕರ ನೇಮಕಾತಿಗೆ ಮೀಸಲಾತಿ ಆದೇಶ
Team Udayavani, Oct 20, 2018, 6:35 AM IST
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಯ 6ರಿಂದ 8ನೇ ತರಗತಿಯಲ್ಲಿ ಖಾಲಿ ಇರುವ ಹತ್ತು ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೀಸಲಾತಿ ಕುರಿತು ಆದೇಶ ಹೊರಡಿಸಿದೆ.
ಇತರ ಹಿಂದುಳಿದ ವರ್ಗಗಳಿಗೆ ಗುರುತಿಸಲ್ಪಟ್ಟ, ಆದರೆ ಆಯಾ ಪ್ರವರ್ಗಗಳ ಅರ್ಹ ಅಭ್ಯರ್ಥಿಗಳ ಲಭ್ಯತೆ ಕೊರತೆಯಿಂದ ಭರ್ತಿ ಮಾಡಲಾಗದ ಸ್ಥಾನಗಳನ್ನು ಬ್ಯಾಕ್ಲಾಗ್ ಎಂದು ಪರಿಗಣಿಸಿ ಮುಂದುವರಿಸಬೇಕು. ಈ ಸ್ಥಾನಗಳನ್ನು ಮೀಸಲಾತಿಯಿಂದ ವಿಮುಕ್ತಿಗೊಳಿಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಮುಂದಿನ ನೇರ ನೇಮಕಾತಿ ಸಂದರ್ಭದಲ್ಲಿ ಹೊಸದಾಗಿ ಲಭ್ಯವಾದ ಸ್ಥಾನ ಮತ್ತು ಬ್ಯಾಕ್ಲಾಗ್ ಸ್ಥಾನಗಳ ಪಟ್ಟಿಯನ್ನು
ಪ್ರತ್ಯೇಕವಾಗಿ ಪ್ರಕಟಿಸಬೇಕು. ಹೊಸದಾಗಿ ಲಭ್ಯವಾದ ಸ್ಥಾನವನ್ನು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ವರ್ಗೀಕರಣ ಮಾಡಿ ಪ್ರಕಟಿಸಬೇಕು. ಆದರೆ, ಬ್ಯಾಕ್ಲಾಗ್ ಸ್ಥಾನಗಳನ್ನು ಮತ್ತೂಮ್ಮೆ ವರ್ಗೀಕರಣ ಮಾಡುವಂತಿಲ್ಲ. 2015ರ ಫೆ.5ರಂದು ಹೊರಡಿಸಿದ್ದ ಆದೇಶದಲ್ಲಿ ತಿಳಿಸಿರುವಂತೆ ನೇರ ನೇಮಕಾತಿಯಲ್ಲಿ ಇತರ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳ ಕೊರತೆಯಿಂದ ಭರ್ತಿ ಮಾಡದೆ ಮುಂದಕ್ಕೆ ಕೊಂಡೊಯ್ಯಲಾದ ಸ್ಥಾನಗಳಿಗೂ ಈ ಆದೇಶ ಅನ್ವಯಿಸುತ್ತದೆ ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ