ದ್ವಿತೀಯ ಟೆಸ್ಟ್‌; ಆಸ್ಟ್ರೇಲಿಯಕ್ಕೆ 373 ರನ್‌ ಸೋಲು: ಪಾಕ್‌ಗೆ ಸರಣಿ


Team Udayavani, Oct 20, 2018, 8:38 AM IST

12.jpg

ಅಬುಧಾಬಿ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಪಾಕಿಸ್ಥಾನ ತಂಡವು ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವನ್ನು 373 ರನ್ನುಗಳಿಂದ ಭರ್ಜರಿಯಾಗಿ ಸೋಲಿಸಿದೆ. ಈ ಮೂಲಕ ಎರಡು ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. 

ಅಬುಧಾಬಿಯ ಶೇಖ್‌ ಜಾಯೆದ್‌ ಕ್ರೀಡಾಂಗಣದಲ್ಲಿ ಸಾಗಿದ ಈ ಪಂದ್ಯದಲ್ಲಿ ಪಾಕಿಸ್ಥಾನ ಪಂದ್ಯದ ನಾಲ್ಕನೇ ದಿನವೇ ಜಯಭೇರಿ ಸಾಧಿಸಿತು. ಗೆಲ್ಲಲು 538 ರನ್‌ ಗಳಿಸುವ ಕಠಿನ ಸವಾಲು ಪಡೆದ ಆಸ್ಟ್ರೇಲಿಯ ತಂಡವು ಮೊಹಮ್ಮದ್‌ ಅಬ್ಟಾಸ್‌ ದಾಳಿಗೆ ತತ್ತರಿಸಿ ಕೇವಲ 164 ರನ್ನಿಗೆ ಸರ್ವಪತನ ಕಂಡಿತು. ಮತ್ತೆ ಬಿಗು ದಾಳಿ ಸಂಘಟಿಸಿದ ಅಬ್ಟಾಸ್‌ 62 ರನ್ನಿಗೆ 5 ವಿಕೆಟ್‌ ಕಿತ್ತರು. ಅವರು ಮೊದಲ ಇನ್ನಿಂಗ್ಸ್‌ನಲ್ಲೂ 5 ವಿಕೆ‌ಟ್‌ ಹಾರಿಸಿದ್ದರು. ಅಬ್ಟಾಸ್‌ಗೆ ಉತ್ತಮ ರೀತಿಯಲ್ಲಿ ಬೆಂಬಲ ನೀಡಿದ ಯಾಸಿರ್‌ ಶಾ 45 ರನ್ನಿಗೆ 3 ವಿಕೆಟ್‌ ಉರುಳಿಸಿದರು.

ಆರನ್‌ ಫಿಂಚ್‌, ಟ್ರ್ಯಾವಿಸ್‌ ಹೆಡ್‌, ಮಾರ್ನಸ್‌ ಲಾಬುಸ್‌ಚಾಗ್ನೆ ಮತ್ತು ಮಿಚೆಲ್‌ ಸ್ಟಾರ್ಕ್‌ ಮಾತ್ರ ಪಾಕ್‌ ದಾಳಿಯನ್ನು ಸ್ವಲ್ಪಮಟ್ಟಿಗೆ ಎದುರಿಸಲು ಸಮರ್ಥರಾದರು. ಈ ನಾಲ್ವರೂ ಎರಡಂಕೆಯ  ಮೊತ್ತ ಹೊಡೆದರು. 43 ರನ್‌ ಗಳಿಸಿದ ಲಾಬುಸ್‌ಚಾಗ್ನೆ ತಂಡದ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು. ಮೊದಲು ಬ್ಯಾಟಿಂಗ್‌ ಮಾಡಿದ್ದ ಪಾಕಿಸ್ಥಾನ 282 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ಆಸ್ಟ್ರೇಲಿಯ 145 ರನ್ನಿಗೆ ಸರ್ವಪತನ ಕಂಡಿತ್ತು. 137 ರನ್‌ ಮೊದಲ ಇನ್ನಿಂಗ್ಸ್‌ ಮುನ್ನಡೆ ಪಡೆದಿದ್ದ ಪಾಕಿಸ್ಥಾನ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭರ್ಜರಿಯಾಗಿ ಆಡಿ 9 ವಿಕೆಟಿಗೆ 400 ರನ್‌ ಪೇರಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿತ್ತು. 99 ರನ್‌ ಗಳಿಸಿ ಔಟಾದ ಬಾಬರ್‌ ಅಜಂ ಶತಕ ಬಾರಿಸಲು ವಿಫ‌ಲರಾಗಿ ನಿರಾಶೆ ಅನುಭವಿಸಿದರು. ನಾಯಕ ಸರ್ಫರಾಜ್‌  81 ರನ್‌ ಹೊಡೆದರು. 

ಸಂಕ್ಷಿಪ್ತ ಸ್ಕೋರು
ಪಾಕಿಸ್ಥಾನ 282 ಮತ್ತು 9 ವಿಕೆಟಿಗೆ 400 ಡಿಕ್ಲೇರ್‌x; ಆಸ್ಟ್ರೇಲಿಯ 145 ಮತ್ತು 164 (ಆರನ್‌ ಫಿಂಚ್‌ 31, ಹೆಡ್‌ 36, ಲಾಬುಸ್‌ಚಾಗ್ನೆ 43, ಸ್ಟಾರ್ಕ್‌ 28, ಮೊಹಮ್ಮದ್‌ ಅಬ್ಟಾಸ್‌ 62ಕ್ಕೆ 5, ಯಾಶಿರ್‌ ಷಾ 45ಕ್ಕೆ 3). ಪಂದ್ಯಶ್ರೇಷ್ಠ: ಮೊಹಮ್ಮದ್‌ ಅಬ್ಟಾಸ್‌

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.