ಶ್ರೀಕಾಂತ್‌, ಸೈನಾ ಕ್ವಾರ್ಟರ್‌ಫೈನಲಿಗೆ


Team Udayavani, Oct 20, 2018, 9:14 AM IST

20.jpg

ಒಡೆನ್ಸೆ (ಡೆನ್ಮಾರ್ಕ್‌): ತನ್ನ ಬಾಳ್ವೆಯಲ್ಲಿ ಎರಡನೇ ಬಾರಿ ಶ್ರೇಷ್ಠ ಆಟಗಾರ ಲಿನ್‌ ಡ್ಯಾನ್‌ ಅವರನ್ನು ಉರುಳಿಸಿದ ಕಿದಂಬಿ ಶ್ರೀಕಾಂತ್‌ ಅವರು ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟದ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ್ದಾರೆ. ಕ್ವಾರ್ಟರ್‌ಫೈನಲ್‌ನಲ್ಲಿ ಅವರು ತನ್ನ ದೇಶದವರೇ ಆದ ಸಮೀರ್‌ ವರ್ಮ ಅವರ ಸವಾಲನ್ನು ಎದುರಿಸಲಿದ್ದಾರೆ. 

ಮೊದಲ ಗೇಮ್‌ ಕಳೆದು ಕೊಂಡರೂ ವಿಚಲಿತರಾಗದ ವಿಶ್ವದ ಆರನೇ ರ್‍ಯಾಂಕಿನ ಶ್ರೀಕಾಂತ್‌ ಅವರು ವಿಶ್ವದ 14ನೇ ರ್‍ಯಾಂಕಿನ ಡ್ಯಾನ್‌ ಅವರನ್ನು 18-21, 21-17, 21-16 ಗೇಮ್‌ಗಳಿಂದ ಉರುಳಿಸಿ ಮುನ್ನಡೆದರು. ಎರಡು ಬಾರಿಯ ಒಲಿಂಪಿಕ್‌ ಚಿನ್ನ ಮತ್ತು ಐದು ಬಾರಿಯ ವಿಶ್ವ ಚಾಂಪಿಯನ್‌ ಆಗಿರುವ ಡ್ಯಾನ್‌ ಈಗಲೂ ಶ್ರೇಷ್ಠ ಆಟವಾಡುತ್ತಿದ್ದಾರೆ. ಅವರಿಬ್ಬರು 5 ಬಾರಿ ಮುಖಾಮುಖೀಯಾಗಿದ್ದು ಈ ಹಿಂದಿನ ಹೋರಾಟದಲ್ಲಿ (2016ರ ರಿಯೋ ಒಲಿಂಪಿಕ್ಸ್‌ನ ಕ್ವಾರ್ಟರ್‌ಫೈನಲ್‌ ಪಂದ್ಯ) ಡ್ಯಾನ್‌ ಜಯಭೇರಿ ಬಾರಿಸಿದ್ದರು. 2014ರಲ್ಲಿ ಡ್ಯಾನ್‌ ಅವರನ್ನು ಶ್ರೀಕಾಂತ್‌ ಮೊದಲ ಬಾರಿ ಸೋಲಿಸಿ ಚೀನ ಓಪನ್‌ನ ಪ್ರಶಸ್ತಿ ಎತ್ತಿದ್ದರು. ಶ್ರೀಕಾಂತ್‌ ಅವರ ಕ್ವಾರ್ಟರ್‌ಫೈನಲ್‌ ಎದುರಾಳಿ ಸಮೀರ್‌ ವರ್ಮ ತನ್ನ ಪಂದ್ಯದಲ್ಲಿ ಇಂಡೋನೇಶ್ಯದ ಜೋನಾಥನ್‌ ಕ್ರಿಸ್ಟಿ ಅವರನ್ನು ಕೆಡಹಿದ್ದರು.

ಸೈನಾ ಕ್ವಾರ್ಟರ್‌ಫೈನಲಿಗೆ
ವನಿತಾ ಸಿಂಗಲ್ಸ್‌ನಲ್ಲಿ ಸೈನಾ ನೆಹ್ವಾಲ್‌ ವಿಶ್ವದ ಎರಡನೇ ರ್‍ಯಾಂಕಿನ ಅಕಾನೆ ಯಮಗುಚಿ ಅವರನ್ನು 21-15, 21-17 ಗೇಮ್‌ಗಳಿಂದ ಕೆಡಹಿ ಕ್ವಾರ್ಟರ್‌ಫೈನಲ್‌ ತಲುಪಿದ್ದಾರೆ. ಕಳೆದ 4 ವರ್ಷಗಳಲ್ಲಿ ಇದು ಸೈನಾ ಯಮಗುಚಿ ವಿರುದ್ಧ ಮೊದಲ ಗೆಲುವು ಆಗಿದೆ. ಕ್ವಾರ್ಟರ್‌ಫೈನಲ್‌ನಲ್ಲಿ ಸೈನಾ ಅವರು ಎಂಟನೇ ಶ್ರೇಯಾಂಕದ ನವೋಮಿ ಒಕುಹಾರ ಅವರನ್ನು ಎದುರಿಸಲಿದ್ದಾರೆ. ವನಿತಾ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ ಮತ್ತು ಎನ್‌. ಸಿಕ್ಕಿ ರೆಡ್ಡಿ ಅವರು ಅಗ್ರ ಶ್ರೇಯಾಂಕದ ಯೂಕಿ ಫ‌ುಕುಶಿಮಾ ಮತ್ತು ಸಯಾಕಾ ಹಿರೋಟಾ ಅವರ ಸವಾಲಿಗೆ ಉತ್ತರಿಸಲಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.