ಆಕರ್ಷಕ ಪಂಜಿನ ಕವಾಯತು


Team Udayavani, Oct 20, 2018, 11:44 AM IST

m3-akarshaka.jpg

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಆಕರ್ಷಕ ಪಂಜಿನ ಕವಾಯತು ನೆರೆದಿದ್ದ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ನೀಡಿತು. ದಸರೆಯ ಕೊನೆಯ ಕಾರ್ಯಕ್ರಮವಾಗಿ ನಡೆದ ಕಂಜಿನ ಕವಾಯತು ಕಾರ್ಯಕ್ರಮದೊಂದಿಗೆ ವೈಭವದ ದಸರಾ ಮಹೋತ್ಸವಕ್ಕೆ ಸಂಭ್ರಮದ ತೆರೆಬಿದ್ದಿತು. 

ಚಿನ್ನದ ಅಂಬಾರಿ ಹೊತ್ತ ಅರ್ಜುನ ಬನ್ನಿಮಂಟಪ ತಲುಪುತ್ತಿದ್ದಂತೆ ಪಂಜಿನ ಕವಾಯತು ಕಾರ್ಯಕ್ರಮದ ಸಂಭ್ರಮಕ್ಕೆ ಚಾಲನೆ ದೊರೆಯಿತು. ರಾತ್ರಿ 8 ಗಂಟೆಗೆ ಆರಂಭಗೊಂಡ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ನಗರ ಪೊಲೀಸ್‌ ಆಯುಕ್ತ ಎ.ಸುಬ್ರಹ್ಮಣ್ಯೇಶ್ವರ ರಾವ್‌ ಬೆಂಗಾವಲಿನಲ್ಲಿ ವಿವಿಧ ತುಕಡಿಗಳ ಪರಿಶೀಲನೆ ನಡೆಸಿದರು. 

ಇದಾದ ನಂತರ ಮೈದಾನದಲ್ಲಿ 21 ಕುಶಾಲ ತೋಪು ಸಿಡಿಸುವ ಮೂಲಕ ರಾಷ್ಟ್ರ ಗೌರವ ಸಮರ್ಪಿಸಲಾಯಿತು. ಬಳಿಕ ಪೊಲೀಸ್‌ ತುಕಡಿಗಳು, ಎನ್‌ಸಿಸಿಯ ಭೂಸೇನೆ, ವಾಯು ಸೇನೆ, ನೌಕಾದಳ ಹಾಗೂ ಅಶ್ವರೋಹಿ ಪಡೆ ಸಿಬ್ಬಂದಿ ಪೊಲೀಸ್‌ ವಾದ್ಯವೃಂದ ಹಿಮ್ಮೇಳದೊಂದಿಗೆ ಶಿಸ್ತುಬದ್ಧ ಪಥಸಂಚಲನ ನಡೆಸಿ ನೋಡುಗರನ್ನು ಚಕಿತಗೊಳಿಸಿದರು. ನಂತರ ಗಣೇಶ್‌ ಈಶ್ವರ್‌ ಭಟ್‌ ನೇತೃತ್ವದ ಗಾಯಕರ ತಂಡ ನಾಡಗೀತೆ ಪ್ರಸ್ತುತ ಪಡೆಸಿದರು. 

“ಶ್ವೇತಾಶ್ವ’ ಮ್ಯಾಜಿಕ್‌: ಪಂಜಿನ ಕವಾಯತು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಸಾಹಸಮಯ ಬೈಕ್‌ ರೈಡಿಂಗ್‌ ನೆರೆದಿದ್ದ ಪ್ರೇಕ್ಷಕರಿಗೆ ರೋಮಾಂಚನಕಾರಿ ಅನುಭವ ಉಣಬಡಿಸಿತು. “ಶ್ವೇತಾಶ್ವ’ ಹೆಸರಿನ ತಂಡದಲ್ಲಿದ್ದ ಭೂದಳದ 30 ಮಂದಿ ಯೋಧರು ತಮ್ಮ ಮಿಂಚಿನ ವೇಗದ ರಾಯಲ್‌ ಎನ್ಫಿàಲ್ಡ್‌ ಬೈಕ್‌ಗಳ ಮೂಲಕ ನೀಡಿದ ಸಾಹಸ ಪ್ರದರ್ಶನ ಎಲ್ಲರ ಹುಬ್ಬೇರುವಂತೆ ಮಾಡಿತು.

ಮೈದಾನದಲ್ಲಿ ಅಂದಾಜು 20 ನಿಮಿಷಗಳ ಸಾಹಸಮಯ ಬೈಕ್‌ ರೈಡಿಂಗ್‌ ನಡೆಸಿದ ಯೋಧರು ತರಾವರಿ ಕಸರತ್ತು ಪ್ರದರ್ಶಿಸುವ ಮೂಲಕ ಮೈನವಿರೇಳಿಸುವಂತೆ ಮಾಡಿದರು. ಏಳು ಬೈಕ್‌ಗಳ ಮೇಲೆ 30 ಜನ ಯೋಧರು ರಾಷ್ಟ್ರಧ್ವಜ ಹಿಡಿದು ಸಾಗಿದ್ದು, ಜನರ ಪ್ರಶಂಸೆಗೆ ಪಾತ್ರವಾಯಿತು. 

ಟೆಂಟ್‌ಪೆಗ್ಗಿಂಗ್‌ ಸೆಳೆತ: ನಂತರ ಅಶ್ವರೋಹಿ ಪಡೆಯ ಸದಸ್ಯರು ನಡೆಸಿಕೊಟ್ಟ ಟೆಂಟ್‌ ಪೆಗ್ಗಿಂಗ್‌ ಎಲ್ಲರನ್ನು ರಂಜಿಸಿತು. 15 ನಿಮಿಷಗಳ ಕಾಲ ನಡೆದ ಟೆಂಡ್‌ ಪೆಗ್ಗಿಂಗ್‌ ಪ್ರದರ್ಶನದಲ್ಲಿ ಪೊಲೀಸರು ಶರವೇಗದಲ್ಲಿ ಬಂದು ಟೆಂಟ್‌ ಪೆಗ್ಗಿಂಗ್‌ ಮಾಡುವ ಮೂಲಕ ಸಾಹಸ ಪ್ರದರ್ಶಿಸಿದರು. ವೇಗ ಮತ್ತು ಅಶ್ವರೋಹಿಪಡೆ ಸಿಬ್ಬಂದಿಯ ಚಾಕಚಕ್ಯತೆಗೆ ಸಾಕ್ಷಿಯಾಯಿತು. 

ಸಾಂಸ್ಕೃತಿಕ ಮೆರಗು: ರೋಮಾಂಚನಕಾರಿ ಬೈಕ್‌ ರೈಡಿಂಗ್‌, ಟೆಂಟ್‌ಪೆಗ್ಗಿಂಗ್‌ ಪ್ರದರ್ಶನದ ನಡುವೆ ಬನ್ನಿಮಂಟಪದ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಿತು. ಕಲಾತಂಡಗಳ ಸದಸ್ಯರು, ಮಕ್ಕಳು ವಿವಿಧ ಹಾಡುಗಳಿಗೆ ಹೆಜ್ಜೆಹಾಕುವ ಮೂಲಕ ಎಲ್ಲರನ್ನು ರಂಜಿಸಿದರು. 

ಪಂಜಿನ ಕವಾಯತು: ಬನ್ನಿಮಂಟಪ ಮೈದಾನದಲ್ಲಿ ನಡೆದ ಎಲ್ಲಾ ಕಾರ್ಯಕ್ರಮಗಳು ಮುಕ್ತಾಯಗೊಂಳ್ಳುತ್ತಿದ್ದಂತೆ ಶತಮಾನಗಳ ಇತಿಹಾಸವಿರುವ ಪಂಜಿನ ಕವಾಯತು ಪ್ರದರ್ಶನ ರೋಮಾಂಚನಗೊಳಿಸಿತು. ರಾಜ್ಯ ಪೊಲೀಸ್‌ ಪಡೆಯ 300ಕ್ಕೂ ಹೆಚ್ಚು ಪೊಲೀಸ್‌ ಪ್ರಶಿಕ್ಷಣಾರ್ತಿಗಳು ಆಕರ್ಷಕ ಪ್ರದರ್ಶನ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಕವಾಯತಿನಲ್ಲಿ ಮೈಸೂರು ದಸರಾ, ಕರ್ನಾಟಕ ಪೊಲೀಸ್‌, ವೆಲ್ಕಮ್‌ ಟು ಆಲ್‌, ಜೈ ಚಾಮುಂಡಿ, ಜೈ ಹಿಂದ್‌ ಹಾಗೂ ಸೀ ಯೂ ಇನ್‌ 2019 ಎಂಬ ಅಕ್ಷರಗಳನ್ನು ರೂಪಿಸುವ ಮೂಲಕ ದಸರಾಗೆ ಅದ್ಧೂರಿ ತೆರೆ ಎಳೆದರು. ಸಮಾರಂಭದಲ್ಲಿ ದಸರಾ ಉದ್ಘಾಟಕರಾದ ಡಾ. ಸುಧಾಮೂರ್ತಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಪರಮೇಶ್ವರ್‌, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಇತರರಿದ್ದರು. 

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.