ದಸರಾ ವೈಭವದಲ್ಲಿ ಮಿಂದೆದ್ದ ಮೈಸೂರು


Team Udayavani, Oct 20, 2018, 11:44 AM IST

m1-dasdara.jpg

ಮೈಸೂರು: ಅರಮನೆ ಆವರಣದಿಂದ ಬನ್ನಿಮಂಟಪ ಮೈದಾನದವರೆಗೂ ಜಂಬೂಸವಾರಿ ಮೆರವಣಿಗೆ ಸಾಗಿದ ಮಾರ್ಗದ ಇಕ್ಕೆಲಗಳಲ್ಲಿ ದೇಶ-ವಿದೇಶಗಳಿಂದ ಬಂದಿದ್ದ ಪ್ರವಾಸಿಗರು, ಸ್ಥಳೀಯ ಸಾರ್ವಜನಿಕರು, ಅಕ್ಕಪಕ್ಕದ ಜಿಲ್ಲೆಗಳಿಂದ ಬಂದಿದ್ದ ಜನರು ಸೇರಿದಂತೆ ಲಕ್ಷಾಂತರ ಜನರು ಬೆಳಗ್ಗಿನಿಂದಲೇ ತಮ್ಮ ಕುಟುಂಬದೊಂದಿಗೆ ಇಕ್ಕೆಲಗಳಲ್ಲಿ ಬಂದು ನಿಂತು ದಸರಾ ವೈಭವವನ್ನು ಕಣ್ತುಂಬಿಕೊಂಡರು.

ಭಕ್ತಿ ಭಾವ ಮೆರೆದರು: ಅರ್ಜುನ ಹೊತ್ತು ತಂದ ಚಿನ್ನದ ಅಂಬಾರಿಯನ್ನು ಕಂಡು ಧನ್ಯತಾ ಭಾವದಿಂದ ಎದ್ದು ನಿಂತು ಕೈಮುಗಿದು, ಚಾಮುಂಡೇಶ್ವರಿ ದೇವಿ ಹಾಗೂ ಯದುವಂಶದ ಅರಸರಿಗೆ ಜೈಕಾರ ಕೂಗಿ ಭಕ್ತಿ ಭಾವ ಮೆರೆದರು. ರಸ್ತೆಯ ಇಕ್ಕೆಲಗಳಲ್ಲಿ ನಿಲ್ಲಲು ಜಾಗ ಸಿಗದ ಯುವಕರು ಅಲ್ಲಲ್ಲಿ ಮರ, ದೊಡ್ಡ ದೊಡ್ಡ ಕಟ್ಟಡಗಳು, ಮೊಬೈಲ್‌ ಟವರ್‌ಗಳನ್ನೇರಿ ಕುಳಿತು ಜಂಬೂಸವಾರಿಯನ್ನು ಕಣ್ತುಂಬಿಕೊಂಡರು.
 
ನಂದೀಧ್ವಜಕ್ಕೆ ಪೂಜೆ: ನಗರದ ಲಲಿತ್‌ ಮಹಲ್‌ ಹೋಟೆಲ್‌ನಿಂದ ಸಚಿವರು, ಶಾಸಕರು ಹಾಗೂ ತಮ್ಮ ಕುಟುಂಬದವರೊಂದಿಗೆ ಮಲ್ಟಿ ಆಕ್ಸಲ್‌ ವೋಲ್ವೋ ಬಸ್‌ನಲ್ಲಿ ಮಧ್ಯಾಹ್ನ 2.43ಕ್ಕೆ ಜಯಮಾರ್ತಾಂಡ ದ್ವಾರದ ಮೂಲಕ ಅರಮನೆ ಆವರಣಕ್ಕೆ ಬಂದಿಳಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಂದೀಧ್ವಜಕ್ಕೆ ಪೂಜೆ ಸಲ್ಲಿಸಿ, ಅರಮನೆ ಆವರಣಕ್ಕೆ ಕಾಲ್ನಡಿಗೆಯಲ್ಲೇ ಬಂದು ಕುಳಿತು ಜಂಬೂಸವಾರಿ ಮೆರವಣಿಗೆ ವೀಕ್ಷಿಸಿದರು.

ಗೌಡರ ಕುಟುಂಬ ಭಾಗಿ: ಮಾಜಿ ಪ್ರಧಾನಿ ದೇವೇಗೌಡ, ಚೆನ್ನಮ್ಮ ದೇವೇಗೌಡ, ದೇವೇಗೌಡರ ಇಬ್ಬರು ಪುತ್ರಿಯರು, ಅನಿತಾ ಕುಮಾರಸ್ವಾಮಿ ಸೇರಿದಂತೆ ಗೌಡರ ಕುಟುಂಬದ 20ಕ್ಕೂ ಹೆಚ್ಚು ಮಂದಿ ಅರಮನೆ ಆವರಣದಲ್ಲಿ ಗಣ್ಯರಿಗಾಗಿ ಹಾಕಿದ್ದ ಆಸನಗಳಲ್ಲಿ ಕುಳಿತು ಜಂಬೂಸವಾರಿ ವೀಕ್ಷಿಸಿದರು.

ಕೇಂದ್ರ ಸಚಿವರು ಭಾಗಿ: ಕೇಂದ್ರ ಸಚಿವರಾದ ಸುರೇಶ್‌ ಪ್ರಭು, ಸತ್ಪಾಲ್‌ ಮಹಾರಾಜ್‌ ಅವರೂ ತಮ್ಮ ಕುಟುಂಬದವರೊಂದಿಗೆ ಆಗಮಿಸಿ ಜಂಬೂಸವಾರಿ ವೀಕ್ಷಿಸಿದರು.

ಎದ್ದು ಹೊರಟ ಜನತೆ: ಮೈಸೂರು ದಸರಾ ಎಂದರೆ ಚಿನ್ನದ ಅಂಬಾರಿ, ತಾಯಿ ಚಾಮುಂಡೇಶ್ವರಿಯ ಬಗೆಗೆ ಈ ಭಾಗದ ಜನರಲ್ಲಿ  ಭಾವನಾತ್ಮಕತೆ ಇದೆ ಎಂಬುದನ್ನು ಜನ ಸಾಬೀತು ಮಾಡಿದರು. ಮೆರವಣಿಗೆಯ ಮಧ್ಯದಲ್ಲೇ ಅಂಬಾರಿ ಸಾಗಿದ್ದರಿಂದ ಚಿನ್ನದ ಅಂಬಾರಿಯನ್ನು ಕಣ್ತುಂಬಿಕೊಂಡು, ಚಾಮುಂಡೇಶ್ವರಿ ದೇವಿಗೆ ಕೈ ಮುಗಿದು, ಧನ್ಯತಾ ಭಾವದಿಂದ ತೆರಳಿದರು. ಹೀಗಾಗಿ ಅಂಬಾರಿಯ ಹಿಂದೆ ಸಾಗಿದ ಕಲಾ ತಂಡಗಳು, ಸ್ತಬ್ದಚಿತ್ರಗಳನ್ನು ನೋಡಲು ಜನರಲ್ಲಿ ಉತ್ಸಾಹ ಕಾಣಲಿಲ್ಲ. 

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.